ರೆಡ್ಡಿ ಕುಟುಂಬದ ಗನ್ ಮ್ಯಾನ್ ಪಿಸ್ತೂಲ್ ಕಳವು

KannadaprabhaNewsNetwork |  
Published : Oct 17, 2023, 12:45 AM IST

ಸಾರಾಂಶ

ಮಾಜಿ ಸಚಿವ ಜನಾರ್ದನ ರೆಡ್ಡಿ ಅವರ ಕುಟುಂಬದ ಗನ್‌ಮ್ಯಾನ್ ಬಾಲಮುಕುಂದ ಶುಕ್ಲಾ ಅವರ ಪಿಸ್ತೂಲ್ ಕಳ್ಳತನವಾಗಿದ್ದು, ಈ ಕುರಿತು ಕೌಲ್ ಬಜಾರ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕನ್ನಡಪ್ರಭ ವಾರ್ತೆ ಬಳ್ಳಾರಿ ಮಾಜಿ ಸಚಿವ ಜನಾರ್ದನ ರೆಡ್ಡಿ ಅವರ ಕುಟುಂಬದ ಗನ್‌ಮ್ಯಾನ್ ಬಾಲಮುಕುಂದ ಶುಕ್ಲಾ ಅವರ ಪಿಸ್ತೂಲ್ ಕಳ್ಳತನವಾಗಿದ್ದು, ಈ ಕುರಿತು ಕೌಲ್ ಬಜಾರ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ನಗರದ ವೀರನಗೌಡ ಕಾಲನಿಯಲ್ಲಿರುವ ತಮ್ಮ ಮನೆಯ ಬಾಗಿಲು ಗ್ರಿಲ್ ಮುರಿದು ಒಳ ಪ್ರವೇಶಿಸಿರುವ ಕಳ್ಳರು, ಬೆಡ್ ರೂಂನ ಗೂಡಿನಲ್ಲಿಟ್ಟಿದ್ದ ಸುಮಾರು ₹80 ಸಾವಿರ ಮೌಲ್ಯದ ಪಿಸ್ತೂಲ್ ಹಾಗೂ 6 ಜೀವಂತ ಗುಂಡುಗಳನ್ನು ಕದ್ದು ಪರಾರಿಯಾಗಿದ್ದಾರೆ ಎಂದು ಬಾಲಮುಕುಂದ ಶುಕ್ಲಾ ದೂರಿನಲ್ಲಿ ತಿಳಿಸಿದ್ದಾರೆ. ಬಾಲಮುಕುಂದ ಶುಕ್ಲಾ ಅವರು ಜನಾರ್ದನ ರೆಡ್ಡಿ ಪತ್ನಿ ಮತ್ತು ಮಗನ ಗನ್‌ಮ್ಯಾನ್ ಆಗಿ ಕಳೆದ ಎರಡು ವರ್ಷಗಳಿಂದ ಕೆಲಸ ಮಾಡುತ್ತಿದ್ದಾರೆ.

PREV

Recommended Stories

ಸರ್ಕಾರಿ ಶಾಲೆ ಕುಡಿವ ನೀರಿಗೆ ವಿಷ ಬೆರೆಸಿದ್ದಕ್ಕೆ ಸಿಎಂ ಗರಂ
ಡಾ.ರಾಜ್‌ಕುಮಾರ್‌ರ ನೆಚ್ಚಿನ ಸಹೋದರಿ ನಾಗಮ್ಮ ನಿಧನ