ವಿದ್ಯುತ್‌ ಅಪಘಾತದಲ್ಲಿ ಮೃತ ಸಿಬ್ಬಂದಿ ಕುಟುಂಬಕ್ಕೆ ಮೆಸ್ಕಾಂ 1 ಕೋಟಿ ರು.

KannadaprabhaNewsNetwork |  
Published : Jan 08, 2026, 03:00 AM IST
ವಿದ್ಯುತ್‌ ಅಪಘಾತದಲ್ಲಿ ಮೃತ ಸಿಬ್ಬಂದಿ ಕುಟುಂಬಕ್ಕೆ ಮೆಸ್ಕಾಂನಿಂದ 1 ಕೋಟಿ ರು.ಗಳ ವಿಮಾ ಚೆಕ್‌ನ್ನು ಹಸ್ತಾಂತರಿಸಲಾಯಿತು.  | Kannada Prabha

ಸಾರಾಂಶ

ಬೆಳ್ತಂಗಡಿ ಮೆಸ್ಕಾಂ ಶಾಖಾ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದ  ಉದ್ಯೋಗಿ ವಿಜೇಶ್‌ ಕುಮಾರ್‌  ಕರ್ತವ್ಯ ನಿರತ ಸಂದರ್ಭದಲ್ಲಿ ಸಂಭವಿಸಿದ ವಿದ್ಯುತ್‌ ಅಪಘಾತದಲ್ಲಿ ಮೃತಪಟ್ಟಿದ್ದರು. ಅವರ ಅವಲಂಬಿತರಿಗೆ 1 ಕೋಟಿ ರು. ಮೊತ್ತದ ವಿಮಾ ಚೆಕ್ಕನ್ನು ಮೆಸ್ಕಾಂ ಕಾರ್ಪೊರೇಟ್‌ ಕಚೇರಿಯಲ್ಲಿ ವಿತರಿಸಲಾಯಿತು.

ಮಂಗಳೂರು: ಬೆಳ್ತಂಗಡಿ ಮೆಸ್ಕಾಂ ಶಾಖಾ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ಮೆಸ್ಕಾಂ ಉದ್ಯೋಗಿ ವಿಜೇಶ್‌ ಕುಮಾರ್‌ ರವರು ಕರ್ತವ್ಯ ನಿರತ ಸಂದರ್ಭದಲ್ಲಿ ಸಂಭವಿಸಿದ ವಿದ್ಯುತ್‌ ಅಪಘಾತದಲ್ಲಿ ಮೃತಪಟ್ಟಿದ್ದರು. ಅವರ ಅವಲಂಬಿತರಿಗೆ 1 ಕೋಟಿ ರು. ಮೊತ್ತದ ವಿಮಾ ಚೆಕ್ಕನ್ನು ಮಂಗಳವಾರ ಮಂಗಳೂರಿನ ಮೆಸ್ಕಾಂ ಕಾರ್ಪೊರೇಟ್‌ ಕಚೇರಿಯಲ್ಲಿ ವಿತರಿಸಲಾಯಿತು. 

ವೈಯಕ್ತಿಕ ಗುಂಪು ಅಪಘಾತ ವಿಮಾ ಸೌಲಭ್ಯ

ಕೆನರಾ ಬ್ಯಾಂಕ್‌ನಲ್ಲಿ ವೇತನ ಉಳಿತಾಯ ಖಾತೆ ಹೊಂದುವ ಮೆಸ್ಕಾಂನಲ್ಲಿ ಕಾರ್ಯನಿರ್ವಹಿಸುವ ಎಲ್ಲ ಸಿಬ್ಬಂದಿಗೆ ವೈಯಕ್ತಿಕ ಗುಂಪು ಅಪಘಾತ ವಿಮಾ ಸೌಲಭ್ಯವನ್ನು ನೀಡಲಾಗುತ್ತಿದೆ.

ಮೃತರ ತಾಯಿ ಪೂರ್ಣಿಮಾ ಅವರಿಗೆ ಹಸ್ತಾಂತರ

ಮೆಸ್ಕಾಂ ಅಧ್ಯಕ್ಷ ಕೆ.ಹರೀಶ್‌ ಕುಮಾರ್‌ ಹಾಗೂ ವ್ಯವಸ್ಥಾಪಕ ನಿರ್ದೇಶಕ ಜಯಕುಮಾರ್‌ ಆರ್‌, ಕೆನರಾ ಬ್ಯಾಂಕ್‌ ಮಂಗಳೂರು ವೃತ್ತದ ಮಹಾ ಪ್ರಬಂಧಕ ಮಂಜುನಾಥ್‌ ಸಿಂಘೈರವರುಗಳು ಚೆಕ್ಕನ್ನು ಮೃತರ ತಾಯಿ ಪೂರ್ಣಿಮಾ ಅವರಿಗೆ ಹಸ್ತಾಂತರಿಸಿದರು. 

ಮೆಸ್ಕಾಂ ತಾಂತ್ರಿಕ ನಿರ್ದೇಶಕ ಹರೀಶ್‌ ಕುಮಾರ್‌ ವಿ, ಮುಖ್ಯ ಆರ್ಥಿಕ ಅಧಿಕಾರಿ ಮುರಳೀಧರ ನಾಯಕ್‌, ಅರ್ಥಿಕ ಸಲಹೆಗಾರ ದೇವರಾಜ್‌, ಪ್ರಧಾನ ವ್ಯವಸ್ಥಾಪಕ ಡಾ. ಮಂಜುನಾಥ ಸ್ವಾಮಿ, ಮಂಗಳೂರು ವಲಯದ ಮುಖ್ಯ ಎಂಜಿನಿಯರ್‌ ರವಿಕಾಂತ್‌ ಆರ್‌. ಕಾಮತ್‌, ಮಂಗಳೂರು ವೃತ್ತದ ಅಧೀಕ್ಷಕ ಎಂಜಿನಿಯರ್‌ (ವಿ) ಕೃಷ್ಣರಾಜ್‌.ಕೆ, ಬಂಟ್ವಾಳ ವಿಭಾಗದ ಕಾರ್ಯನಿರ್ವಾಹಕ ಎಂಜಿನಿಯರ್‌ ಸಂತೋಷ್‌ ನಾಯ್ಕ್‌, ನೌಕರ ಸಂಘದ ಉಪಾಧ್ಯಕ್ಷ ಶಂಕರ್‌ ಪ್ರಕಾಶ್‌, ಸಾರ್ವಜನಿಕ ಸಂಪರ್ಕಾಧಿಕಾರಿ ವಸಂತ ಶೆಟ್ಟಿ ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.
Read more Articles on

Recommended Stories

ಅನುವಾದಕರು ಸಾಂಸ್ಕೃತಿಕ ರಾಯಭಾರಿಗಳಿದ್ದಂತೆ:ಎಸ್.ಜಿ.ಎಸ್‌
9.5 ಲಕ್ಷ ಲಂಚ ಪಡೆದ ಕೇಂದ್ರ ವಿದ್ಯುತ್‌ಸಂಸ್ಥೆ ಜಂಟಿ ನಿರ್ದೇಶಕ ಸಿಬಿಐ ಬಲೆಗೆ