ಕನ್ನಡಪ್ರಭ ವಾರ್ತೆ ಪಾಂಡವಪುರ
ಪಟ್ಟಣದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಹೇಮಾವತಿ ಅಣೆಕಟ್ಟೆ ವ್ಯಾಪ್ತಿಯ ಮಂಡ್ಯ ಜಿಲ್ಲೆಯ ಕೆ.ಆರ್.ಪೇಟೆ, ನಾಗಮಂಗಲ, ಪಾಂಡವಪುರ ತಾಲೂಕಿನಲ್ಲಿ ಲಕ್ಷಾಂತರ ಎಕ್ಟೇರ್ ಕೃಷಿ ಭೂಮಿ ಅವಲಂಭಿತವಾಗಿದೆ. ಹೇಮಾವತಿ ವ್ಯಾಪ್ತಿಯ ಪ್ರದೇಶದಲ್ಲಿ ಕೆರೆಕಟ್ಟೆಗಳು, ಹಳ್ಳಕೊಳ್ಳಲ್ಲದಲ್ಲಿ ಹನಿ ನೀರು ಇಲ್ಲದಂತೆ ಸಂಪೂರ್ಣವಾಗಿ ಬರಿದಾಗಿದೆ ಎಂದರು.
ರೈತರು ಬೋರ್ ಬೆಲ್ ಒತ್ತಿ ನೀರು ಹೊರತೆಯುವ ಪರಿಸ್ಥಿತಿ ಎದುರಾಗಿದೆ. ಹೇಮಾವತಿ ಅಣೆಕಟ್ಟೆಯಲ್ಲಿ 23 ಟಿಎಂಸಿ ನೀರು ಸಂಗ್ರಹವಾಗಿದೆ. ಅಣೆಕಟ್ಟೆಯಲ್ಲಿ ಡೆಡ್ ಸ್ಟೋರೇಜ್ ಹಾಗೂ ಕುಡಿಯುವ ನೀರಿಗಾಗಿ ಸಂಗ್ರಹಿಸಿಟ್ಟುಕೊಂಡು ಉಳಿಕೆ ನೀರನ್ನು ನಮ್ಮ ವ್ಯಾಪ್ತಿಯಲ್ಲಿ ಜನ-ಜಾನುವಾರುಗಳ ಕುಡಿಯುವ ನೀರಿಗೆ ಅನುಕೂಲವಾಗಲು ಕೆರೆಕಟ್ಟೆಗಳನ್ನು ತುಂಬಿಸಲು ನಾಲೆಗೆಳಿಗೆ ಶೀಘ್ರವೇ ನೀರು ಹರಿಸಬೇಕು ಎಂದು ಆಗ್ರಹಿಸಿದರು.ಹೇಮಾವತಿ ನಾಲೆಗಳಿಗೆ ನೀರುಹರಿಸುವ ವಿಚಾರದಲ್ಲಿ ಶಾಸಕಗಳು ಮೌನವಹಿಸಿದ್ದಾರೆ. ಕೆರೆಕಟ್ಟೆಗಳು ತುಂಬಿಸಲು ಕೂಡಲೇ ನೀರು ಹರಿಸದಿದ್ದರೆ ಉಗ್ರ ಹೋರಾಟ ರೂಪಿಸಬೇಕಾಗುತ್ತದೆ ಎಂದು ಎಚ್ಚರಿಸಿದರು.
ಕಳೆದ ವರ್ಷ ಕೆಆರ್ಎಸ್ ಅಣೆಕಟ್ಟೆ ಅವಧಿಗೂ ಮುನ್ನವೇ ಭರ್ತಿಯಾಗಿದ್ದರೂ ಸಹ ಅಧಿಕಾರಿಗಳು ಸರಿಯಾದ ರೀತಿಯಲ್ಲಿ ನೀರು ನಿರ್ವಹಣೆ ಮಾಡದ ಹಿನ್ನೆಲೆಯಲ್ಲಿ ನೀರಿನ ಕೊರತೆಯಿಂದ ಜಿಲ್ಲೆಯಲ್ಲಿ ಬೆಳೆದಿರುವ ಕಬ್ಬು ಬೆಳೆಗೆ ನೀರಿಲ್ಲದೆ ಸಂಪೂರ್ಣ ಒಣಗಿ ಹೋಗಿವೆ ಎಂದರು.
ನಾನು ಸಚಿವನಾಗಿ ಕೆಲಸ ಮಾಡುತ್ತಿದ್ದಾಗ ಕುಡಿಯುವ ನೀರು, ಕೆರೆ-ಕಟ್ಟೆಗಳ ತುಂಬಿಸಿ ಕೃಷಿಗೆ ನೀರು ಪೂರೈಕೆ ಮಾಡಬೇಕು ಎಂಬ ಸದುದ್ದೇಶದಿಂದ ಕೋಟ್ಯಂತರ ರು. ವೆಚ್ಚದಲ್ಲಿ ಬಳಘಟ್ಟ, ದುದ್ದ, ಶ್ಯಾದನಹಳ್ಳಿ, ಬಳೇಅತ್ತಿಗುಪ್ಪೆ ಗ್ರಾಮಗಳ ಏತನೀರಾವರಿ ಯೋಜನೆಗಳನ್ನು ನಿರ್ಮಿಸಲಾಗಿದೆ ಎಂದರು.
ಈ ವರ್ಷ ಅಣೆಕಟ್ಟೆಯಲ್ಲಿ ನೀರು ಇದ್ದರೂ ನೀರು ತುಂಬಿಸುವ ಕೆಲಸ ಮಾಡಲಿಲ್ಲ. ತಮಿಳುನಾಡಿಗೆ ನೀರು ಬಿಡಲು ಅಣೆಕಟ್ಟೆಯಲ್ಲಿ ನೀರು ಇಟ್ಟುಕೊಂಡಿದ್ದಾರೇನೋ? ಅನಿಸುತ್ತಿದೆ. ಕೂಡಲೇ ಏತನೀರಾವರಿ ಯೋಜನೆಗಳ ಮೂಲಕ ಕೆರೆಕಟ್ಟೆ ತುಂಬಿಸುವ ಕೆಲಸ ಮಾಡಬೇಕು ಎಂದು ಒತ್ತಾಯಿಸಿದರು.
ಸುದ್ದಿಗೋಷ್ಠಿಯಲ್ಲಿ ಟಿಎಪಿಸಿಎಂಎಸ್ ಅಧ್ಯಕ್ಷ ಚಿಕ್ಕಾಡೆ ಗಿರೀಶ್, ನಿರ್ದೇಶಕ ಆದರ್ಶ, ಪುರಸಭೆ ಮಾಜಿ ಅಧ್ಯಕ್ಷರಾದ ಆರ್.ಸೋಮಶೇಖರ್, ಎಂ.ಗಿರೀಶ್, ಪಿಎಲ್ ಡಿ ಬ್ಯಾಂಕ್ ಮಾಜಿ ಅಧ್ಯಕ್ಷ ಬಕೋಡಿ, ಉಮೇಶ್, ಶಶಿ,ಗುರು ಸೇರಿದಂತೆ ಹಲವರು ಹಾಜರಿದ್ದರು.