ಸದಸ್ಯತ್ವ ನೋಂದಾಯಿಸಲು ಹಾವೇರಿ ಬಿಜೆಪಿ ಕಾರ್ಯಕರ್ತರ ಸಜ್ಜು

KannadaprabhaNewsNetwork |  
Published : Aug 29, 2024, 12:47 AM IST
೨೮ಎಚ್‌ವಿಆರ್5 | Kannada Prabha

ಸಾರಾಂಶ

ಮುಂಬರುವ ದಿನದಲ್ಲಿ ಹಾವೇರಿ ಜಿಲ್ಲೆಯಲ್ಲಿ ಸದಸ್ಯತ್ವ ಅಭಿಯಾನದ ಮೂಲಕ ೯ ಲಕ್ಷಕ್ಕೂ ಹೆಚ್ಚು ಸದಸ್ಯತ್ವ ನೋಂದಣಿ ಮಾಡಿಸಿ, ಜಿಲ್ಲೆಯನ್ನು ಬಿಜೆಪಿಯ ಭದ್ರಕೋಟೆಯನ್ನಾಗಿಸುವ ನಿಟ್ಟಿನಲ್ಲಿ ಕಾರ್ಯಕರ್ತರು ಶ್ರಮಿಸಬೇಕು ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಅರುಣಕುಮಾರ ಪೂಜಾರ ಕರೆ ನೀಡಿದ್ದಾರೆ.

ಹಾವೇರಿ: ಬಿಜೆಪಿ ಎಲ್ಲ ಪಕ್ಷಗಳಿಗಿಂತಲೂ ವಿಭಿನ್ನವಾಗಿದ್ದು, ಕಾರ್ಯಕರ್ತರ ಕೇಂದ್ರಿತ ಪಕ್ಷವಾಗಿದೆ. ಪ್ರತಿ ಬಾರಿಯೂ ಬಿಜೆಪಿ ನೂತನ ಸದಸ್ಯತ್ವವನ್ನು ನೋಂದಾಯಿಸುವ ಮೂಲಕ ಬೂತ್ ಮಟ್ಟದಲ್ಲಿ ಕಾರ್ಯಕರ್ತರನ್ನು ಪಕ್ಷದ ಕಾರ್ಯಕ್ಕೆ ಸಜ್ಜುಗೊಳಿಸಲಾಗುತ್ತದೆ ಎಂದು ಮಾಜಿ ಶಾಸಕ, ಬಿಜೆಪಿ ಜಿಲ್ಲಾಧ್ಯಕ್ಷ ಅರುಣಕುಮಾರ ಪೂಜಾರ ಹೇಳಿದರು.

ನಗರದ ಬಿಜೆಪಿ ಜಿಲ್ಲಾ ಕಚೇರಿಯಲ್ಲಿ ಏರ್ಪಡಿಸಿದ್ದ ಜಿಲ್ಲಾ ಸದಸ್ಯತ್ವ ಅಭಿಯಾನದ ಕಾರ್ಯಾಗಾರದಲ್ಲಿ ಪಾಲ್ಗೊಂಡು ಮಾತನಾಡಿದರು. ಮುಂಬರುವ ದಿನದಲ್ಲಿ ಜಿಲ್ಲೆಯಲ್ಲಿ ಸದಸ್ಯತ್ವ ಅಭಿಯಾನ ನಡೆಸಿ ೯ ಲಕ್ಷಕ್ಕೂ ಹೆಚ್ಚಿನ ಸಂಖ್ಯೆಯಲ್ಲಿ ಸದಸ್ಯತ್ವ ನೋಂದಣಿ ಮಾಡಿಸಿ, ಜಿಲ್ಲೆಯನ್ನು ಬಿಜೆಪಿಯ ಭದ್ರಕೋಟೆಯನ್ನಾಗಿಸುವ ನಿಟ್ಟಿನಲ್ಲಿ ಕಾರ್ಯಕರ್ತರು ಶ್ರಮಿಸಬೇಕು. ಸದಸ್ಯತ್ವ ಅಭಿಯಾನದ ನಿಮಿತ್ತ ಪ್ರಭಾರಿಗಳನ್ನು ನೇಮಕ ಮಾಡಲಾಗಿದ್ದು, ರಾಣೆಬೆನ್ನೂರು ವಿಧಾನಸಭಾ ಕ್ಷೇತ್ರಕ್ಕೆ ಮಾಜಿ ಸಚಿವ ಬಿ.ಸಿ. ಪಾಟೀಲ್, ಹಿರೇಕೆರೂರು ವಿಧಾನಸಭಾ ಕ್ಷೇತ್ರಕ್ಕೆ ಗವಿಸಿದ್ದಪ್ಪ ದ್ಯಾಮಣ್ಣವರ, ಬ್ಯಾಡಗಿ ವಿಧಾನಸಭಾ ಕ್ಷೇತ್ರಕ್ಕೆ ಮಾಜಿ ಶಾಸಕ ಶಿವರಾಜ್ ಸಜ್ಜನರ, ಹಾವೇರಿ ವಿಧಾನಸಭಾ ಕ್ಷೇತ್ರಕ್ಕೆ ಶಿವಕುಮಾರ ಮುದ್ದಪ್ಪನವರ, ಹಾನಗಲ್ಲ ವಿಧಾನಸಭಾ ಕ್ಷೇತ್ರಕ್ಕೆ ಮಾಜಿ ಶಾಸಕ ವಿರೂಪಾಕ್ಷಪ್ಪ ಬಳ್ಳಾರಿ, ಶಿಗ್ಗಾಂವಿ ವಿಧಾನಸಭಾ ಕ್ಷೇತ್ರಕ್ಕೆ ಜಿಲ್ಲಾಧ್ಯಕ್ಷ ಅರುಣ್ ಕುಮಾರ್ ಪೂಜಾರ್ ಪ್ರಭಾರಿಗಳಾಗಿ ಕಾರ್ಯನಿರ್ವಹಿಸಲಿದ್ದಾರೆ ಎಂದರು.

ಇದೇ ಸಂದರ್ಭದಲ್ಲಿ ಸದಸ್ಯತ್ವ ಅಭಿಯಾನದ ಉಚಿತ ಮಿಸ್ ಕಾಲ್ಡ್ ಸಂಖ್ಯೆಯಾದ ೮೮೦೦೦೦೨೦೨೪ ಸಂಖ್ಯೆಯ ಫಲಕವನ್ನು ಬಿಡುಗಡೆಗೊಳಿಸಿದರು.

ನಿಕಟಪೂರ್ವ ರಾಜ್ಯ ಪ್ರಧಾನ ಕಾರ್ಯದರ್ಶಿ, ಹುಬ್ಬಳ್ಳಿ ಧಾರವಾಡ ಸೆಂಟ್ರಲ್ ವಿಧಾನಸಭಾ ಕ್ಷೇತ್ರದ ಶಾಸಕ ಹಾಗೂ ಸದಸ್ಯತ್ವ ಅಭಿಯಾನದ ವಿಭಾಗ ಪ್ರಭಾರಿ ಮಹೇಶ್ ತೆಂಗಿನಕಾಯಿ ಮಾತನಾಡಿ, ಸದಸ್ಯತ್ವ ಅಭಿಯಾನ ಇಡಿ ದೇಶಾದ್ಯಂತ ಸೆ. ೨ರಂದು ಉದ್ಘಾಟನೆಗೊಳ್ಳಲಿದ್ದು, ಜಿಲ್ಲಾ ಮಟ್ಟದಲ್ಲಿ ಸೆ. ೬ರಂದು ಸದಸ್ಯತ್ವ ಅಭಿಯಾನಕ್ಕೆ ಚಾಲನೆ ನೀಡಬೇಕು. ಪ್ರತಿ ವಿಧಾನಸಭಾ ಕ್ಷೇತ್ರದಲ್ಲಿ ಒಂದೂವರೆ ಲಕ್ಷಕ್ಕೂ ಅಧಿಕ ಜನರನ್ನು ಬಿಜೆಪಿಯ ಸದಸ್ಯರನ್ನಾಗಿ ನೋಂದಾಯಿಸಬೇಕು ಎಂದರು.

ಸದಸ್ಯತ್ವ ಅಭಿಯಾನದ ಜಿಲ್ಲಾ ಪ್ರಭಾರಿ ಪ್ರಕಾಶ ಶೃಂಗೇರಿ, ಜಿಲ್ಲಾ ಸಂಚಾಲಕ ಮಂಜುನಾಥ ಗಾಣಿಗೇರ ಮಾತನಾಡಿದರು.

ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಡಾ. ಸಂತೋಷ ಆಲದಕಟ್ಟಿ, ನಂಜುಂಡೇಶ ಕಳ್ಳೇರ, ರಾಜ್ಯ ಉಪಾಧ್ಯಕ್ಷ ಡಾ. ಬಸವರಾಜ ಕೇಲಗಾರ, ಹಾವೇರಿ ವಿಧಾನಸಭಾ ಕ್ಷೇತ್ರದ ಮುಖಂಡ ಗವಿಸಿದ್ದಪ್ಪ ದ್ಯಾಮಣ್ಣವರ, ಜಿಲ್ಲೆ ಮತ್ತು ಮಂಡಲದ ಪದಾಧಿಕಾರಿಗಳು, ಮೋರ್ಚಾ ಪದಾಧಿಕಾರಿಗಳು, ಪ್ರಕೋಷ್ಠಗಳ ಸಂಚಾಲಕರು, ಸಹ ಸಂಚಾಲಕರು ಹಾಗೂ ಅಭಿಯಾನದ ಸಂಚಾಲಕ, ಸಹ ಸಂಚಾಲಕರು ಇದ್ದರು.

PREV

Recommended Stories

15 ವರ್ಷ ಮೇಲ್ಪಟ್ಟ ಸರ್ಕಾರಿ ವಾಹನ ಗುಜರಿಗೆ: ಆದೇಶ
ಹಾಸಿಗೆ, ದಿಂಬಿಗಾಗಿ ಮತ್ತೆ ಕೋರ್ಟಲ್ಲಿ ಅಂಗಲಾಚಿದ ಕೊಲೆ ಆರೋಪಿ ದರ್ಶನ್‌