ಕನ್ನಡಪ್ರಭ ವಾರ್ತೆ ಕೆ.ಆರ್.ಪೇಟೆ
ಸ್ಥಳೀಯ ಜೆಡಿಎಸ್ ಮುಖಂಡರೊಂದಿಗೆ ತಾಲೂಕಿನ ಮಾವಿನಕಟ್ಟೆ ಕೊಪ್ಪಲು ಕೆರೆ ಪ್ರದೇಶಕ್ಕೆ ಭೇಟಿ ನೀಡಿ, ಮಾತನಾಡಿ, ಅತಿವೃಷ್ಟಿಯಿಂದ ಹಾನಿಗೀಡಾದ ತಾಲೂಕಿನ ಸಂತೇಬಾಚಹಳ್ಳಿ ಹೋಬಳಿಯ ಲೋಕನಹಳ್ಳಿ, ಮಾವಿನಕಟ್ಟೆ ಕೊಪ್ಪಲು ಮುಂತಾದ ಕೆರೆಗಳ ಅಭಿವೃದ್ಧಿಗೆ ಸರ್ಕಾರ ಮುಂದಾಗಿಲ್ಲ ಎಂದು ಕಿಡಿಕಾರಿದರು.
ಕಳೆದ 2021ರಲ್ಲಿ ಕ್ಷೇತ್ರದಲ್ಲಿ ಬಿದ್ದ ಭಾರೀ ಮಳೆಗೆ ತಾಲೂಕಿನ ಸಂತೇಬಾಚಹಳ್ಳಿ ಹೋಬಳಿಯ ಹಲವು ಕೆರೆಗಳು, ರಸ್ತೆ ಮತ್ತು ಸೇತುವೆಗಳು ಹಾನಿಗೀಡಾಗಿದ್ದವು. ಮೂರ್ನಾಲ್ಕು ವರ್ಷಗಳು ಕಳೆದಿದ್ದರೂ ಇದುವರೆಗೂ ರಾಜ್ಯ ಸರ್ಕಾರ ಅನುದಾನ ಬಿಡುಗಡೆ ಮಾಡಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.ಸಂತೇಬಾಚಹಳ್ಳಿ, ದೊಡ್ಡಕ್ಯಾತನಹಳ್ಳಿ ಮುಂತಾದ ಕೆರೆಗಳನ್ನು ರಿಪೇರಿ ಮಾಡಲಾಯಿತು. ಆದರೆ, ಲೋಕನಹಳ್ಳಿ, ಮಾವಿನಕಟ್ಟೆ ಕೊಪ್ಪಲು ಗ್ರಾಮದ ಒಡೆದು ಹೋದ ಕೆರೆಗಳನ್ನು ಇದುವರೆಗೂ ದುರಸ್ತಿ ಮಾಡಿಲ್ಲ. ತಾಲೂಕಿನಲ್ಲಿ ಉತ್ತಮ ಮಳೆಯಾಗುತ್ತಿದೆ. ಆದರೆ, ಒಡೆದು ಹೋಗಿರುವ ಕೆರೆಗಳಲ್ಲಿ ನೀರು ನಿಲ್ಲುತ್ತಿಲ್ಲ ಎಂದರು.
ಕೆರೆ ಏರಿ ರಿಪೇರಿ ಮಾಡಲು ಜಿಲ್ಲಾ ಉಸ್ತುವಾರಿ ಸಚಿವರು, ಸಣ್ಣ ನೀರಾವರಿ ಇಲಾಖೆಯ ಅಧೀಕ್ಷಕ ಇಂಜಿನಿಯರ್, ಮುಖ್ಯ ಅಭಿಯಂತರರು, ಕಾರ್ಯದರ್ಶಿಗಳು, ಜಿಲ್ಲಾಧಿಕಾರಿಗಳು, ಅಪರ ಮುಖ್ಯ ಕಾರ್ಯದರ್ಶಿಗಳಿಗೆ ಪತ್ರ ಬರೆದು ಮನವಿ ಮಾಡುತ್ತಿದ್ದರೂ ನಮ್ಮ ಮನವಿಗೆ ಯಾರೊಬ್ಬರೂ ಸ್ಪಂದಿಸಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು.
ತಾಲೂಕು ಜೆಡಿಎಸ್ ಅಧ್ಯಕ್ಷ ಜಾನಕಿ ರಾಮ್, ಸಂತೇಬಾಚಹಳ್ಳಿ ಹೋಬಳಿ ಜೆಡಿಎಸ್ ಅಧ್ಯಕ್ಷ ರವಿ, ತಾಪಂ ಮಾಜಿ ಸದಸ್ಯ ಮಲ್ಲೇನಹಳ್ಳಿ ಮೋಹನ್, ನೀರಾವರಿ ಇಲಾಖೆ ನಿವೃತ್ತ ಇಂಜಿನಿಯರ್ ಶಿವಲಿಂಗೇಗೌಡ, ಮಾವಿನಕಟ್ಟೆ ಕೊಪ್ಪಲು ಗ್ರಾಮಸ್ಥರಾದ ಸತೀಶ್, ದೇವರಾಜ್, ರವಿ, ಉಮೇಶ್, ಲೋಕನಹಳ್ಳಿ ಗ್ರಾಮಸ್ಥರಾದ ಮಹೇಶ್, ಶೀನಣ್ಣ, ಪಾಪಣ್ಣ, ತೇಜುಕುಮಾರ್, ಬಾಲರಾಜ್, ಜಗದೀಶ್ ಸೇರಿ ಹಲವು ಮುಖಂಡರು ಉಪಸ್ಥಿತರಿದ್ದರು.