ಸಮನ್ವಯದ ಭಾರತದಲ್ಲಿ ಬಿಜೆಪಿಯಿಂದ ಧರ್ಮ-ಭೇದ ರಾಜಕೀಯ

KannadaprabhaNewsNetwork |  
Published : Apr 26, 2024, 12:53 AM IST
25ಡಿಡಬ್ಲೂಡಿ5ಧಾರವಾಡ ಗ್ರಾಮೀಣ ಕ್ಷೇತ್ರದ ಕೋಟೂರು ಗ್ರಾಮದಲ್ಲಿ ಕಾಂಗ್ರೆಸ್ ಅಭ್ಯರ್ಥಿ ವಿನೋದ ಅಸೂಟಿ ಅವರನ್ನು ಗ್ರಾಮಸ್ಥರು ಸನ್ಮಾನಿಸಿದರು.  | Kannada Prabha

ಸಾರಾಂಶ

ಎಲ್ಲಾ ಧರ್ಮದವರು ಒಂದೇ ಎಂಬುದು ಗೊತ್ತಿರುವ ಮಾತು. ಆದರೆ, ಬಿಜೆಪಿ ಮಖಂಡರು ಧರ್ಮದ ಹೆಸರಿನಲ್ಲಿ ಕಲಹ ಉಂಟು ಮಾಡುತ್ತಿದ್ದಾರೆ.

ಧಾರವಾಡ:

ಸರ್ವಧರ್ಮ ಸಮನ್ವಯದ ಭಾರತದಲ್ಲಿ ಬಿಜೆಪಿಯು ಧರ್ಮ-ಧರ್ಮಗಳ ನಡುವೆ ಜಗಳ ಹಚ್ಚಿ ಒಡೆದು ಆಳುವ ರಾಜಕೀಯ ಮಾಡುತ್ತಿದೆ. ಇದು ಹೀಗೆ ಮುಂದುವರಿದರೆ ಬರುವ ದಿನಗಳಲ್ಲಿ ನಮ್ಮಷ್ಟಕ್ಕೆ ನಾವೇ ಬಡಿದಾಡಿಕೊಳ್ಳುವ ಸ್ಥಿತಿ ಬರಲಿದೆ. ಈ ಹಿನ್ನೆಲೆಯಲ್ಲಿ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಬೆಂಬಲಿಸಲು ಅಭ್ಯರ್ಥಿ ವಿನೋದ್‌ ಅಸೂಟಿ ಮನವಿ ಮಾಡಿದರು. ಧಾರವಾಡ ಲೋಕಸಭಾ ವ್ಯಾಪ್ತಿಯ ಹಲವು ಕಡೆಗಳಲ್ಲಿ ಪ್ರಜಾಧ್ವನಿ ಯಾತ್ರೆಯಲ್ಲಿ ಮಾತನಾಡಿದ ಅವರು, ಎಲ್ಲಾ ಧರ್ಮದವರು ಒಂದೇ ಎಂಬುದು ಗೊತ್ತಿರುವ ಮಾತು. ಆದರೆ, ಬಿಜೆಪಿ ಮಖಂಡರು ಧರ್ಮದ ಹೆಸರಿನಲ್ಲಿ ಕಲಹ ಉಂಟು ಮಾಡುತ್ತಿದ್ದಾರೆ. ಧರ್ಮ, ಜಾತಿಗಳ ಮಧ್ಯೆ ಕಂದಕ ಉಂಟು ಮಾಡಿ ಆಳುತ್ತಿದ್ದಾರೆ. ಹತ್ತು ವರ್ಷಗಳಲ್ಲಿ ಕೇಂದ್ರ ಸರ್ಕಾರ ಮಾಡಿರುವ ಅಭಿವೃದ್ಧಿ ಕೆಲಸಗಳ ಮೇಲೆ ಮತ ಕೇಳಬೇಕಾದ ಬಿಜೆಪಿ ಧರ್ಮಗಳ ಆಧಾರದ ಮೇಲೆ ಮತ ಕೇಳುತ್ತಿರುವುದು ಏತಕ್ಕೆ? ಎಂದು ಪ್ರಶ್ನಿಸಿದರು.

ಯುವಕರಿಗೆ ಉದ್ಯೋಗ ಕೊಡುತ್ತೇವೆ, ರೈತರಿಗಾಗಿ ಯೋಜನೆಗಳನ್ನು ನೀಡುತ್ತೇವೆ ಎಂದು ಅಧಿಕಾರಕ್ಕೆ ಬಂದ ಬಿಜೆಪಿ ಈ ಆಶ್ವಾಸನೆ ಈಡೇರಿಸಿದೆಯೇ? ಹತ್ತು ವರ್ಷದ ಆಡಳಿತದಲ್ಲಿ ದೇಶದ ಜನ ಏನೂ ಕಾಣಲಿಲ್ಲ. ಬರೀ ಮೋದಿ ಹವಾ ನೋಡುವಂತಾಗಿದೆ. 70 ವರ್ಷ ಕಾಂಗ್ರೆಸ್‌ ಏನೂ ಮಾಡಲಿಲ್ಲ ಎಂದು ಬಿಜೆಪಿ ಮುಖಂಡರು ಹೇಳಿದ್ದೆ ಬಂತು. ತಾವು ಹತ್ತು ವರ್ಷಗಳಲ್ಲಿ ಏನು ಮಾಡಿದ್ದಾರೆ ಎಂಬುದು ಏತಕ್ಕೆ ಹೇಳುತ್ತಿಲ್ಲ ಎಂದರು.

ಕಾಂಗ್ರೆಸ್‌ ವಿಧಾನಸಭಾ ಚುನಾವಣೆಗೂ ಮೊದಲು ಘೋಷಣೆ ಮಾಡಿದ್ದಂತೆ ಐದು ಗ್ಯಾರಂಟಿಗಳನ್ನು ಕೇವಲ ಹತ್ತು ತಿಂಗಳಲ್ಲಿ ಜಾರಿ ಮಾಡಿದೆ. ಈ ಗ್ಯಾರಂಟಿಗಳು ಒಂದು ಧರ್ಮ, ಒಂದು ಸಮಾಜಕ್ಕೆ ಸೀಮಿತವಾಗಿಲ್ಲ. ಎಲ್ಲ ಜಾತಿ, ಧರ್ಮದವರಿಗೂ ಸಮಾನವಾಗಿ ಸಿಕ್ಕಿವೆ. ಇದು ಕಾಂಗ್ರೆಸ್‌ ಸಾಧನೆ. ಇದನ್ನೆಲ್ಲಾ ದೇಶದ, ಧಾರವಾಡ ಕ್ಷೇತ್ರದ ಜನರು ಅರ್ಥ ಮಾಡಿಕೊಳ್ಳಬೇಕು. ಇನ್ನಾದರೂ ಧಾರವಾಡ ಕ್ಷೇತ್ರದಲ್ಲಿ ಬದಲಾವಣೆ ಗಾಳಿ ಬೀಸಲಿ ಎಂದು ಅಸೂಟಿ ಮನವಿ ಮಾಡಿದರು.

ಗುರುವಾರ ಅಸೂಟಿ ಅ‍ವರು ಹುಬ್ಬಳ್ಳಿ ಸಮೀಪದ ತಡಸ, ಧಾರವಾಡ ಗ್ರಾಮೀಣ ವಿಧಾನಸಭಾ ಕ್ಷೇತ್ರದ ಬೇಲೂರಿನಲ್ಲಿ ಪ್ರಚಾರ ನಡೆಸಿದರು. ಬೇಲೂರ ಗ್ರಾಮದ ವಿಠ್ಠಲ್‌ ಹಾಗೂ ಗಣಪತಿ ದೇವಸ್ಥಾನಕ್ಕೆ ಭೇಟಿ ನೀಡಿ ಆಶೀರ್ವಾದ ಪಡೆದರು.

ಈ ವೇಳೆ ಶಿವಲೀಲಾ ಕುಲಕರ್ಣಿ, ಈಶ್ವರ ಶಿವಳ್ಳಿ, ಬಸಪ್ಪ ಸಂಡೂರ ಇದ್ದರು. ನಂತರ ಸಮೀಪದ ಕೋಟೂರ, ಶಿಂಗನಹಳ್ಳಿ ಗ್ರಾಮದಲ್ಲಿ ಅಸೂಟಿ ಪ್ರಚಾರ ಸಭೆ ನಡೆಯಿತು. ಕೋಟೂರ ಗ್ರಾಮದ ಉಡಚಮ್ಮದೇವಿ ದೇವಸ್ಥಾನಕ್ಕೆ ಭೇಟಿ ನೀಡಿ ಆಶೀರ್ವಾದ ಪಡೆದರು.ಸುಳ್ಳು ಹೇಳುವ ನಾಯಕರನ್ನು ಮತ್ತು ಸುಳ್ಳನ್ನೇ ಉಸಿರಾಗಿಸಿಕೊಂಡಿರುವ ರಾಜಕಾರಣಿಗಳಿಗೆ ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ತಕ್ಕ ಪಾಠ ಕಲಿಸಿ ಕಾಂಗ್ರೆಸ್‌ ಗೆಲ್ಲಿಸಿ ಎಂದು ವಿನೋದ ಅಸೂಟಿ ಹೇಳಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

2025ರಲ್ಲಿ ಬಿಯರ್‌ ಮಾರಾಟ ಭಾರೀ ಕುಸಿತ
ಜನಾಶೀರ್ವಾದದಿಂದ ದೀರ್ಘಾವಧಿ ಸಿಎಂ : ಸಿದ್ದು