ಕನ್ನಡಪ್ರಭ ವಾರ್ತೆ ಮಂಡ್ಯ
ನಗರದ ವಿವಿಧ ವಾರ್ಡ್ , ಕಕೀಲರ ಸಂಘದಲ್ಲಿ ಬಹುಜನ ಸಮಾಜ ಪಕ್ಷದ ಜಿಲ್ಲಾ ಸಮಿತಿ ವತಿಯಿಂದ ಪ್ರಚಾರ ನಡೆಸಿ ಮಾತನಾಡಿ, ಸ್ವಾತಂತ್ರ್ಯ ಬಂದು75 ವರ್ಷಗಳು ಕಳೆದಿವೆ. ಕಾಂಗ್ರೆಸ್ ಹಾಗೂ ಬಿಜೆಪಿ, ಜೆಡಿಎಸ್ ಅಭ್ಯರ್ಥಿಗಳಿಗೆ ಯಾವುದೇ ಚಳವಳಿ ಹೋರಾಟದ ಹಿನ್ನೆಲೆ ಇಲ್ಲದೇ ದುರ್ಬಲವಾಗಿದ್ದಾರೆ ಎಂದು ದೂರಿದರು.
ಜನ ಪರ, ಸಮಾಜ ಪರ ಗಟ್ಟಿ ದ್ವನಿಯಾಗಿ ಬಿಎಸ್ಪಿ ಕೆಲಸ ಮಾಡುತ್ತಿದೆ. ಬಿಜೆಪಿ, ಕಾಂಗ್ರೆಸ್ ನ ಯಾವುದೇ ಅಭ್ಯರ್ಥಿ ಗೆದ್ದರೂ ಕರ್ನಾಟಕಕ್ಕೆ ಪ್ರಯೋಜನವಿಲ್ಲ. ಇವರು ಗೆದ್ದ ನಂತರ ರಾಜ್ಯ ಹಾಗೂ ಜನರ ಅಭಿವೃದ್ಧಿ ಪರ ಕೇಂದ್ರದಲ್ಲಿ ಮಾತನಾಡುವುದಿಲ್ಲ ಎಂದು ಟೀಕಿಸಿದರು.ಕರ್ನಾಟಕದ ಸಂಸದರು ಪ್ರವಾಹ , ಬರಗಾಲ ಬಂದಾಗ ಮಾತನಾಡಲಿಲ್ಲ. ಎಸ್ಸಿ ಎಸ್ಟಿ ವಿದ್ಯಾರ್ಥಿಗಳಿಗೆ ಸ್ಕಾಲರ್ಶಿಪ್ ನಿಲ್ಲಿಸಿದಾಗ ದ್ವನಿ ಎತ್ತಲಿಲ್ಲ. ಬಿಜೆಪಿ ಸಂವಿಧಾನ ವಿರೋಧಿ. ಹೀಗಾಗಿ ಕಾಂಗ್ರೆಸ್ ನಮನಗೆ ವೋಟು ಹಾಕಿ ಸಂವಿಧಾನ ಉಳಿಸುತ್ತೇವೆ ಎನ್ನುತ್ತಿದ್ದಾರೆ. ಇಲ್ಲಿನ ಅಭ್ಯರ್ಥಿಗಳಿಗೆ ಸಂವಿಧಾನ ಅರವಿದೆಯೇ ಎಂದು ಪ್ರಶ್ನಿಸಿದರು. ಪ್ರಚಾರಸಭೆಯಲ್ಲಿ ಗೋವಿಂದರಾಜು, ಬಸವರಾಜು, ಶ್ರೀಕಾಂತ್, ರವಿ, ಕುಮಾರ್, ವಿನಯ್, ಅನಿಲ್ಕುಮಾರ್ ಮತ್ತಿತರರಿದ್ದರು.ಕೆಆರ್ಎಸ್ ಪಕ್ಷದ ಅಭ್ಯರ್ಥಿ ಕೆ.ಆರ್.ಚಂದ್ರಶೇಖರ ಬಿರುಸಿನ ಪ್ರಚಾರ
ಕೆ.ಆರ್.ಎಸ್ ಪಕ್ಷದ ರಾಜ್ಯ ಸಂಘಟನಾ ಕಾರ್ಯದರ್ಶಿ ಹಾಗೂ ಮಂಡ್ಯ ಜಿಲ್ಲಾ ಉಸ್ತುವಾರಿ ಅರುಣ ಕುಮಾರ, ಎಚ್ ಮಲ್ಲೇಗೌಡ ಮಾತನಾಡಿ, ಏ.26 ರಂದು ನಡೆಯಲಿರುವ ಲೋಸಕಭಾ ಚುನಾವಣೆಯಲ್ಲಿ ಚಂದ್ರಶೇಖರ ಅವರ 4ನೇ ಕ್ರಮಸಂಖ್ಯೆ ಬ್ಯಾಟರಿ ಟಾರ್ಜ್ ಗುರುತಿಗೆ ಮತ ಹಾಕುವಂತೆ ಮನವಿ ಮಾಡಿದರು.ತಾಲೂಕಿನ ವಿವಿಧ ಗ್ರಾಮಗಳ ಹಳ್ಳಿಕಟ್ಟೆಗಳ ಬಳಿ ನೆರೆದಿದ್ದ ಜನಸಾಮಾನ್ಯರನ್ನು ಗಮನ ಸೆಳೆದು ಕೆಆರ್ ಎಸ್ ಪಕ್ಷದ ಅಭ್ಯರ್ಥಿ ಚಂದ್ರು ಕೀಲಾರ ಅವರಿಗೆ ಮತ ನೀಡಿ ಗೆಲ್ಲಿಸುವಂತೆ ಮನವಿ ಮಾಡಿದರು.