ಕನ್ನಡಪ್ರಭ ವಾರ್ತೆ ನಾಗಮಂಗಲ
ಪಟ್ಟಣದಲ್ಲಿ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘ ಮತ್ತು ರಾಜ್ಯ ರೈತ ಕೃಷಿ ಸಂವರ್ಧನ ಕೇಂದ್ರ ತಾಲೂಕು ಘಟಕದ ಸಹಭಾಗಿತ್ವದಲ್ಲಿ ಸೋಮವಾರ ಆಯೋಜಿಸಿದ್ದ ರಾಷ್ಟ್ರಕವಿ ಕುವೆಂಪು ಜಯಂತಿ ಹಾಗೂ ರಾಷ್ಟ್ರೀಯ ರೈತ ದಿನಾಚರಣೆಯಲ್ಲಿ ಕುವೆಂಪು ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿದ ಬಳಿಕ ಮಾತನಾಡಿದರು.
ರೈತ ದೇಶದ ಬೆನ್ನೆಲುಬು. ನಾವು ಎಷ್ಟೇ ಶ್ರೀಮಂತರಾಗಿದ್ದರೂ ಕೂಡ ರೈತರು ಬೆಳೆದುಕೊಡುವ ಅನ್ನ ತಿನ್ನಬೇಕೇ ಹೊರತು ಬೇರೆನೂ ತಿಂದು ಬದುಕಲು ಸಾಧ್ಯವಿಲ್ಲ. ಹಾಗಾಗಿ ಇಡೀ ಪ್ರಪಂಚದಲ್ಲಿ ಅತ್ಯಂತ ಸ್ವಾಭಿಮಾನದ ಬದುಕು ಇದ್ದರೆ ಅದು ರೈತನ ಬದುಕು ಮಾತ್ರ ಎಂದರು.ತಾಲೂಕು ರೈತ ಸಂಘದ ಅಧ್ಯಕ್ಷ ಸಿ.ರಂಗೇಗೌಡ ಮಾತನಾಡಿ, ಸರ್ಕಾರದ ವತಿಯಿಂದ ಹಲವು ಮಹನೀಯರ ಜಯಂತಿ ಹಾಗೂ ರಾಷ್ಟ್ರೀಯ ಹಬ್ಬಗಳನ್ನು ಆಚರಿಸುವಂತೆ ದೇಶಕ್ಕೆ ಅನ್ನ ನೀಡುವ ರೈತರ ದಿನಾಚರಣೆಯನ್ನೂ ಕೂಡ ದೊಡ್ಡಮಟ್ಟದಲ್ಲಿ ಆಚರಿಸಬೇಕು ಎಂದು ತಿಳಿಸಿದರು.
ರೈತರು ಈ ದೇಶದ ಬಹುದೊಡ್ಡ ಶಕ್ತಿ ಅಂತಹ ರೈತರ ದಿನಾಚರಣೆಯನ್ನು ಮುಂದಿನ ದಿನಗಳಲ್ಲಿ ದೊಡ್ಡಮಟ್ಟದಲ್ಲಿ ಆಯೋಜಿಸಬೇಕಿದೆ. ಇದಕ್ಕೆ ಪೂರಕವಾಗಿ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘ ಪೂರ್ಣಪ್ರಮಾಣದ ಸಹಕಾರ ನೀಡಲು ಸಿದ್ಧವಿದೆ ಎಂದು ಹೇಳಿದರು.
ರೈತ ಮುಖಂಡ ದಡಗ ಸತೀಶ್, ತಾಲೂಕು ಕೃಷಿಕ ಸಮಾಜದ ಉಪಾಧ್ಯಕ್ಷ ಮಹಾಬಲೇಶ್ವರ, ಪ್ರಗತಿಪರ ರೈತ ಬಿ.ಶೆಟ್ಟಹಳ್ಳಿ ರಾಮು ಹಾಗೂ ಪತ್ರಕರ್ತರ ಸಂಘದ ಅಧ್ಯಕ್ಷ ಕೆ.ಸೀತಾರಾಮು ಅಧ್ಯಕ್ಷತೆ ವಹಿಸಿ ಮಾತನಾಡಿದರು. ಇದೇ ವೇಳೆ ತಾಲೂಕಿನ ಬಿ.ಶೆಟ್ಟಹಳ್ಳಿ ಪ್ರಗತಿಪರ ರೈತ ಎಸ್.ಬಿ.ರಾಮು ಅವರಿಗೆ ಕೃಷಿ ಕಾಯಕ ಪ್ರಶಸ್ತಿ ಪತ್ರ ನೀಡಿ ಗೌರವಿಸಲಾಯಿತು.ಪತ್ರಕರ್ತರ ಸಂಘದ ಪ್ರಧಾನ ಕಾರ್ಯದರ್ಶಿ ವಸಂತಕುಮಾರ್, ಖಜಾಂಚಿ ಎನ್.ಮಹೇಶ್, ಸದಸ್ಯರಾದ ಪುಟ್ಟರಾಜು, ಬಿ.ಎಚ್.ರವಿ, ಎನ್.ಡಿ.ವಸಂತಕುಮಾರ್, ಬಿ.ಆರ್.ಕುಮಾರ್, ಡಿ.ಆರ್.ಜಗದೀಶ್, ಶ್ರೀನಿವಾಸ್, ಯೋಗೇಶ್ ಸೇರಿದಂತೆ ಹಲವು ರೈತರು ಇದ್ದರು.