ಸೇಫ್ ಸ್ಟಾರ್ ಸಂಘದ ಯೋಜನೆಯಡಿ ಸದಸ್ಯರ ಕುಟುಂಬಕ್ಕೆ ಪರಿಹಾರ

KannadaprabhaNewsNetwork |  
Published : Jul 24, 2025, 01:45 AM IST
ಫೋಟೋ ಜು.೨೩ ವೈ.ಎಲ್.ಪಿ. ೦೧ | Kannada Prabha

ಸಾರಾಂಶ

ಸಂಸ್ಥೆ ಕೇವಲ ಸಾಲ ವಿತರಣೆ ಅಥವಾ ಹಣಕಾಸಿನ ವ್ಯವಹಾರಕ್ಕೆ ಸೀಮಿತವಾಗಿಲ್ಲ.

ಯಲ್ಲಾಪುರ: ಸಂಸ್ಥೆ ಕೇವಲ ಸಾಲ ವಿತರಣೆ ಅಥವಾ ಹಣಕಾಸಿನ ವ್ಯವಹಾರಕ್ಕೆ ಸೀಮಿತವಾಗಿಲ್ಲ. ಸದಸ್ಯರು, ಸಾಲಗಾರರ ಹಿತವನ್ನು ದೃಷ್ಟಿಯಲ್ಲಿರಿಸಿಕೊಂಡು ವಿವಿಧ ಸೌಲಭ್ಯಗಳನ್ನು ನೀಡುತ್ತಿದೆ ಎಂದು ಶಾಖೆಯ ಅಧ್ಯಕ್ಷ ಜಿ.ಎಸ್. ಭಟ್ಟ ಕಾರೆಮನೆ ಹೇಳಿದರು.

ಅವರು ಜು.೨೩ರಂದು ಪಟ್ಟಣದ ಸೇಫ್ ಸ್ಟಾರ್ ಸೌಹಾರ್ದ ಸಹಕಾರಿ ಸಂಘದ ಶಾಖೆಯಲ್ಲಿ ಜೀವನ ಮೌಲ್ಯದ ನಿಧಿ ಯೋಜನೆಯಡಿ ಸದಸ್ಯರ ಕುಟುಂಬಕ್ಕೆ ಪರಿಹಾರದ ಚೆಕ್ ವಿತರಿಸಿ, ಮಾತನಾಡಿದರು.

ಮೃತಪಟ್ಟ ಸದಸ್ಯರಾದ ದುರ್ಗವ್ವ ವಿಶ್ವಾಸ ಬೋವಿ ಕುಟುಂಬಕ್ಕೆ ₹೫೦ ಸಾವಿರ ಹಾಗೂ ಜೇವಾನಿ ಮ್ಯಾಕ್ಸಿ ಸಿದ್ದಿ ಅವರ ಕುಟುಂಬಕ್ಕೆ ₹೪೫ ಸಾವಿರ ಪರಿಹಾರದ ಮೊತ್ತ ನೀಡಿದರು.

ಹಿರಿಯ ಪತ್ರಕರ್ತ ಸುಬ್ರಾಯ ಬಿದ್ರೆಮನೆ ಮಾತನಾಡಿ, ಸೇಫ್ ಎಂಬುದು ಸಂಘದ ಹೆಸರಿನಲ್ಲೇ ಇದೆ. ಗ್ರಾಹಕರು ಸಂಘದಲ್ಲಿ ವ್ಯವಹಾರ ಮಾಡಿದರೆ ಎಲ್ಲ ರೀತಿಯಲ್ಲೂ ಸುರಕ್ಷಿತರಾಗಿರುತ್ತಾರೆ ಎಂದರು.

ಪತ್ರಕರ್ತ ಶ್ರೀಧರ ಅಣಲಗಾರ ಮಾತನಾಡಿ, ಜೀವನ ಮೌಲ್ಯ ನಿಧಿ ಯೋಜನೆಯ ಸದಸ್ಯರಿಗೆ ಉಪಯುಕ್ತವಾಗಿದೆ. ಸೇಫ್ ಸ್ಟಾರ್ ಸಹಕಾರಿ ಆರಂಭಿಸಿರುವ ಈ ಯೋಜನೆ ಇತರ ಸಹಕಾರಿ ಸಂಘಗಳಿಗೂ ಮಾದರಿಯಾಗಿದೆ ಎಂದರು.

ಸಂಘದ ಹಿರಿಯ ವ್ಯವಸ್ಥಾಪಕ ಸುಬ್ರಾಯ ಪೈ ಪ್ರಾಸ್ತಾವಿಕ ಮಾತನಾಡಿದರು. ವ್ಯವಸ್ಥಾಪಕ ಮಂಜುನಾಥ ಹಿರೇಮಠ ನಿರ್ವಹಿಸಿದರು.

ಸೇಫ್ ಸ್ಟಾರ್ ಸಂಘದ ಯೋಜನೆಯಡಿ ಸದಸ್ಯರ ಕುಟುಂಬಕ್ಕೆ ಪರಿಹಾರ ನೀಡಲಾಯಿತು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಹಾಸ್ಟೆಲ್ ಮಕ್ಕಳಿಗೆ ಹೊಸ ಜಾತಿ ಪ್ರಮಾಣಪತ್ರ ಶಾಕ್‌
₹400 ಕೋಟಿ ಇದ್ದ 2 ಕಂಟೇನರ್‌ ಲಾರಿಗಳೇ ಬೆಳಗಾವೀಲಿ ನಾಪತ್ತೆ!