ಕನ್ನಡಪ್ರಭ ವಾರ್ತೆ ಪಾಂಡವಪುರ
ಪಟ್ಟಣದ ತಾಪಂ ಆವರಣದಲ್ಲಿ ಜಿಲ್ಲಾ ಸ್ವೀಪ್ ಸಮಿತಿ, ತಾಪಂ, ವಿಕಲಚೇತನರ ಹಾಗೂ ಜಿಲ್ಲಾ ಹಿರಿಯ ನಾಗರಿಕರ ಸಬಲೀಕರ ಆಶ್ರಯದಲ್ಲಿ ನಡೆದ ಮತದಾರರ ಪಟ್ಟಿಗಳ ವಿಶೇಷ ಸಮಗ್ರ ಪರಿಷ್ಕರಣೆ-2026 ವಿಕಲಚೇತನರು ಹಾಗೂ ಹಿರಿಯ ನಾಗರಿಕ ಮತದಾರರಿಗೆ ಜಾಗೃತಿ ಜಾಥಾಗೆ ಚಾಲನೆ ನೀಡಿ ಮಾತನಾಡಿದರು.
ಎಸ್ಐಆರ್ ಕಾರ್ಯಕ್ರಮ ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದೆ. ಹೀಗಾಗಿ ಬಿಎಲ್ಒಗಳು ನಿಮ್ಮ ಮನೆ ಬಾಗಿಲಿಗೆ ಬಂದಾಗ ಅವರಿಗೆ ಸಂಪೂರ್ಣ ಮಾಹಿತಿ ನೀಡಿ ಸಹಕರಿಸಬೇಕು. ಜೊತೆಗೆ ಮತದಾರರ ಪಟ್ಟಿಗಳ ವಿಶೇಷ ಸಮಗ್ರ ಪರಿಷ್ಕರಣೆ ಕಾರ್ಯಕ್ರಮದಲ್ಲಿ ಸಕ್ರಿಯವಾಗಿ ಎಲ್ಲರೂ ಭಾಗವಹಿಸಬೇಕು ಎಂದರು.ಎರಡು ಕಡೆ ಮತಪಟ್ಟಿ ಇರುವವರು, ಮೃತಪಟ್ಟವರಿದ್ದರೆ ಅಥವಾ ಬೇರೆ ಕಡೆ ವಾಸವಿದ್ದರೆ ಅಂತಹವರ ಹೆಸರು ಡಿಲೀಟ್ ಮಾಡಬೇಕಾಗಿರುತ್ತದೆ. ವಿಕಲಚೇತನರು ತಪ್ಪದೇ ಮತಪಟ್ಟಿಯಲ್ಲಿ ಹೆಸರು ನೋಂದಾಯಿಸುವ ಮೂಲಕ ಎಲ್ಲಾ ಮತದಾರರಿಗೆ ಅರಿವು ಮೂಡಿಸಬೇಕು ಎಂದರು.
ಉದಾಸೀನ ತೋರದೆ ಎಸ್ಐಆರ್ ನೋಂದಣಿ ಪ್ರಕ್ರಿಯೆಯಲ್ಲಿ ಭಾಗವಹಿಸಿ, ವಿಕಲಚೇತನ ಮತದಾರರು ಮತದಾರರ ನೋಂದಣಿ ಪಟ್ಟಿಯಲ್ಲಿ ನೋಂದಾಯಿಸುವುದು ಎಂಬುದು ಸೇರಿದಂತೆ ವಿವಿಧ ಬರಹಗಳನ್ನೊಳಗೊಂಡ ನಾಮಫಲಕಗಳನ್ನಿಡಿದು ಘೋಷಣೆಗಳನ್ನು ಕೂಗುತ್ತಾ ಮತದಾರರ ಪಟ್ಟಿಗಳ ವಿಶೇಷ ಸಮಗ್ರ ಪರಿಷ್ಕರಣೆ ಕಾರ್ಯಕ್ರಮ ಕುರಿತು ಸಾರ್ವಜನಿಕರಿಗೆ ಅರಿವು ಮೂಡಿಸಿದರು.