ಕನ್ನಡಪ್ರಭ ವಾರ್ತೆ ಬಾಗಲಕೋಟೆ
ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿ ಪ್ರಸಕ್ತ ಸಾಲಿನ ಮುಂಗಾರು ಹಂಗಾಮಿನ ಕರ್ನಾಟಕ ರೈತ ಸುರಕ್ಷಾ ಪಿಎಂ ಫಸಲ್ ಬಿಮಾ ಯೋಜನೆ ಅನುಷ್ಠಾನ ಕುರಿತು ಜರುಗಿದ ಜಿಲ್ಲಾ ಮಟ್ಟದ ಅನುಷ್ಠಾನ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಈ ಯೋಜನೆ ಸಮರ್ಪಕ ಅನುಷ್ಠಾನಕ್ಕೆ ಕೃಷಿ, ತೋಟಗಾರಿಕೆ, ಕಂದಾಯ ಹಾಗೂ ಸಹಕಾರ ಇಲಾಖೆ ಅಧಿಕಾರಿಗಳು ಸಮನ್ವಯದಿಂದ ಕಾರ್ಯನಿರ್ವಹಿಸಬೇಕು. ಗ್ರಾಮೀಣ ಮಟ್ಟದಲ್ಲಿ ರೈತರಿಗೆ ಯೋಜನೆಯ ಕುರಿತು ಜಾಗೃತಿ ಮೂಡಿಸಿ, ನೋಂದಣಿಗೆ ಕ್ರಮವಹಿಸಬೇಕು ಎಂದರು.
ಹವಾಮಾನ ವೈಪರಿತ್ಯ, ಅತಿವೃಷ್ಟಿ, ಅನಾವೃಷ್ಟಿ, ಗಾಳಿ ಮಳೆ, ಪ್ರವಾಹ ಸೇರಿದಂತೆ ವಿವಿಧ ಪ್ರಕೃತಿ ವಿಕೋಪಗಳಿಂದ ಬೆಳೆ ಹಾನಿಗೊಳಗಾದ ಸಂದರ್ಭದಲ್ಲಿ ರೈತರಿಗೆ ಸೂಕ್ತ ಪರಿಹಾರ ದೊರೆಯಲು ಬೆಳೆ ಕಟಾವು ಪ್ರಯೋಗಗಳನ್ನು ಪಾರದರ್ಶಕವಾಗಿ ಮತ್ತು ನಿಗದಿತ ಅವಧಿಯೊಳಗೆ ಪೂರ್ಣಗೊಳಿಸುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು. ಜಿಲ್ಲೆಗೆ ಆಯ್ಕೆಯಾದ ಎಸ್.ಬಿ.ಐ ಜನರಲ್ ಇನ್ಸೂರೆನ್ಸ್ ಕಂಪನಿಯ ಪ್ರತಿನಿಧಿಗಳು ಪ್ರತಿ ತಾಲೂಕು ಕಚೇರಿಗೆ ಸರಿಯಾಗಿ ಕೆಲಸ ಮಾಡುವ ಪ್ರತಿನಿಧಿಗಳನ್ನು ನಿಯೋಜನೆ ಮಾಡಬೇಕು ಎಂದರು. ಈ ಯೋಜನೆ ಸಾಲ ಪಡೆದ ರೈತರಿಗೆ ಕಡ್ಡಾಯವಾಗಿದ್ದು, ಸಾಲ ಪಡೆಯದ ರೈತರಿಗೆ ಐಚ್ಛಿಕವಾಗಿದೆ ಎಂದರು.ಜಂಟಿ ಕೃಷಿ ನಿರ್ದೇಶಕ ಟಿ.ಎಸ್.ರುದ್ರೇಶಪ್ಪ ಅವರು ಬೆಳೆವಾರು ವಿಮಾ ಕಂತು ಪಾವತಿ ಕುರಿತು ಮಾಹಿತಿ ನೀಡಿದರು. ಸೋಯಾ ಅವರೆ, ಜೋಳ (ನೀರಾವರಿ), ಉದ್ದು, ಹೆಸರು (ಮಳೆ ಆಶ್ರಿತ) ಬೆಳೆಗೆ ವಿಮಾ ಕಂತು ಪಾವತಿಗೆ ಜುಲೈ 15 ಕೊನೆಯ ದಿನವಾದರೆ, ಅರಿಶಿಣ, ಸೂರ್ಯಕಾಂತಿ, ಸಜ್ಜೆ, ಮುಸುಕಿನ ಜೋಳ, ಜೋಳ, ತೊಗರಿ, ಶೇಂಗಾ, ಎಳ್ಳು (ಮ.ಆ), ಕೆಂಪು ಮೆಣಸಿನಕಾಯಿ, ಮುಸುಕಿನ ಜೋಳ, ಸಜ್ಜೆ, ತೊಗರಿ, ಶೇಂಗಾ (ನೀರಾವರಿ) ಬೆಳೆಗಳಿಗೆ ಜುಲೈ 31 ಹಾಗೂ ಸೂರ್ಯಕಾಂತಿ, ಈರುಳ್ಳಿ (ನೀರಾವರಿ), ಈರುಳ್ಳಿ, ಕೆಂಪು ಮೆಣಸಿನಕಾಯಿ (ಮ.ಆ) ಬೆಳೆಗಳಿಗೆ ವಿಮೆ ಕಂತು ಪಾವತಿಗೆ ಆಗಸ್ಟ್ 14 ಆಗಿರುತ್ತದೆ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಯೋಜನೆ ಪ್ರಚಾರದ ಕರಪತ್ರಗಳನ್ನು ಬಿಡುಗಡೆ ಮಾಡಲಾಯಿತು. ಸಭೆಯಲ್ಲಿ ತೋಟಗಾರಿಕೆ ಜಂಟಿ ನಿರ್ದೇಶಕ ರವೀಂದ್ರ ಹಕಾಟಿ, ತೋವಿವಿಯ ವಿಸ್ತರಣಾ ನಿರ್ದೇಶಕ ಡಾ.ವಿರೇಶ ಹಿರೇಮಠ, ಜಿಲ್ಲಾ ಅಂಕಿ ಸಂಖ್ಯಾಧಿಕಾರಿ ಗೌರಮ್ಮ ಸುಂಕದ, ಜಿಲ್ಲಾ ಅಗ್ರಣೀಯ ಬ್ಯಾಂಕ್ನ ವ್ಯವಸ್ಥಾಪಕ ರಾಜಕುಮಾರ ಯರಗಲ್ಲ, ಬಾಗಲಕೋಟೆ ವಿಭಾಗದ ಕೃಷಿ ಉಪನಿರ್ದೇಶಕ ಕೆ.ಎಸ್.ಅಗಸನಾಳ, ಜಮಖಂಡಿ ವಿಭಾಗದ ಕೃಷಿ ಉಪ ನಿರ್ದೇಶಕಿ ಮಂಜುಳಾ ಬಸವರೆಡ್ಡಿ, ಬಿಡಿಸಿಸಿ ಬ್ಯಾಂಕ್ನ ಅಧಿಕಾರಿ ಜಿ.ಆರ್.ಕುಂದರಗಿ, ಇನ್ಸೂರೆನ್ಸ್ ಕಂಪನಿಯ ಪ್ರತಿನಿಧಿ ಉಮೇಶ ಕಾಂತಿ ಸೇರಿದಂತೆ ಇತರರು ಉಪಸ್ಥಿತರಿದ್ದರು.ಬೆಳೆವಾರು ವಿಮೆ ಮೊತ್ತ, ಕಂತುಗಳ ವಿವರ
ಉದ್ದು (ಮ.ಆ) 15-07-2026 38800-00 2% 784-00
ಶೇಂಗಾ (ನೀರಾವರಿ)31-07-2026 77800-00 2% 1573-00
ಮುಸುಕಿನ ಜೋಳ (ನೀರಾವರಿ)31-07-2026 76200-00 2% 1541-37
ಈರುಳ್ಳಿ (ನೀರಾವರಿ) 14-08-2026 93900-00 2% 4748-52
ಸಜ್ಜೆ (ನೀರಾವರಿ)31-07-2026 43300-00 2% 875-87
ಸಜ್ಜೆ (ಮ.ಆ)31-07-2026 34800-00 2% 703-93ತೊಗರಿ (ನೀರಾವರಿ)31-07-2026 43300-00 2% 875-88
ತೊಗರಿ (ಮ.ಆ)31-07-2026 57600-00 2% 1165-13ಕೆಂಪು ಮೆಣಸಿನಕಾಯಿ (ನೀರಾವರಿ)31-07-2026 124500-00 5% 6295-97
ಕೆಂಪು ಮೆಣಸಿನಕಾಯಿ (ಮ.ಆ)14-08-2026 90800-00 5% 4591-76ಎಳ್ಳು (ಮ.ಆ)31-07-2026 31900-00 2% 645-27
ಜೋಳ (ನೀರಾವರಿ)15-07-2026 52600-00 2% 1063-99ಜೋಳ (ಮ.ಆ)31-07-2026 44400-00 2% 898-12
ಸೋಯಾ ಅವರೆ (ನೀರಾವರಿ) 15-07-2026 51200-00 2% 1035-67ಸೂರ್ಯಕಾಂತಿ (ನೀರಾವರಿ)14-08-2026 57900-00 2% 1171-20
ಸೂರ್ಯಕಾಂತಿ (ಮ.ಆ) 31-07-2026 48200-00 2% 974-99ಅರಿಶಿಣ 31-07-2026 164200-00 5% 8303-59