ಮೆಡಿಕಲ್‌ ಸೀಟ್‌ ತಿರಸ್ಕರಿಸಿ 10 ಚಿನ್ನದ ಪದಕದ ‘ಕೃಷಿ’!

KannadaprabhaNewsNetwork |  
Published : Mar 05, 2024, 01:34 AM ISTUpdated : Mar 05, 2024, 10:32 AM IST
Convocation | Kannada Prabha

ಸಾರಾಂಶ

ವೈದ್ಯಕೀಯ ಸೀಟು ಬಿಟ್ಟು ಕೃಷಿ ಬಿಎಸ್ಸಿಗೆ ಸೇರಿದ ಸ್ನೇಹಾಶ್ರೀಗೆ ಬೆಂಗಳೂರು ಕೃಷಿ ವಿವಿಯಲ್ಲಿ 8 ಚಿನ್ನದ ಪದಕ ಸಿಕ್ಕಿದೆ.

ಸಿದ್ದು ಚಿಕ್ಕಬಳ್ಳೇಕೆರೆ
ಕನ್ನಡಪ್ರಭ ವಾರ್ತೆ ಬೆಂಗಳೂರು

ಸಿಇಟಿಯಲ್ಲಿ ಸರ್ಕಾರಿ ಮೆಡಿಕಲ್‌ ಸೀಟು ಸಿಕ್ಕರೆ ಸಾಕಪ್ಪ ಎಂದು ಬಹುತೇಕ ವಿದ್ಯಾರ್ಥಿಗಳು ಕನವರಿಸುವಾಗ, ಇದಕ್ಕೆ ಅಪವಾದವೆಂಬಂತೆ ವೈದ್ಯಕೀಯ ಸೀಟು ತಿರಸ್ಕರಿಸಿ ತನಗಿಷ್ಟವಾದ ಕೃಷಿ ಕೋರ್ಸ್‌ ಆಯ್ಕೆ ಮಾಡಿಕೊಂಡ ಎಸ್‌.ಸ್ನೇಹಶ್ರೀ ಅವರು ಈಗ ಅವರು ಬರೋಬ್ಬರಿ 13 ಚಿನ್ನದ ಪದಕಕ್ಕೆ ಭಾಜನರಾಗಿದ್ದಾರೆ.

ಸೋಮವಾರ ನಡೆದ ಬೆಂಗಳೂರು ಕೃಷಿ ವಿಶ್ವವಿದ್ಯಾನಿಲಯದ 58ನೇ ಘಟಿಕೋತ್ಸವಕ್ಕೆ ಆಗಮಿಸಿದ್ದ ಬಹುತೇಕರು ಸ್ನೇಹಶ್ರೀ ಅವರನ್ನು ಬೆರಗುಗಣ್ಣಿನಿಂದ ನೋಡಿದ್ದು ಸುಳ್ಳಲ್ಲ. ಸ್ನೇಹಶ್ರೀ ಅವರು ಬಿಎಸ್ಸಿ (ಆನರ್ಸ್) ಕೃಷಿಯಲ್ಲಿ 10 ಚಿನ್ನದ ಪದಕ ಮತ್ತು ದಾನಿಗಳ 3 ಚಿನ್ನದ ಪದಕದ ಪ್ರಮಾಣ ಪತ್ರ ಪಡೆದುಕೊಂಡರು.

ಮೂಲತಃ ಚಿಕ್ಕಮಗಳೂರು ಜಿಲ್ಲೆ ಕಡೂರು ತಾಲೂಕಿನ ಪಿಳ್ಳೇನಹಳ್ಳಿಯವರಾದ ಸ್ನೇಹಶ್ರೀ, ಚಿಕ್ಕಮಗಳೂರಿನ ಸಾಯಿ ಏಂಜಲ್ಸ್‌ ಕಾಲೇಜಿನಲ್ಲಿ ದ್ವಿತೀಯ ಪಿಯುಸಿ ಪಿಸಿಎಂಬಿ ಅಭ್ಯಾಸ ನಡೆಸಿ ಶೇ.97ರಷ್ಟು ಅಂಕ ಗಳಿಸಿದ್ದರು. 

2019ರಲ್ಲಿ ನಡೆದ ಸಿಇಟಿಯಲ್ಲಿ ಸರ್ಕಾರಿ ಕೋಟಾದಡಿ ದಾವಣಗೆರೆಯ ಕಾಲೇಜೊಂದರಲ್ಲಿ ಮೆಡಿಕಲ್‌ ಸೀಟು ಸಿಕ್ಕಿದರೂ ಬಿಎಸ್ಸಿ (ಆನರ್ಸ್) ಕೃಷಿ ಪದವಿಗೆ ಹೆಬ್ಬಾಳದ ಜಿಕೆವಿಕೆ ಸೇರ್ಪಡೆಯಾದರು. 

ಸತತ ಪರಿಶ್ರಮದಿಂದಾಗಿ ಶೇ.93.82ರಷ್ಟು ಫಲಿತಾಂಶ ಪಡೆಯುವುದರ ಜೊತೆಗೆ ಘಟಿಕೋತ್ಸವದಲ್ಲೇ ಅತಿ ಹೆಚ್ಚು ಚಿನ್ನದ ಪದಕ ಪಡೆದವರು ಎಂಬ ಸಾಧನೆಗೆ ಪಾತ್ರರಾಗಿದ್ದಾರೆ.

ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಸ್ನೇಹಶ್ರೀ ತಂದೆ ಆರ್‌.ಸತೀಶ್‌, ‘ಚಿಕ್ಕಮಗಳೂರಿನ ಅಂಬಳೆಯ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಾನು ಶಿಕ್ಷಕನಾಗಿದ್ದೇನೆ. ಮಗಳ ಈ ಸಾಧನೆ ಖುಷಿ ತಂದಿದೆ’ ಎಂದು ಸಂತಸ ವ್ಯಕ್ತಪಡಿಸಿದ್ದಾರೆ. 

ತಾಯಿ ಎನ್‌.ಎನ್‌.ಅರುಣಕುಮಾರಿ ಮಾತನಾಡಿ, ಸಖರಾಯಪಟ್ಟಣದ ಗುಬ್ಬಿಹಳ್ಳಿಯ ಸರ್ಕಾರಿ ಪ್ರೌಢಶಾಲೆಯಲ್ಲಿ ನಾನು ಕನ್ನಡ ಶಿಕ್ಷಕಿಯಾಗಿದ್ದೇನೆ. 

ನಮ್ಮ ಪ್ರೋತ್ಸಾಹಕ್ಕಿಂತ ಅವಳ ಕಠಿಣ ಪರಿಶ್ರಮವೇ ಸಾಧನೆಗೆ ಕಾರಣವಾಗಿದೆ ಎಂದು ತಿಳಿಸಿದರು.ವ್ಯಕ್ತಿತ್ವ ವಿಕಸನದ ಪುಸ್ತಕಗಳನ್ನು ಅಭ್ಯಾಸಿಸಿದ್ದು ಸಹ ಸಾಧನೆಗೆ ಕಾರಣವಾಗಿದೆ. 

ಇಷ್ಟೊಂದು ಪದಕಗಳಿಗೆ ಭಾಜನಳಾಗುತ್ತೇನೆ ಎಂದುಕೊಂಡಿರಲಿಲ್ಲ. ಐಎಎಸ್‌ ಅಧಿಕಾರಿಯಾಗಿ ಕೃಷಿಕರ ಸಮಸ್ಯೆಗಳನ್ನು ಪರಿಹರಿಸಲು ಮುಂದಾಗಬೇಕು ಎಂಬ ಮಹತ್ವಾಕಾಂಕ್ಷೆ ಇದೆ. -ಎಸ್‌.ಸ್ನೇಹಶ್ರೀ, ವಿದ್ಯಾರ್ಥಿನಿ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಮಾನಸಿಕ ಖಿನ್ನತೆ ಸ್ವಯಂ ಮೌಲ್ಯಮಾಪನಕ್ಕೆ ನಿಮ್ಹಾನ್ಸ್‌ ಆ್ಯಪ್‌
ಒಂದೇ ದಿನ ಜಡ್ಜ್‌ ಮುಂದೆ 60 ಪರೋಲ್‌ ಅರ್ಜಿ!