ಕನ್ನಡಪ್ರಭ ವಾರ್ತೆ ಹಾಸನ
ಬಿ.ಎಸ್.ಪಿ ರಾಜ್ಯ ಉಪಾಧ್ಯಕ್ಷ ಹಾಗೂ ವಕೀಲರಾದ ಗಂಗಾಧರ್ ಬಹುಜನ್ ಉದ್ದೇಶಿಸಿ ಮಾತನಾಡಿ, ಪರಿಶಿಷ್ಟ ಜಾತಿಗಳಲ್ಲಿನ ಒಳ ಮೀಸಲಾತಿಗಾಗಿ ಹಿರಿಯರು ಹೋರಾಟ ಮಾಡಿದ ಹಿನ್ನೆಲೆಯಲ್ಲಿ ಒಂದು ಹಂತಕ್ಕೆ ತಲುಪಿದೆ. ಅತಿ ಹೆಚ್ಚು ಪರಿಶಿಷ್ಟ ಜಾತಿಯವರು ಇರುವ ಪಂಜಾಬಿನಲ್ಲಿ ೧೯೭೫ನೇ ಇಸವಿಯಲ್ಲಿ ಈ ಹೋರಾಟ ಪ್ರಾರಂಭವಾಗುತ್ತದೆ. ಅಲ್ಲಿನ ಸರ್ಕಾರ ಒಳ ಮೀಸಲಾತಿಯ ವರ್ಗೀಕರಣ ಮಾಡಿ ಪರಿಶಿಷ್ಟ ಜಾತಿಗಳಿಗೆ ಚಾಲನೆ ಕೊಡುವ ಕೆಲಸ ಮಾಡಿರುವುದು ಪಂಜಾಬ್ ರಾಜ್ಯ. ಇದನ್ನೇ ಅನುಸರಿಸಿ ಮುಂದುವರೆಸಿರುವುದು ಹರಿಯಾಣ ರಾಜ್ಯ. ಈ ಎರಡು ರಾಜ್ಯಗಳ ಪ್ರೇರಣೆ ಪಡೆದುಕೊಂಡ ಆಂಧ್ರ ಪ್ರದೇಶದಲ್ಲಿ ಈ ಕೂಗು ಹಬ್ಬಿದೆ. ಹರಿಯಾಣದಿಂದ ಪ್ರೇರಣೆ ಹೊಂದಿರುವುದು ಕರ್ನಾಟದವರು. ಈ ಹೋರಾಟಕ್ಕೆ ಸಾಮಾಜಿಕ ಹೋರಾಟಗಾರರು, ದಲಿತ ಸಮಿತಿ, ರಾಜಕೀಯ ಮುಖಂಡರು, ರಾಜಕೀಯ ಪಕ್ಷದವರು ಎಲ್ಲರೂ ಕೂಡ ಕಷ್ಟಪಟ್ಟು ಸಹಕರಿಸಿದ್ದಾರೆ. ಈ ವಿಚಾರವಾಗಿ ಚಳವಳಿಯಷ್ಟೆ ಅಲ್ಲ ರಕ್ತ ಕೂಡ ಸುರಿಸಿದ್ದೇವೆ. ಇವೆಲ್ಲಾ ಹೋರಾಟದ ಪ್ರತಿಫಲ ಒಳಮೀಸಲಾತಿ ತೀರ್ಪು ಹೊರಬಂದಿದೆ. ಈ ಒಳಮೀಸಲಾತಿ ಅನುಷ್ಠಾನದ ಜವಾಬ್ದಾರಿಯನ್ನು ಆಯಾ ರಾಜ್ಯಗಳಿಗೆ ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ವಹಿಸುತ್ತದೆ. ಕಾಯಿದೆ, ಕಾನೂನು ಮಾಡುವ ಅಧಿಕಾರ ರಾಜ್ಯ ಸರ್ಕಾರಗಳಿಗಿಲ್ಲ. ಇದನ್ನು ಏನಿದ್ದರೂ ಕೇಂದ್ರವೇ ಮಾಡಬೇಕು. ಆರ್ಟಿಕಲ್ ೩೪೦, ೩೪೧ ನಲ್ಲಿ ಅದು ಕೇಂದ್ರ ಸರ್ಕಾರವೇ ಮಾಡಬೇಕು, ರಾಜ್ಯಸರ್ಕಾರ ಮಾಡುವಾಗಿಲ್ಲ ಎಂದು ರದ್ದುಗೊಳಿಸಲಾಗಿತ್ತು. ಮತ್ತೆ ಸುಪ್ರಿಂಕೋರ್ಟ್ಗೆ ಎತ್ತಿ ಹಿಡಿದಾಗ ಇದು ಸಂವಿಧಾನ ಬದ್ಧವಾಗಿದೆ ಇದನ್ನು ಅನುಷ್ಠಾನಗೊಳಿಸುವ ಜವಾಬ್ದಾರಿ ರಾಜ್ಯ ಸರ್ಕಾರಗಳು ತೆಗೆದುಕೊಳ್ಳಬೇಕು ಎಂದು ಹೇಳಿದೆ ಎಂದು ಕಿವಿಮಾತು ಹೇಳಿದರು.
ಈ ತೀರ್ಪಿನ ಅನುಸಾರವಾಗಿ ಸಂಬಂಧಪಟ್ಟ ಮಸೂದೆ ತರಬೇಕಾಗುತ್ತದೆ. ಸದಾಶಿವ ಆಯೋಗ ಏನಿದೆ ಬಗ್ಗೆ ಹೇಳ್ಳುತ್ತಿದ್ದೇವೆ ಹೊರತು ಆ ಬಗ್ಗೆ ಪೂರ್ಣವಾಗಿ ತಿಳಿದಿರುವುದಿಲ್ಲ. ಅದರ ಪ್ರಕಾರವೇ ಮೀಸಲಾತಿ ವರ್ಗೀಕರಣ ಹಂಚಿಕೆ ಆಗಬೇಕಾ! ಅದರೊಳಗೆ ಏನಾದರೂ ಲೋಪದೋಷಗಳಿವೆಯೇ ಎನ್ನುವುದನ್ನು ಗಮನಹರಿಸಿ ಜಾರಿ ಮಾಡಿದರೇ ಗೊತ್ತಾಗುತ್ತದೆ ಎಂದು ಸಲಹೆ ನೀಡಿದರು.ಸಭೆಯಲ್ಲಿ ಇದೇ ವೇಳೆ ಒಳ ಮೀಸಲಾತಿಗಾಗಿ ಹೋರಾಟ ಮಾಡಿದಂತಹ ಕೇಂದ್ರ ಸಚಿವ ನಾರಾಯಣಸ್ವಾಮಿ, ಆಂಜನೇಯವರಿಗೆ ಸಭೆಯಲ್ಲಿ ಚಪ್ಪಾಳೆ ತಟ್ಟುವ ಮೂಲಕ ಅಭಿನಂದಿಸಲಾಯಿತು. ಸುಪ್ರಿಂಕೋರ್ಟ್ಗೆ ಈ ಪ್ರಕರಣ ತೆಗೆದುಕೊಂಡು ಹೋದ ಪಾರ್ಥಸಾರಥಿ ಅವರು ಮರಣ ಹೊಂದಿದ ಹಿನ್ನೆಲೆಯಲ್ಲಿ ಎದ್ದುನಿಂತು ಎರಡು ನಿಮಿಷ ಮೌನ ಆಚರಿಸುವುದರ ಮೂಲಕ ಶ್ರದ್ಧಾಂಜಲಿ ಅರ್ಪಿಸಿ ಗೌರವ ಸೂಚಿಸಲಾಯಿತು. ನಂತರ ನಗರದ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿರುವ ಡಾ. ಬಿ.ಆರ್. ಅಂಬೇಡ್ಕರ್ ಪ್ರತಿಮೆಗೆ ಮಾಲಾರ್ಪಣೆ ನೆರವೇರಿಸಿ ಕೆಲ ಸಮಯ ಜೈಕಾರ ಹಾಕಿದರು.