ಉಡುಪಿ ರೆಡ್‌ಕ್ರಾಸ್‌ಗೆ ರಾಷ್ಟ್ರೀಯ ಸದಸ್ಯರ ಭೇಟಿ

KannadaprabhaNewsNetwork |  
Published : Sep 12, 2026, 02:45 AM IST
11ರೆಡ್‌ಕ್ರಾಸ್ | Kannada Prabha

ಸಾರಾಂಶ

ನವದೆಹಲಿಯ ಭಾರತೀಯ ರೆಡ್ ಕ್ರಾಸ್ ಸೊಸೈಟಿಯ ಆಡಳಿತ ಮಂಡಳಿಗೆ ಕರ್ನಾಟಕ ರಾಜ್ಯಪಾಲರಿಂದ ನೇಮಕವಾದ ಸದಸ್ಯರಾದ ಡಾ. ಮುರಳಿಮೋಹನ್ ಚೂಂತಾರು ಅವರು ಉಡುಪಿ ಜಿಲ್ಲಾ ರೆಡ್ ಕ್ರಾಸ್ ಶಾಖೆಗೆ ಭೇಟಿ ನೀಡಿ ಪರಿಶೀಲಿಸಿದರು.

ಉಡುಪಿ: ನವದೆಹಲಿಯ ಭಾರತೀಯ ರೆಡ್ ಕ್ರಾಸ್ ಸೊಸೈಟಿಯ ಆಡಳಿತ ಮಂಡಳಿಗೆ ಕರ್ನಾಟಕ ರಾಜ್ಯಪಾಲರಿಂದ ನೇಮಕವಾದ ಸದಸ್ಯರಾದ ಡಾ. ಮುರಳಿಮೋಹನ್ ಚೂಂತಾರು ಅವರು ಉಡುಪಿ ಜಿಲ್ಲಾ ರೆಡ್ ಕ್ರಾಸ್ ಶಾಖೆಗೆ ಭೇಟಿ ನೀಡಿ ಪರಿಶೀಲಿಸಿದರು. ಜಿಲ್ಲಾ ರೆಡ್ ಕ್ರಾಸ್ ಕಾರ್ಯದರ್ಶಿ ಡಾ. ಗಣನಾಥ ಎಕ್ಕಾರು ಅವರನ್ನು ಸ್ವಾಗತಿಸಿ, ಉಡುಪಿ ರೆಡ್ ಕ್ರಾಸ್ ಚಟುವಟಿಕೆಗಳ ಬಗ್ಗೆ ವಿವರಿಸಿದರು. ಡಾ. ಚೂಂತಾರು ಅವರು ಉಡುಪಿ ಜಿಲ್ಲಾ ರೆಡ್ ಕ್ರಾಸ್ ಚಟುವಟಿಕೆ ಹಾಗೂ ರೆಡ್ ಕ್ರಾಸ್ ಪ್ರಾಯೋಜಿತ ಜಿಲ್ಲಾ ವಿಕಲಚೇತನ ಪುನರ್ವಸತಿ ಕೇಂದ್ರದ ಕಾರ್ಯ ಚಟುವಟಿಕೆಗಳು ರಾಜ್ಯದಲ್ಲೆ ಮಾದರಿಯಾಗಿದೆ ಎಂದು ಮೆಚ್ಚುಗೆ ವ್ಯಕ್ತ ಪಡಿಸಿದರು. ಡಿಡಿಆರ್‌ಸಿ ನೋಡಲ್ ಅಧಿಕಾರಿ ಜಯಶ್ರೀ, ಮನಶಾಸ್ತ್ರಜ್ಞ ವೈಶಾಖ್ ವಾರಂಬಳ್ಳಿ, ಆಡಿಯೋಲಜಿಸ್ಟ್ ನೆಲಿಶಾ ಹಾಗೂ ರೆಡ್ ಕ್ರಾಸ್ ಮತ್ತು ಡಿಡಿಆರ್‌ಸಿ ಸಿಬ್ಬಂದಿಗಳು ಉಪಸ್ಥಿತರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಸಹಕಾರದಿಂದ ಜನಜೀವನ ಅಭಿವೃದ್ಧಿ: ರಾಬಿನ್ ದೇವಯ್ಯ
ರಾಮಕೃಷ್ಣರ ಸಾಹಿತ್ಯ ಕ್ಷೇತ್ರ ಕೊಡುಗೆ ಪರಿಚಯ ಅಗತ್ಯ: ನಾಗೇಂದ್ರಬಾಬು