ಅಡಾಣಿಗುಡ್ಡದ ಜನರ ಮನೆಗಳಿಗೆ ಶೀಘ್ರವೇ ಪರಿಹಾರ

KannadaprabhaNewsNetwork |  
Published : May 30, 2025, 01:30 AM IST
29ಎಚ್ಎಸ್ಎನ್11 : ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿರುವ ಅಡಾಣಿಗುಡ್ಡವನ್ನು ಪರಿಶೀಲನೆ ನಡೆಸಿದ ಜಿಲ್ಲಾ ಉಸ್ತುವರಿ ಕಾರ್ಯಧರ್ಶಿ ಖುಷ್ಪು ಗೊಯಲ್ ಚೌಧ್ರಿ. | Kannada Prabha

ಸಾರಾಂಶ

ಅಡಾಣಿಗುಡ್ಡದ ಜನರ ಮನೆಗಳಿಗೆ ಶೀಘ್ರವೇ ಪರಿಹಾರ ನೀಡುವ ಮೂಲಕ ಮನೆಗಳನ್ನು ತೆರವುಗೊಳಿಸಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಖುಷ್ಬು ಗೋಯಲ್ ಚೌದ್ರಿ ಹೇಳಿದರು. 90 ಡಿಗ್ರಿ ಕೋನದಲ್ಲಿ ಗುಡ್ಡಗಳನ್ನು ಕತ್ತರಿಸಿರುವುದು ಭೂಕುಸಿತಕ್ಕೆ ಕಾರಣವಾಗುತ್ತಿದೆ. ತೀವ್ರ ಭೂಕುಸಿತ ಆತಂಕ ಎದುರಿಸುತ್ತಿರುವ ಅಡಾಣಿ ಗುಡ್ಡದ ಸುಮಾರು ೧೦ ಕುಟುಂಬಗಳಿಗೆ ಈಗಾಗಲೇ ಪರಿಹಾರ ನೀಡಿ ಬೇರೆಡೆಗೆ ಸ್ಥಳಾಂತರಿಸಲಾಗಿದೆ. ಪರಿಹಾರ ದೊರೆಯದ ಕಾರಣ ಇನ್ನೂ ೧೦ಕ್ಕೂ ಅಧಿಕ ಕುಟುಂಬಗಳು ಆತಂಕದ ಮಧ್ಯೆ ಗುಡ್ಡದ ಪ್ರದೇಶದಲ್ಲೆ ಜೀವನ ನಡೆಸುತ್ತಿದ್ದಾರೆ ಎಂದರು.

ಕನ್ನಡಪ್ರಭ ವಾರ್ತೆ ಸಕಲೇಶಪುರ

ಅಡಾಣಿಗುಡ್ಡದ ಜನರ ಮನೆಗಳಿಗೆ ಶೀಘ್ರವೇ ಪರಿಹಾರ ನೀಡುವ ಮೂಲಕ ಮನೆಗಳನ್ನು ತೆರವುಗೊಳಿಸಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಖುಷ್ಬು ಗೋಯಲ್ ಚೌದ್ರಿ ಹೇಳಿದರು.

ಗುರುವಾರ ರಾಷ್ಟ್ರೀಯ ಹೆದ್ದಾರಿ ೭೫ರ ಭೂಕುಸಿತದ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ ನಂತರ ಅಧಿಕಾರಿಗಳೊಂದಿಗೆ ಮಾತನಾಡಿ, 90 ಡಿಗ್ರಿ ಕೋನದಲ್ಲಿ ಗುಡ್ಡಗಳನ್ನು ಕತ್ತರಿಸಿರುವುದು ಭೂಕುಸಿತಕ್ಕೆ ಕಾರಣವಾಗುತ್ತಿದೆ. ತೀವ್ರ ಭೂಕುಸಿತ ಆತಂಕ ಎದುರಿಸುತ್ತಿರುವ ಅಡಾಣಿ ಗುಡ್ಡದ ಸುಮಾರು ೧೦ ಕುಟುಂಬಗಳಿಗೆ ಈಗಾಗಲೇ ಪರಿಹಾರ ನೀಡಿ ಬೇರೆಡೆಗೆ ಸ್ಥಳಾಂತರಿಸಲಾಗಿದೆ. ಪರಿಹಾರ ದೊರೆಯದ ಕಾರಣ ಇನ್ನೂ ೧೦ಕ್ಕೂ ಅಧಿಕ ಕುಟುಂಬಗಳು ಆತಂಕದ ಮಧ್ಯೆ ಗುಡ್ಡದ ಪ್ರದೇಶದಲ್ಲೆ ಜೀವನ ನಡೆಸುತ್ತಿದ್ದಾರೆ. ಆದ್ದರಿಂದ, ಜಿಲ್ಲಾಡಳಿತ ಭೂಕುಸಿತ ಸಾಧ್ಯತೆ ಹೊಂದಿರುವ ಕುಟುಂಬಗಳನ್ನು ಗುರುತಿಸಿ ಭೂಮಿಯನ್ನು ವಶಕ್ಕೆ ಪಡೆದು ಪರಿಹಾರ ನೀಡುವ ಮೂಲಕ ಈ ಕುಟುಂಬಗಳನ್ನು ಶೀಘ್ರವೇ ಸ್ಥಳಾಂತರಿಸುವಂತೆ ಜಿಲ್ಲಾಡಳಿತಕ್ಕೆ ಸೂಚನೆ ನೀಡಿದ್ದೇನೆ. ಅಲ್ಲದೆ 90 ಡಿಗ್ರಿ ಕೋನ ಹೊಂದಿರುವ ಗುಡ್ಡವನ್ನು ೪೫ ಡಿಗ್ರಿ ಕೋನಾಕೃತಿಯಲ್ಲಿ ತುಂಡರಿಸುವಂತೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳಿಗೆ ಸೂಚನೆ ನೀಡಿದರು. ಈ ವೇಳೆ ಜಿಲ್ಲಾಧಿಕಾರಿ ಸತ್ಯಭಾಮ, ಉಪವಿಭಾಗಾಧಿಕಾರಿ ಕವಿತಾ, ತಹಸೀಲ್ದಾರ್ ಅರವಿಂದ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಪತ್ರಕರ್ತ ತಗಡೂರಿಗೆ ಲೋಹಿಯಾ ಪ್ರಶಸ್ತಿ ಪ್ರದಾನ
ಕನ್ನಡದಲ್ಲಿ ರೈಲ್ವೆ ಪರೀಕ್ಷೆಗೆ ಇಲಾಖೆ : ಕರವೇ