ಎಚ್ಐವಿ ಸೋಂಕಿತರ ಪ್ರಮಾಣದಲ್ಲಿ ಇಳಿಕೆ

KannadaprabhaNewsNetwork |  
Published : Nov 30, 2023, 01:15 AM IST
ಡಾ.ಸುವರ್ಣ ಕುಲಕರ್ಣಿ | Kannada Prabha

ಸಾರಾಂಶ

ಎಚ್ಐವಿ ಸೋಂಕಿತರ ಪ್ರಮಾಣದಲ್ಲಿ ಇಳಿಕೆ

ಕನ್ನಡಪ್ರಭ ವಾರ್ತೆ ಬಾಗಲಕೋಟೆ

ಜಿಲ್ಲೆಯಲ್ಲಿ ವರ್ಷದಿಂದ ವರ್ಷಕ್ಕೆ ಎಚ್.ಐ.ವಿ ಸೋಂಕಿತರ ಪ್ರಮಾಣದಲ್ಲಿ ಇಳಿಮುಖವಾಗುತ್ತಿದ್ದು, ಕಳೆದ ವರ್ಷಕ್ಕೆ ಹೋಲಿಸಿದರೆ ಸಾಮಾನ್ಯರಲ್ಲಿ ಶೇ.1.15 ರಿಂದ ಶೇ.0.76ಕ್ಕೆ ಹಾಗೂ ಗರ್ಭಿಣಿಯರಲ್ಲಿ ಶೇ.0.06 ರಿಂದ ಶೇ.0.05ಕ್ಕೆ ಇಳಿಮುಖವಾಗಿರುವುದು ಕಂಡುಬಂದಿದೆ ಎಂದು ಜಿಲ್ಲಾ ಏಡ್ಸ್ ನಿಯಂತ್ರಣಾಧಿಕಾರಿ ಡಾ.ಸುವರ್ಣ ಕುಲಕರ್ಣಿ ತಿಳಿಸಿದ್ದಾರೆ.

ಜಿಲ್ಲೆಯಲ್ಲಿ ಒಟ್ಟು 12 ಎಚ್ಐವಿ ಸಮಾಲೋಚನೆ ಮತ್ತು ಪರೀಕ್ಷಾ ಕೇಂದ್ರಗಳು, 60 ಎಫ್ಐಸಿಟಿಸಿ ಕೇಂದ್ರಗಳು, ಖಾಸಗಿ ಸಹಭಾಗಿತ್ವದಲ್ಲಿ 32 ಕೆಂದ್ರಗಳಿವೆ. 4 ಎಆರ್‌ಟಿ ಕೇಂದ್ರಗಳು, 3 ಲೈಂಗಿಕ ರೋಗ ಪತ್ತೆ ಕೇಂದ್ರ (ಸುರಕ್ಷಾ ಕ್ಲಿನಿಕ್) ಗಳಿದ್ದು, ಜಿಲ್ಲಾ ಆಸ್ಪತ್ರೆ, ಮುಧೋಳ ಮತ್ತು ಜಮಖಂಡಿಯಲ್ಲಿ ತಲಾ ಒಂದು ಇವೆ. ಮೂರು ಗುರಿ ಆಧಾರಿತ ಕಾರ್ಯಕ್ರಮ, 2 ಸಮುದಾಯ ಆರೋಗ್ಯ ಆರೈಕೆ ಕೇಂದ್ರಗಳು, 11 ರಕ್ತನಿಧಿ ಕೇಂದ್ರಗಳಿದ್ದು, ಅದರಲ್ಲಿ ಒಂದು ಸರ್ಕಾರಿ, 10 ಖಾಸಗಿ ರಕ್ತನಿಧಿ ಕೇಂದ್ರಗಳಿವೆ. ಸದ್ಯ ಜಿಲ್ಲೆಯಲ್ಲಿ 17342 ಜನ ಎ.ಆರ್.ಟಿ ಕೇಂದ್ರಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಸೋಂಕಿತರ ಪ್ರಮಾಣದಲ್ಲಿ ಕಳೆದ ಸಾಲಿನಿಂದ ಅಕ್ಟೋಬರ್-23ರ ಅಂತ್ಯಕ್ಕೆ ಬಾಗಲಕೋಟೆ ತಾಲೂಕಿನಲ್ಲಿ ಸಾಮಾನ್ಯರಲ್ಲಿ ಶೇ.0.84 ರಿಂದ 0.59ಕ್ಕೆ ಇಳಿಕೆಯಾಗಿದ್ದರೆ, ಗರ್ಭಿಣಿಯರಲ್ಲಿ ಶೇ.0.7 ರಿಂದ 0.8ಕ್ಕೆ ಏರಿಕೆಯಾಗಿದೆ, ಜಮಖಂಡಿ-ಸಾಮಾನ್ಯರಲ್ಲಿ ಶೇ.1.36 ರಿಂದ ಶೇ.1.1, ಗರ್ಭಿಣಿಯರಲ್ಲಿ ಶೇ.0.06 ರಿಂದ ಶೇ.0.3, ಮುಧೋಳ-ಸಾಮಾನ್ಯರಲ್ಲಿ ಶೇ.1.64 ರಿಂದ ಶೇ.1.06ಕ್ಕೆ, ಗರ್ಭಿಣಿಯರಲ್ಲಿ ಶೇ.0.12 ರಿಂದ ಶೇ.0.03, ಬಾದಾಮಿ-ಸಾಮಾನ್ಯರಲ್ಲಿ ಶೇ.0.49 ರಿಂದ ಶೇ.0.64ಕ್ಕೆ, ಗರ್ಭಿಣಿಯರಲ್ಲಿ ಶೇ.0.03 ರಿಂದ ಶೇ.0.6ಕ್ಕೆ ಏರಿಕೆಯಾಗಿದೆ. ಹುನಗುಂದ-ಸಾಮಾನ್ಯರಲ್ಲಿ ಶೇ.0.43 ರಿಂದ ಶೇ.0.38ಕ್ಕೆ ಇಳಿಕೆಯಾದರೆ, ಗರ್ಭಿಣಿಯರಲ್ಲಿ ಶೇ.0.03 ರಿಂದ ಶೇ.0.04ಕ್ಕೆ ಏರಿಯಾಗಿದೆ. ಬೀಳಗಿ ಸಾಮಾನ್ಯರಲ್ಲಿ ಶೇ.1.04 ರಿಂದ ಶೇ.0.83ಗೆ ಇಳಿಕೆಯಾದರೆ, ಗರ್ಭಿಣಿಯರಲ್ಲಿ ಶೇ.0.06 ರಿಂದ ಶೇ.0.13ಕ್ಕೆ ಏರಿಕೆಯಾಗಿದೆ. ಒಟ್ಟಾರೆಯಾಗಿ ಜಿಲ್ಲೆಯ ಸೋಂಕಿನ ಪ್ರಮಾಣದಲ್ಲಿ ಇಳಿಕೆ ಕಂಡುಬಂದಿದೆ. ಜಿಲ್ಲೆಯಲ್ಲಿ ಎಚ್ಐವಿ ನಿಯಂತ್ರಣಕ್ಕಾಗಿ ಜಿಲ್ಲಾ ಮಟ್ಟದ ಕಾಲೇಜು ವಿದ್ಯಾರ್ಥಿಗಳಿಗೆ, ಮ್ಯಾರಥಾನ್, ನಾಟಕ ಸ್ಪರ್ಧೆ ರೀಲ್ಸ್ ಸ್ಪರ್ಧೆ, ರೆಡ್ ರಿಬ್ಬನ್ ಕ್ಲಬ್ ಕಾರ್ಯ ಚಟುವಟಿಕೆಗಳು, 260 ಪ್ರೌಢಶಾಲೆ ಮತ್ತು 60 ಪದವಿ ಪೂರ್ವ ಕಾಲೇಜು ವಿದ್ಯಾರ್ಥಿಗಳಿಗೆ ಹದಿಹರೆಯದ ಶಿಕ್ಷಣ, ರಸಪ್ರಶ್ನೆ ಕಾರ್ಯಕ್ರಮ, ರಕ್ತದಾನ ಶಿಬಿರ, ರಕ್ತದಾನಿಗಳ ದಿನಾಚರಣೆ, ಹೋಡ್ಲಿಂಗ್ಸ್, ಗೋಡೆ ಬರಹ ಪಂಚಾಯತಿ ಸದಸ್ಯರಿಗೆ ಮಾಹಿತಿ ಕಾರ್ಯಾಗಾರ, ಕೈಗಾರಿಕೆ ಕಾರ್ಮಿಕರಿಗೆ ಅರಿವು ಕಾರ್ಯಾಗಾರ ಹಾಗೂ ರೇಡಿಯೋ ಕಾರ್ಯಕ್ರಮಗಳ ಮೂಲಕ ಅರಿವು ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ವಿಶ್ವ ಆರೋಗ್ಯ ಸಂಸ್ಥೆ 1988 ರಿಂದ ಡಿಸೆಂಬರ್ 1ನ್ನು ವಿಶ್ವ ಏಡ್ಸ್ ದಿನವನ್ನಾಗಿ ಆಯೋಜಿಸುತ್ತಿದ್ದು, 2011 ರಿಂದ ಎಚ್ಐವಿ/ಏಡ್ಸ್ ಸೋಂಕನ್ನು ಸೊನ್ನೆಗೆ ತರಲು ಎಚ್ಐವಿ/ಏಡ್ಸ್‌ನಿಂದ ಉಂಟಾಗುತ್ತಿರುವ ಸಾವನ್ನು ಸೊನ್ನೆಗೆ ತರಲು ಹಲವು ಕಾರ್ಯಕ್ರಮ ರೂಪಿಸುತ್ತಿದೆ. ಈ ವರ್ಷ ಎಚ್ಐವಿ ಸೋಂಕಿನ ತಡೆಗಾಗಿ ಸಮುದಾಯಗಳು ಮುನ್ನಡೆಸಲಿ ಎಂಬ ಘೋಷಣೆಯಡಿ ಏಡ್ಸ್ ದಿನ ಆಚರಿಸಲಾಗುತ್ತಿದೆ. ಎಚ್ಐವಿ ಸೋಂಕಿತರ ಜೀವನದಲ್ಲಿ, ಸಮಾಜದಲ್ಲಿ ಹಾಗೂ ವಿಶ್ವದಲ್ಲಿ ಇತರೆಡೆ ಆಗುತ್ತಿರುವ ಆಗು-ಹೋಗುಗಳ ಬಗ್ಗೆ ನಾವೆಲ್ಲ ತಿಳಿಯುವ ಅವಕಾಶ ವಿಶ್ವ ಏಡ್ಸ್ ದಿನವಾಗಿದೆ ಎಂದು ಜಿಲ್ಲಾ ಏಡ್ಸ ನಿಯಂತ್ರಣಾಧಿಕಾರಿಗಳು ತಿಳಿಸಿದ್ದಾರೆ. ಬಾಕ್ಸ್ . . .ವಿಶ್ವ ಏಡ್ಸ್ ದಿನ: ಜಾಗೃತಿ ಜಾಥಾ

ಡಿಸೆಂಬರ್‌ 1ರಂದು ವಿಶ್ವ ಏಡ್ಸ್ ದಿನಾಚರಣೆ ಅಂಗವಾಗಿ ಜಿಲ್ಲಾಡಳಿತ, ಜಿಪಂ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಜಿಲ್ಲಾ ಏಡ್ಸ್ ಪ್ರತಿಬಂಧ ಹಾಗೂ ನಿಯಂತ್ರಣ ಘಟಕ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಇತರೆ ಸಂಘ ಸಂಸ್ಥೆಗಳ ಸಹಯೋಗದಲ್ಲಿ ಜಾಗೃತಿ ಜಾಥಾ ಹಮ್ಮಿಕೊಳ್ಳಲಾಗಿದೆ. ಅಂದು ಬೆಳಗ್ಗೆ 10ಕ್ಕೆ ಜಿಲ್ಲಾಡಳಿತ ಭವನದಿಂದ ಜಾಗೃತಿ ಜಾಥಾ ಪ್ರಾರಂಭವಾಗಿ ನವನಗರದ ವಿವಿಧ ಕಡೆ ಸಂಚರಿಸಿ ಜಿಲ್ಲಾ ಆಸ್ಪತ್ರೆಗೆ ಮುಕ್ತಾಯಗೊಳ್ಳಲಿದೆ. ನಂತರ 11 ಗಂಟೆಗೆ ವಿದ್ಯಾಗಿರಿಯ ಬಸವೇಶ್ವರ ಎಂಜಿನಿಯರಿಂಗ್ ಕಾಲೇಜಿನಲ್ಲಿ ವೇದಿಕೆ ಕಾರ್ಯಕ್ರಮ ಜರುಗಲಿದೆ.

-(ಫೋಟೋ 29ಬಿಕೆಟಿ9, ಜಿಲ್ಲಾ ಏಡ್ಸ್ ನಿಯಂತ್ರಣಾಧಿಕಾರಿ ಡಾ.ಸುವರ್ಣ ಕುಲಕರ್ಣಿ)

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಪ್ರತಿಯೊಬ್ಬ ವ್ಯಾಪಾರಸ್ಥ ಜಿಎಸ್‌ಟಿ ಅಡಿಯಲ್ಲೇ ವ್ಯವಹರಿಸಿ: ಡಾ.ಕಿಶೋರ ಭಟ್ಟ
ಬಸವತತ್ವ ಪಾಲನೆಯಿಂದ ವಿಶ್ವಮಾನವರಾಗಲು ಸಾಧ್ಯ: ಸಚಿವ ತಿಮ್ಮಾಪುರ