ಕನ್ನಡಪ್ರಭ ವಾರ್ತೆ ದಾವಣಗೆರೆ
ನಗರದ ಜಿಲ್ಲಾಡಳಿತ ಭವನದಲ್ಲಿ ಸೋಮವಾರ ಜಿಲ್ಲಾ ಮಟ್ಟದ ನಾಗರಿಕ ನೋಂದಣಿ ಪದ್ಧತಿಯ ಸಮನ್ವಯ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ, ಜಿಲ್ಲೆಯಲ್ಲಿ ಮರಣ ಪ್ರಕರಣಗಳಲ್ಲಿ ಅನೇಕರಿಗೆ ಸರ್ಕಾರಿ ಸೌಲಭ್ಯ ಹೋಗುತ್ತಿದ್ದು, ಅದನ್ನೆಲ್ಲಾ ಪರಿಶೀಲಿಸಬೇಕು ಎಂದರು.
ಶೇ.100ರಷ್ಟು ಜನನ ಮತ್ತು ಮರಣ ನೋಂದಣಿಗೆ ಒತ್ತು ನೀಡಬೇಕು. ಆದರೆ, ಮರಣಧ ಬಗ್ಗೆ ಹೆಚ್ಚು ವರದಿಯಾಗುತ್ತಿಲ್ಲ. ಮರಣ ಪ್ರಮಾಣದಲ್ಲಿ ಮಹಿಳೆಯರ ಸಂಖ್ಯೆ ಕಡಿಮೆ ಇದ್ದು, ಪುರುಷರ ಸಂಖ್ಯೆ ಹೆಚ್ಚಾಗಿದೆ. ಜನನ-ಮರಣ ದಾಖಲೆಗಳು ಸಾರ್ವಜನಿಕರಿಗೆ ತಮ್ಮ ಶೈಕ್ಷಣಿಕ, ಆರ್ಥಿಕ ವ್ಯವಹಾರ, ಔದ್ಯೋಗಿಕ ಸೇರಿದಂತೆ ವಿವಿಧ ಕೆಲಸ, ಕಾರ್ಯಕ್ಕೆ ಅವಶ್ಯಕವಾಗಿದೆ. ಅವುಗಳ ನಿರ್ವಹಣೆಯನ್ನು ಸಮರ್ಪಕವಾಗಿ ಮಾಡಬೇಕು ಎಂದು ಸೂಚಿಸಿದರು.ಆಹಾರ ಮತ್ತು ನಾಗರಿಕರ ಸರಬರಾಜು ಇಲಾಖೆಯವರು ತಮ್ಮ ಮೂಲಕವೂ ಜನನ-ಮರಣದ ಮಾಹಿತಿ ನೀಡಬೇಕು. ಗ್ರಾಮೀಣ ಮಟ್ಟದಲ್ಲಿ ಗ್ರಾಮ ಆಡಳಿತ ಅಧಿಕಾರಿಗಳು, ಗ್ರಾಮ ಪಂಚಾಯಿತಿ ಕಾರ್ಯದರ್ಶಿಗಳು ನೋಂದಣಿ ಮಾಡಬೇಕು. ಪ್ರಾಥಮಿಕ ಆರೋಗ್ಯ ಕೇಂದ್ರಗಳು, ಸರ್ಕಾರಿ ಆಸ್ಪತ್ರೆಗಳ ವೈದ್ಯಾಧಿಕಾರಿಗಳು ಮಾಹಿತಿಯನ್ನು ನೋಂದಣಿ ಮಾಡಬೇಕು. ಖಾಸಗಿ ಆಸ್ಪತ್ರೆಗಳ ಮಾಹಿತಿಯೂ ಪೋರ್ಟಲ್ನಲ್ಲಿ ಅಪ್ಲೋಡ್ ಆಗಬೇಕು ಎಂದು ತಿಳಿಸಿದರು.
ಡಿಎಸ್ಒ ನೀಲಾ ಮಾತನಾಡಿ, ಕಳೆದ ಜನವರಿಯಿಂದ ಸೆಪ್ಟೆಂಬರ್ವರೆಗೆ ಜನನ ಗಂಡು-10462, ಹೆಣ್ಣು-9787 ಸೇರಿ 20249 ಹಾಗೂ ಮರಣ ಸಂಖ್ಯೆ ಗಂಡು ಮಕ್ಕಳು -7555, ಹೆಣ್ಣುಮಕ್ಕಳು-5724 ಸೇರಿ 13279 ನೋಂದಣಿಯಾಗಿವೆ. ಜಿಲ್ಲೆಯಲ್ಲಿ ಗ್ರಾಮೀಣ 916, ನಗರ 20 ಸೇರಿ ಒಟ್ಟು 936 ನೊಂದಣಿ ಘಟಕಗಳಿವೆ ಎಂದು ಸಭೆಯ ಗಮನಕ್ಕೆ ತಂದರು.
ಜಿಪಂ ಸಿಇಒ ಗಿತ್ತೆ ಮಾಧವ್ ವಿಠ್ಠಲರಾವ್, ಅಪರ ಜಿಲ್ಲಾಧಿಕಾರಿ ಶೀಲವಂತ ಶಿವಕುಮಾರ, ಡಿಎಚ್ಓ ಡಾ.ಷಣ್ಮುಖಪ್ಪ ಜಿಲ್ಲಾ ಮಟ್ಟದ ಅಧಿಕಾರಿಗಳು ಇದ್ದರು.