ಕನ್ನಡಪ್ರಭ ವಾರ್ತೆ ತುಮಕೂರು
ತುಮಕೂರು ವಿಶ್ವವಿದ್ಯಾನಿಲಯದ ಮಹಿಳಾ ಅಧ್ಯಯನ ಕೇಂದ್ರವು ಗುರುವಾರ ಆಯೋಜಿಸಿದ್ದ ‘ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ’ ಕಾರ್ಯಕ್ರಮದಲ್ಲಿ ಮಾತನಾಡಿ, ಧರ್ಮವನ್ನು, ಯುವಮನಸ್ಸುಗಳನ್ನು ರಾಜಕೀಯ ಲಾಭಕ್ಕಾಗಿ ಬಳಸಿಕೊಳ್ಳಲಾಗುತ್ತಿದೆ. ರಾಜಕೀಯವಾಗಿ ಬಳಕೆಯಾಗುತ್ತಿರುವ ಸಮೂಹವನ್ನು ಅಜ್ಞಾನಿಗಳೆಂದೇ ಕರೆಯಬಹುದು ಎಂದರು.
ಲಿಂಗ ತಾರತಮ್ಯದ ಹಲವಾರು ಅಡೆತಡೆಗಳನ್ನು ಮುರಿದು, ತಮ್ಮ ಹಕ್ಕುಗಳಿಗಾಗಿ ಶ್ರಮಿಸಿ, ರಾಜಕೀಯ, ಕಲೆ, ಸಾಹಿತ್ಯ, ವಿಜ್ಞಾನ, ಕಾನೂನು ಇತ್ಯಾದಿ ಕ್ಷೇತ್ರಗಳಲ್ಲಿ ಪ್ರಗತಿ ಸಾಧಿಸಿರುವ ಹೆಣ್ಣು ಸಂಸ್ಕಾರದ, ಸಂಸಾರದ ಬೆನ್ನೆಲುಬಾಗಿದ್ದಳು. ಕಾಲ ಬದಲಾದಂತೆ, ಆಧುನಿಕತೆಯ ಅಂಧಕಾರದಲ್ಲಿ ವಿವಿಧ ರೀತಿಯಲ್ಲಿ ಬಳಕೆಯಾಗುತ್ತಿದ್ದಾಳೆ ಎಂದು ಕಳವಳ ವ್ಯಕ್ತಪಡಿಸಿದರು.ವರದಿಯ ಪ್ರಕಾರ, ಭಾರತದಲ್ಲಿ ಮಹಿಳಾ ಸಾಕ್ಷರತೆಯ ಪ್ರಮಾಣ 70.3% ರಷ್ಟಿದೆ. ಇದು 100% ಆಗುವುದು ಯಾವಾಗ? ಮೂಲ ಹಕ್ಕುಗಳು ಸಮಾನವಾಗಿ ಇರುವಾಗಲೂ ಸಹ, ಆ ಹಕ್ಕುಗಳನ್ನು ಪಡೆಯುವುದರಲ್ಲಿ ಮಹಿಳೆ ಏಕೆ ಹಿಂದೆ ಬಿದ್ದಿದ್ದಾಳೆ ಎಂಬ ಪ್ರಶ್ನೆ ನಮ್ಮಲ್ಲಿ ಮೂಡಬೇಕು ಎಂದರು.
ಕುಲಪತಿ ಪ್ರೊ.ಎಂ. ವೆಂಕಟೇಶ್ವರಲು ಮಾತನಾಡಿ, ಮಹಿಳೆಯರನ್ನು ಗೌರವಿಸುವುದೆಂದರೆ ಸಮಾನತೆಯನ್ನು, ಆರ್ಥಿಕ ಸ್ವಾತಂತ್ರ್ಯವನ್ನು, ವಿದ್ಯಾರ್ಹತೆಯನ್ನು ಕಲ್ಪಿಸಿಕೊಡುವುದು. ಕಠಿಣ ಪರಿಶ್ರಮ ಮತ್ತು ದೃಢ ಸಂಕಲ್ಪವನ್ನು ಬಳಸಿಕೊಂಡು ಉನ್ನತ ಸ್ಥಾನಕ್ಕೆ ಹೋರಾಡಿ, ಇಂದು ಅತ್ಯಂತ ಪ್ರಭಾವಿ ಸ್ಥಾನದಲ್ಲಿರುವವರು ಮಹಿಳೆಯರು.ಹೆಣ್ಣು ಮಕ್ಕಳ ಸಾಧನೆಗಳನ್ನು ಗುರುತಿಸುವಲ್ಲಿ, ಹೊರತರುವಲ್ಲಿ ಪುರುಷರ ಪಾತ್ರ ಮಹತ್ವದ್ದಾಗಬೇಕು ಎಂದರು.
ಕುಲಸಚಿವೆ ನಾಹಿದಾ ಜಮ್ಜಮ್ ಮಾತನಾಡಿ, ಹೆಣ್ಣಿಗೆ ಹೆಣ್ಣು ಶತ್ರುವಾಗಬಾರದು. ಆರ್ಥಿಕ ಭದ್ರತೆ, ವಿದ್ಯಾರ್ಹತೆ ಹೆಣ್ಣಿನ ಹಕ್ಕು. ಹೆಣ್ಣನ್ನುಅಪಾಯದ ನೆಲೆಯಲ್ಲಿ ನಡೆಸಿಕೊಳ್ಳುವ, ನೋಡುವ ಸಮಾಜದಿಂದ ದೇಶದ ಪ್ರಗತಿಯಾಗುವುದಿಲ್ಲ. ಸಂಸಾರದ ಶಕ್ತಿಯಾಗಿರುವ ಹೆಣ್ಣು ಸಮಾಜದ ಬಲವೂ ಹೌದು. ಪುರುಷ ಹೆಣ್ಣಿನ ಧ್ವನಿಯಾದಾಗ ಮಾತ್ರ ನಾಯಕನಾಗುತ್ತಾನೆ ಎಂದರು.‘ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ’ಯ ಅಂಗವಾಗಿ ವಿದ್ಯಾರ್ಥಿಗಳಿಂದ ಪೇಂಟಿಂಗ್ ಮತ್ತು ಪೋಸ್ಟರ್ ಪ್ರದರ್ಶನ ಮಾಡಲಾಯಿತು. ವಿದ್ಯಾರ್ಥಿಗಳಾದ ದೀಪಾಶ್ರೀ ಮತ್ತು ವೈಷ್ಣವಿ ಅವರು ವೈಟ್ ಲಿಫ್ಟಿಂಗ್, ಅರ್ಪಿತ ಅವರು ಯೋಗ ಪ್ರದರ್ಶನ ಮಾಡಿದರು. ವಿವಿಧ ಸ್ಪರ್ಧೆಗಳ ವಿಜೇತರಿಗೆ ಬಹುಮಾನ ವಿತರಣೆ ಮಾಡಲಾಯಿತು.
ವಿವಿ ಮಹಿಳಾ ಅಧ್ಯಯನ ಕೇಂದ್ರದ ಸಂಯೋಜಕಿ ಡಾ. ಜ್ಯೋತಿ ಪ್ರಾಸ್ತಾವಿಕ ನುಡಿಗಳನ್ನಾಡಿ ಸ್ವಾಗತಿಸಿದರು. ಪರೀಕ್ಷಾಂಗ ಕುಲಸಚಿವ ಪ್ರೊ.ಕೆ. ಪ್ರಸನ್ನಕುಮಾರ್, ದೈಹಿಕ ಶಿಕ್ಷಣ ವಿಭಾಗದ ನಿರ್ದೇಶಕಡಾ. ಎ. ಎಂ. ಮಂಜುನಾಥ ಉಪಸ್ಥಿತರಿದ್ದರು.ಉಪನ್ಯಾಸಕಿ ಆಶಾರಾಣಿ ಕೆ. ಬಗ್ಗನಡು ನಿರೂಪಿಸಿದರು. ಸಹಾಯಕ ಪ್ರಾಧ್ಯಾಪಕಿ ಅಶ್ವಿನಿ ಜಾನೆ ವಂದಿಸಿದರು.