₹36 ಕೋಟಿ ಬರ ಪರಿಹಾರ ಬಿಡುಗಡೆ

KannadaprabhaNewsNetwork |  
Published : May 15, 2024, 01:34 AM IST
ಸಾಂದರ್ಭಿಕ ಚಿತ್ರ. | Kannada Prabha

ಸಾರಾಂಶ

ರೈತರ ಬ್ಯಾಂಕ್ ಖಾತೆಯಲ್ಲಿನ ಸಮಸ್ಯೆಗಳಲ್ಲಿ 4000ಕ್ಕೂ ಅಧಿಕ ಪ್ರಕರಣಗಳಲ್ಲಿ ಬ್ಯಾಂಕ್ ಗಳಲ್ಲಿ ಆಧಾರ್ ಸೀಡಿಂಗ್ ಆಗದೇ ಇರುವುದು, 1200ಕ್ಕೂ ಅಧಿಕ ಪ್ರಕರಣಗಳಲ್ಲಿ ಫ್ರುಟ್ಸ್ ತಂತ್ರಾಂಶ ಮತ್ತು ಆಧಾರ್‌ನಲ್ಲಿನ ಹೆಸರುಗಳ ಹೋಲಿಕೆಯಾಗದೇ ಇರುವುದು ಕಂಡುಬಂದಿದೆ.

ಕಾರವಾರ: ಜಿಲ್ಲೆಯಲ್ಲಿ ಮುಂಗಾರು ಹಂಗಾಮಿನಲ್ಲಿ ಉಂಟಾದ ಬರದಿಂದ ಉಂಟಾದ ಬೆಳೆ ಹಾನಿಗೆ ಜಿಲ್ಲೆಯ ರೈತರಿಗೆ ಇದುವರೆಗೆ ಒಟ್ಟು ₹36.06 ಕೋಟಿ ಪರಿಹಾರ ಮೊತ್ತವು ಡಿಬಿಟಿ ಮೂಲಕ ನೇರವಾಗಿ ರೈತರ ಬ್ಯಾಂಕ್ ಖಾತೆಗಳಿಗೆ ಜಮೆ ಆಗಿದೆ.

11 ತಾಲೂಕುಗಳು ಬರಪೀಡಿತ ಎಂದು ಘೋಷಣೆಯಾಗಿದ್ದು, 78,323 ರೈತರನ್ನು ಗುರುತಿಸಲಾಗಿತ್ತು. ಕಾರವಾರ ತಾಲೂಕಿನಲ್ಲಿ 1178 ರೈತರಿಗೆ ₹29.97 ಲಕ್ಷ, ಜೋಯಿಡಾ 2948 ರೈತರಿಗೆ ₹130.98 ಲಕ್ಷ, ಹಳಿಯಾಳ 15122 ರೈತರಿಗೆ ₹1462.44 ಲಕ್ಷ, ಯಲ್ಲಾಪುರ 3896 ರೈತರಿಗೆ ₹179.29 ಲಕ್ಷ, ಮುಂಡಗೋಡ 7734 ರೈತರಿಗೆ ₹555.29 ಲಕ್ಷ, ಶಿರಸಿ 9802 ರೈತರಿಗೆ ₹453.59 ಲಕ್ಷ, ಅಂಕೋಲಾ 10942 ರೈತರಿಗೆ ₹205.07 ಲಕ್ಷ, ಕುಮಟಾ 8791ರೈತರಿಗೆ ₹131.08 ಲಕ್ಷ, ಸಿದ್ದಾಪುರದ 10819 ರೈತರಿಗೆ ₹311.32 ಲಕ್ಷ, ಭಟ್ಕಳದ 6451 ರೈತರಿಗೆ ₹88.84 ಲಕ್ಷ ಹಾಗೂ ದಾಂಡೇಲಿ ತಾಲೂಕಿನ 640 ರೈತರಿಗೆ ₹58.88 ಲಕ್ಷ ಸೇರಿದಂತೆ ಒಟ್ಟು ₹3606.77 ಲಕ್ಷ ಜಿಲ್ಲೆಯ ರೈತರ ಬ್ಯಾಂಕ್ ಖಾತೆಗೆ ಜಮೆ ಮಾಡಲಾಗಿದೆ.

ರೈತರ ಬ್ಯಾಂಕ್ ಖಾತೆಯಲ್ಲಿನ ಸಮಸ್ಯೆಗಳಲ್ಲಿ 4000ಕ್ಕೂ ಅಧಿಕ ಪ್ರಕರಣಗಳಲ್ಲಿ ಬ್ಯಾಂಕ್ ಗಳಲ್ಲಿ ಆಧಾರ್ ಸೀಡಿಂಗ್ ಆಗದೇ ಇರುವುದು, 1200ಕ್ಕೂ ಅಧಿಕ ಪ್ರಕರಣಗಳಲ್ಲಿ ಫ್ರುಟ್ಸ್ ತಂತ್ರಾಂಶ ಮತ್ತು ಆಧಾರ್‌ನಲ್ಲಿನ ಹೆಸರುಗಳ ಹೋಲಿಕೆಯಾಗದೇ ಇರುವುದು ಕಂಡುಬಂದಿದೆ. ಈ ಸಮಸ್ಯೆ ಸೇರಿದಂತೆ ಇತರೆ ತಾಂತ್ರಿಕ ಸಮಸ್ಯೆಗಳನ್ನೂ ಬಗೆಹರಿಸಲು ಸಾಧ್ಯವಿದ್ದು, ರೈತರು ಕೂಡಲೇ ತಮ್ಮ ತಾಲೂಕಿನಲ್ಲಿನ ಸಲಹಾ ಕೇಂದ್ರಗಳಿಗೆ ಅಗತ್ಯ ದಾಖಲೆಗಳೊಂದಿಗೆ ಭೇಟಿ ನೀಡಿ, ಇವುಗಳನ್ನು ಸರಿಪಡಿಸಿಕೊಳ್ಳಬಹುದು.ರೈತರ ಖಾತೆಗೆ ಜಮೆ: ಜಿಲ್ಲೆಯ ರೈತರಿಗೆ ಬರ ಪರಿಹಾರದ ಮೊತ್ತವನ್ನು ನೇರವಾಗಿ ಅವರ ಬ್ಯಾಂಕ್ ಖಾತೆಗಳಿಗೆ ಜಮೆ ಮಾಡಲಾಗುತ್ತಿದೆ. ಬ್ಯಾಂಕ್ ಖಾತೆಯ ಸಮಸ್ಯೆ ಸೇರಿದಂತೆ ಕೆಲವು ತಾಂತ್ರಿಕ ಸಮಸ್ಯೆಗಳಿಂದ ಕೆಲವು ರೈತರ ಖಾತೆಗಳಿಗೆ ಹಣ ಜಮೆ ಆಗಿಲ್ಲದಿರುವುದು ಗಮಕ್ಕೆ ಬಂದಿದೆ. ಜಿಲ್ಲೆಯ ಯಾವುದೇ ಅರ್ಹ ರೈತರು ಸರ್ಕಾರದ ಬರ ಪರಿಹಾರದಿಂದ ವಂಚಿತರಾಗಬಾರದು ಎಂಬ ಉದ್ದೇಶದಿಂದ ಎಲ್ಲ ತಾಲೂಕು ಕೇಂದ್ರಗಳಲ್ಲಿ ಸಲಹಾ ಕೇಂದ್ರಗಳನ್ನು ತೆರೆಯಲಾಗಿದೆ. ರೈತರು ತಮ್ಮ ಬ್ಯಾಂಕ್ ಪಾಸ್ ಪುಸ್ತಕ ಮತ್ತು ಆಧಾರ್ ಕಾರ್ಡ್‌ನೊಂದಿಗೆ ಈ ಕೇಂದ್ರಗಳಿಗೆ ತೆರಳಿ ತಮ್ಮ ಸಮಸ್ಯೆಯನ್ನು ಬಗೆಹರಿಸಿಕೊಳ್ಳಬಹುದು. ಜಿಲ್ಲೆಯ ಎಲ್ಲ ಅರ್ಹ ರೈತರು ಬೆಳೆ ಪರಿಹಾರದ ಮೊತ್ತವನ್ನು ತಪ್ಪದೇ ಪಡೆಯಬೇಕು ಎಂದು ಜಿಲ್ಲಾಧಿಕಾರಿ ಗಂಗೂಬಾಯಿ ಮಾನಕರ ತಿಳಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಮಾನಸಿಕ ಖಿನ್ನತೆ ಸ್ವಯಂ ಮೌಲ್ಯಮಾಪನಕ್ಕೆ ನಿಮ್ಹಾನ್ಸ್‌ ಆ್ಯಪ್‌
ಒಂದೇ ದಿನ ಜಡ್ಜ್‌ ಮುಂದೆ 60 ಪರೋಲ್‌ ಅರ್ಜಿ!