ಕನ್ನಡಪ್ರಭ ವಾರ್ತೆ ಕೆ.ಎಂ.ದೊಡ್ಡಿ
ಭಾರತೀ ವಿದ್ಯಾ ಸಂಸ್ಥೆ ಕುವೆಂಪು ಸಭಾಂಗಣದಲ್ಲಿ ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಸುಜ್ಞಾನ ನಿಧಿ ಶಿಷ್ಯವೇತನ ಮಂಜೂರಾತಿ ಪತ್ರ ವಿತರಣೆ ಕಾರ್ಯಕ್ರಮದಲ್ಲಿ ಮಾತನಾಡಿ, ಧರ್ಮಸ್ಥಳದ ಗ್ರಾಮಾಭಿವೃದ್ಧಿ ಸಂಸ್ಥೆಯಿಂದ ಹಲವು ಜನಪಯೋಗಿ ಕಾರ್ಯಕ್ರಮ ನಡೆಯುತ್ತಿರುವುದು ನಿಜಕ್ಕೂ ಶ್ಲಾಘನೀಯ ಎಂದರು.
ಉನ್ನತ ವ್ಯಾಸಂಗ ಮಾಡಿ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಭಾಗವಹಿಸುವ ಅರ್ಹರು ಭಾರತೀ ವಿದ್ಯಾ ಸಂಸ್ಥೆಯಲ್ಲಿ ಗ್ರಂಥಾಲಯದ ಪ್ರಯೋಜನ ಪಡೆಯ ಬಹುದು ಜತೆಗೆ ಉತ್ತಮ ಲ್ಯಾಬ್ಗಳಿದ್ದು ಅವಶ್ಯಕತೆ ಇದ್ದರೆ ಅದನ್ನು ಬಳಿಸಿ ಕೊಳ್ಳಬಹುದು ಎಂದು ಸಲಹೆ ನೀಡಿದರು.ಯೋಜನೆ ಜಿಲ್ಲಾ ನಿರ್ದೇಶಕಿ ಎಂ. ಚೇತನಾ ಮಾತನಾಡಿ, ಶ್ರೀ ಕ್ಷೇತ್ರ ಸಂಸ್ಥೆಯಿಂದ ರಾಜ್ಯದಲ್ಲಿ ಈವರೆಗೆ ಒಟ್ಟು 1,25,010 ವಿದ್ಯಾರ್ಥಿಗಳಿಗೆ 153 ಕೋಟಿ ರು.ಮೊತ್ತ ವಿದ್ಯಾರ್ಥಿಗಳಿಗೆ ಸುಜ್ಞಾನ ನಿಧಿ ಶಿಷ್ಯ ವೇತನ ಮಂಜೂರು ಮಾಡಲಾಗುತ್ತಿದೆ ಎಂದು ಮಾಹಿತಿ ನೀಡಿದರು.
ಇದೇ ವೇಳೆ ಯೋಜನೆಯಿಂದ ಮಂಜೂರಾದ ಸುಜ್ಞಾನ ನಿಧಿ ಶಿಷ್ಯ ವೇತನ ಮಂಜೂರಾತಿ ಪತ್ರಗಳನ್ನು ವಿದ್ಯಾರ್ಥಿಗಳಿಗೆ ವಿತರಿಸಲಾಯಿತು.ಕಾರ್ಯಕ್ರಮದಲ್ಲಿ ಮಂಡ್ಯ ಜಿಲ್ಲಾ ಜನಜಾಗೃತಿ ಸದಸ್ಯ ಕ್ಯಾತಘಟ್ಟ ರವಿಕುಮಾರ್, ಜಿಲ್ಲಾ ಜನಜಾಗೃತಿ ಸದಸ್ಯೆ ಧರಣಿ ಪುಟ್ಟೇಗೌಡ, ಯೋಜನಾಧಿಕಾರಿ ಸುವರ್ಣ ಗಣಪತಿ ಭಟ್ ಮೇಲ್ವಿಚಾರಕರು, ಪೋಷಕರು ಹಾಗೂ ವಿದ್ಯಾರ್ಥಿಗಳು ಭಾಗವಹಿಸಿದ್ದರು.
ಮೇಲುಕೋಟೆ:
ಇದೇ ವೇಳೆ ಸೇವೆಯಲ್ಲಿದ್ದಾಗಲೇ ಅಕಾಲಿಕ ಮರಣ ಹೊಂದಿದ ಚಿನಕುರಳಿ ಕೆಪಿಎಸ್ ಶಾಲೆ ಶಿಕ್ಷಕ ಚಿಕ್ಕಬಸಪ್ಪ ಇಲಾಖೆಗೆ ಸಲ್ಲಿಸಿದ ಸೇವೆ ಸ್ಮರಿಸಿ ಮೃತರ ಪತ್ನಿ ಗೌರವಾರ್ಪಣೆ ಮಾಡಲಾಯಿತು. ಜೊತೆಗೆ ತಾಲೂಕಿನಲ್ಲಿ ವಿವಿಧ ಶಾಲೆಗಳಲ್ಲಿ ಸೇವೆ ಸಲ್ಲಿಸಿ ನಿವೃತ್ತದಾದ ಪ್ರಾಥಮಿಕ, ಪ್ರೌಢ, ಕಾಲೇಜು ಶಿಕ್ಷಕರನ್ನು ಅಭಿನಂದಿಸಿ ಬೀಳ್ಕೊಡಲಾಯಿತು.