ಧಾರವಾಡ:
ಜಿಲ್ಲಾಧಿಕಾರಿ ಕಚೇರಿಯಲ್ಲಿ ಚುನಾವಣಾ ಖರ್ಚು-ವೆಚ್ಚ ನಿಗಾ ತಂಡದ ಅಧಿಕಾರಿಗಳ ಪರಿಶೀಲನಾ ಸಭೆಯಲ್ಲಿ ಅವರು ಮಾತನಾಡಿ, ಎಂಟು ವಿಧಾನಸಭಾ ಕ್ಷೇತ್ರಗಳ ಸಂಬಂಧಿಸಿದ ಅಧಿಕಾರಿಗಳು ಪ್ರತಿ ದಿನವು ವರದಿ ಸಲ್ಲಿಸುವಂತೆ ತಿಳಿಸಿದರು.
ಅಭ್ಯರ್ಥಿಗಳ ಪ್ರತಿದಿನದ ವಿವಿಧ ಕಾರ್ಯಕ್ರಮ, ಸಮಾರಂಭಗಳ ಚಟುವಟಿಕೆಗಳನ್ನು ಸರಿಯಾಗಿ ದಾಖಲಿಸಿಕೊಳ್ಳುವಂತೆ ಹಾಗೂ ವಿಡಿಯೋ ರೆಕಾರ್ಡಿಂಗ್ ಸಹ ಮಾಡುವಂತೆ ವಿಎಸ್ಟಿ, ಎಸ್ಎಸ್ಟಿ, ವಿವಿಟಿ ತಂಡಗಳಿಗೆ ಹಾಗೂ ಸಹಾಯಕ ವೆಚ್ಚ ಅಧಿಕಾರಿಗಳಿಗೆ ಸೂಚಿಸಿದ ಅವರು, ಖರ್ಚು-ವೆಚ್ಚ ನಿಗಾ ತಂಡವು ಶಾಡೋ ರಜಿಸ್ಟರ್ನಲ್ಲಿ ಎಲ್ಲ ಖರ್ಚು-ವೆಚ್ಚ ದಾಖಲಿಸುವಂತೆ ಸೂಚಿಸಿದ ಅವರು, ಅಭ್ಯರ್ಥಿಗೆ ನಿಗದಿಪಡಿಸಿದ ₹ 95 ಲಕ್ಷ ಮೀರಿದಲ್ಲಿ ಕಾನೂನು ಕ್ರಮಕೈಗೊಳ್ಳಲು ಅವಕಾಶವಿದೆ ಎಂದರು.ಉಲ್ಲಂಘನೆಗೆ ಕ್ರಮ:
ಜಿಲ್ಲೆಯಲ್ಲಿ ಒಟ್ಟು 24 ಚೆಕ್ಪೋಸ್ಟ್ ಕಾರ್ಯನಿರ್ವಹಿಸುತ್ತಿದ್ದು, 57 ಎಫ್ಎಸ್ಟಿ, 72 ಎಸ್ಎಸ್ಟಿ ಕಾರ್ಯನಿರ್ವಹಿಸುತ್ತಿದೆ. ಮಾದರಿ ನೀತಿ ಸಂಹಿತೆ ಉಲ್ಲಂಘನೆ ಪ್ರಕರಣಗಳು ಕಂಡು ಬಂದಲ್ಲಿ ತಕ್ಷಣವೇ ಕ್ರಮಕೈಗೊಳ್ಳಲಾಗುತ್ತಿದೆ ಎಂದು ಎಂಸಿಸಿ ನೋಡಲ್ ಅಧಿಕಾರಿ ಮೋನಾ ರಾವತ ತಿಳಿಸಿದರು.
ಚುನಾವಣಾ ಅವಧಿಯಲ್ಲಿ ಎಲ್ಲ ಬ್ಯಾಂಕ್ಗಳ ಮೂಲಕ ನಡೆಯಬಹುದಾದ ಅನುಮಾನ್ಸಾಪದ ವ್ಯವಹಾರ, ಹಣ ಪಡೆಯುವವರ ಹಾಗೂ ಠೇವಣಿ ಇಡುವವರ ಬಗ್ಗೆ ಬ್ಯಾಂಕ್ಗಳು ನಿತ್ಯ ಮಾಹಿತಿ ಒದಗಿಸುತ್ತಿವೆ. ₹ 1 ಲಕ್ಷ ಮೇಲ್ಪಟ್ಟ ಖಾತೆ ವ್ಯವಹಾರಗಳ ಮೇಲೂ ಸಹ ಕಣ್ಣು ಇಡಲಾಗಿದೆ ಎಂದು ಲೀಡ್ ಬ್ಯಾಂಕ್ ಅಧಿಕಾರಿ ಪ್ರಭುದೇವ ತಿಳಿಸಿದರು.
ಸಭೆಯ ನಂತರ ಜಿಲ್ಲಾ ನಿಯಂತ್ರಣ ಕೊಠಡಿಗೆ ಭೇಟಿ ನೀಡಿದ ಅವರು ಎಸಿಎಂಸಿ, ಸಾಮಾಜಿಕ ಜಾಲತಾಣ, ಸಿ-ವಿಜಿಲ್, ಸುವಿಧಾ, ದೂರ ನಿಯಂತ್ರಣ, ಟಿವಿ ಮಾಧ್ಯಮ ವೀಕ್ಷಣಾ ತಂಡಗಳ ಕಾರ್ಯ ಪರಿಶೀಲಿಸಿದರು.