ಕಾರವಾರ: ಬಿಜೆಪಿ ರಾಜ್ಯ ಉಪಾಧ್ಯಕ್ಷೆ, ಮಾಜಿ ಶಾಸಕಿ ರೂಪಾಲಿ ಎಸ್. ನಾಯ್ಕ ಅವರು ಬಳ್ಳಾರಿ ಜಿಲ್ಲೆಯ ಸಂಡೂರು ವಿಧಾನಸಭಾ ಕ್ಷೇತ್ರದಲ್ಲಿ ಪಕ್ಷದ ಅಭ್ಯರ್ಥಿ ಪರವಾಗಿ ಭರ್ಜರಿ ಪ್ರಚಾರ ನಡೆಸಿದರು.
ಬಂಗಾರು ಹನುಮಂತು ಅವರ ಪತ್ನಿ ರೂಪಶ್ರೀ, ಮಹಿಳಾ ಮೋರ್ಚಾ ಅಧ್ಯಕ್ಷೆ ದೀಪಾ ಘೋಡ್ಕೆ, ನಗರ ಮಂಡಲ ಅಧ್ಯಕ್ಷೆ ನಾಗವೇಣಿ ಟಿ.ಜಿ. ಮತ್ತಿತರರು ರೂಪಾಲಿ ಎಸ್.ನಾಯ್ಕ ಅವರೊಂದಿಗೆ ಪ್ರಚಾರದಲ್ಲಿ ಭಾಗಿಯಾಗಿದ್ದರು. ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯರಿಂದ ಅಪಚಾರ: ಸಂಸದ ಕಾಗೇರಿ
ಶಿರಸಿ: ರಾಜ್ಯದಲ್ಲಿ ಗೌರವಯುತ ಹುದ್ದೆಯಾದ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅಪಚಾರ ಮಾಡುತ್ತಿದ್ದಾರೆ. ಲೋಕಾಯುಕ್ತ ವಿಚಾರಣೆಯನ್ನು ಎದುರಿಸುತ್ತಿದ್ದರೂ ಈ ಸ್ಥಾನ ಬಿಡದೇ ಹುದ್ದೆಯ ಗೌರವ ಹಾನಿ ಮಾಡುತ್ತಿದ್ದು, ತಕ್ಷಣವೇ ರಾಜೀನಾಮೆ ನೀಡಿ ಯೋಗ್ಯರಿಗೆ ಹುದ್ದೆ ಬಿಟ್ಟುಕೊಡಬೇಕು ಎಂದು ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಆಗ್ರಹಿಸಿದ್ದಾರೆ.ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಅವರು, ರಾಜ್ಯದಲ್ಲಿ ಆಡಳಿತ ನಡೆಸುತ್ತಿರುವ ಕಾಂಗ್ರೆಸ್ ಸರ್ಕಾರ ಹಗರಣಗಳ ಸರಮಾಲೆಯನ್ನೇ ಹೊದ್ದು ಮಲಗಿದೆ. ಮುಖ್ಯಮಂತ್ರಿಯಾದವರು ಸರ್ಕಾರಿ ಕಾರಿನಿಂದ ಇಳಿದು ವಿಚಾರಣೆಗೆ ಖಾಸಗಿ ಕಾರಿನಲ್ಲಿ ತೆರಳುತ್ತಾರೆಂದರೆ ಇದು ರಾಜ್ಯದ ಮರ್ಯಾದೆ ಹಾಳು ಮಾಡುವ ವಿಷಯ. ವಾಲ್ಮೀಕಿ ಮುಡಾ ಹಗರಣಗಳ ಬಳಿಕ ಈಗ ಅಬಕಾರಿ ಹಗರಣ ಹೊಸದಾಗಿ ಸೇರ್ಪಡೆಯಾದಂತಾಗಿದೆ.ರಾಜ್ಯದ ಇತಿಹಾಸದಲ್ಲಿ ಮೊದಲ ಬಾರಿಗೆ ಮುಖ್ಯಮಂತ್ರಿಯಂಥ ಗೌರವ ಸ್ಥಾನದಲ್ಲಿದ್ದು ಲೋಕಾಯುಕ್ತ ವಿಚಾರಣೆ ಎದುರಿಸಿರುವುದು ಅವರ ಸಾಧನೆಯ ಸರಿ, ಇಡೀ ಸರ್ಕಾರದ ಮಂತ್ರಿ ಮಂಡಲವೇ ಒಂದಿಲ್ಲೊಂದು ವಿಚಾರಣೆ ಎದುರಿಸುತ್ತಿದೆ. ವಕ್ಫ್ ಬೋರ್ಡ್ ವಿಚಾರದಲ್ಲಿ ರಾಜ್ಯದ ರೈತರ ಜಮೀನನ್ನು ಕಬಳಿಸಲು ಹುನ್ನಾರ ನಡೆಸಿದ್ದು, ಸಿದ್ದರಾಮಯ್ಯ ಮತ್ತು ಜಮೀರ್ ಅಹಮದ್ ಮನಸ್ಥಿತಿ ತೋರಿಸುತ್ತದೆ ಎಂದಿದ್ದಾರೆ.