ಸ್ವಾತಂತ್ರ್ಯಕ್ಕಾಗಿ ಹೋರಾಡಿದ ಮಹಾಪುರುಷರನ್ನು ಸ್ಮರಿಸಿ: ರಾಹುಲ್ ಶಿಂಧೆ

KannadaprabhaNewsNetwork |  
Published : Aug 17, 2024, 12:46 AM IST
ಬೆಳಗಾವಿ ಜಿಪಂ ಆವರಣದಲ್ಲಿ ಸ್ವಾತಂತ್ರ್ಯ ದಿನಾಚರಣೆ ಆಚರಿಸಲಾಯಿತು. | Kannada Prabha

ಸಾರಾಂಶ

ಅನೇಕ ದಿಗ್ಗಜರು, ಮಹಾಪುರುಷರು ಸ್ವಾತಂತ್ರ್ಯಕ್ಕಾಗಿ ಹೋರಾಟ ಮಾಡಿ ತಮ್ಮ ಪ್ರಾಣವನ್ನು ದೇಶಕ್ಕಾಗಿ ಸಮರ್ಪಿಸಿದ್ದಾರೆ. ಅಂತಹವರನ್ನು ನೆನೆಯುವ ದಿವಸ ಇದಾಗಿದೆ ಎಂದು ಜಿಪಂ ಸಿಇಒ ರಾಹುಲ್ ಶಿಂಧೆ ಹೇಳಿದರು.

ಕನ್ನಡಪ್ರಭ ವಾರ್ತೆ ಬೆಳಗಾವಿ

ಅನೇಕ ದಿಗ್ಗಜರು, ಮಹಾಪುರುಷರು ಸ್ವಾತಂತ್ರ್ಯಕ್ಕಾಗಿ ಹೋರಾಟ ಮಾಡಿ ತಮ್ಮ ಪ್ರಾಣವನ್ನು ದೇಶಕ್ಕಾಗಿ ಸಮರ್ಪಿಸಿದ್ದಾರೆ. ಅಂತಹವರನ್ನು ನೆನೆಯುವ ದಿವಸ ಇದಾಗಿದೆ. ಸ್ವಾತಂತ್ರ್ಯ ಸಿಕ್ಕು 77 ವರ್ಷವಾಗಿದ್ದು, ದೇಶ ಪ್ರಗತಿ ಹೊಂದುತ್ತಲಿದೆ. ಇನ್ನೂ ಬಹಳಷ್ಟು ಕ್ಷೇತ್ರಗಳಲ್ಲಿ ಪ್ರಗತಿ ಹೊಂದಬೇಕಾಗಿದೆ ಎಂದು ಜಿಪಂ ಸಿಇಒ ರಾಹುಲ್ ಶಿಂಧೆ ಹೇಳಿದರು.

ಜಿಪಂ ಆವರಣದಲ್ಲಿ ಗುರುವಾರ 78ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಮಹನೀಯರ ಭಾವಚಿತ್ರಗಳಿಗೆ ಪೂಜೆ ಸಲ್ಲಿಸಿ, ಧ್ವಜಾರೋಹಣ ನೆರವೇರಿಸಿ ಮಾತನಾಡಿದರು. ಸ್ವಾತಂತ್ರವನ್ನು ನಾವು ಲಘುವಾಗಿ ತೆಗೆದುಕೊಂಡಿದ್ದೇವೆ ಅದರ ಮಹತ್ವ ಗೊತ್ತಾಗುವುದಿಲ್ಲ. ಮುಂದಿನ ಪೀಳಿಗೆಗೆ ಕೂಡ ಸ್ವಾತಂತ್ರ್ಯ ಅಂದರೆ ಏನು. ಅದನ್ನು ಪಡೆಯಲು ಪ್ರಾಣತೆತ್ತ ಮಹಾಪುರುಷರ ಕತೆಗಳನ್ನು ತಿಳಿಸಬೇಕಿದೆ. ಅಂದಾಗ ಮಾತ್ರ ನಾವು ಅವರಿಗೆ ಗೌರವ ಸಲ್ಲಿಸಿದಂತಾಗಲಿದೆ ಎಂದು ಹೇಳಿದರು.

ಸಂವಿಧಾನದ ಮುನ್ನುಡಿಯಲ್ಲಿ ತಿಳಿಸಿದ ನ್ಯಾಯ, ಸಮಾನತೆ, ಸ್ವಾತಂತ್ರ್ಯ ಮತ್ತು ಭ್ರಾತೃತ್ವ ಇವುಗಳನ್ನು ಎಲ್ಲರೂ ಅರ್ಥಮಾಡಿಕೊಂಡು ತಮ್ಮ ಕಾರ್ಯವನ್ನು ಪ್ರಾಮಾಣಿಕವಾಗಿ ನಿರ್ವಹಿಸಬೇಕು. ಗ್ರಾಮೀಣ ಅಭಿವೃದ್ಧಿಯಲ್ಲಿ ಜಿಪಂ ಪಾತ್ರ ಬಹಳ ಪ್ರಮುಖವಾಗಿದೆ. ಬಡತನ ನಿರ್ಮೂಲನೆ, ಶಿಕ್ಷಣ ಮತ್ತು ಆರೋಗ್ಯ ಮುಂತಾದ ವ್ಯವಸ್ಥೆಗಳನ್ನು ನೀಡುವುದು ನಮ್ಮ ಆದ್ಯ ಕರ್ತವ್ಯವಾಗಿದ್ದು, ಎಲ್ಲರೂ ತಮ್ಮ ಕಾರ್ಯವನ್ನು ಪ್ರಾಮಾಣಿಕವಾಗಿ ಮಾಡಿದಲ್ಲಿ ಮಾತ್ರ ನಮ್ಮ ಪೂರ್ವಜರು ಕಂಡ ಕನಸು ನನಸಾಗುತ್ತದೆ ಎಂದವರು ಹೇಳಿದರು.

ಜಿಪಂಮುಖ್ಯ ಲೆಕ್ಕಾಧಿಕಾರಿ ಪರಶುರಾಮ ದುಡಗುಂಟಿ, ಮುಖ್ಯ ಯೋಜನಾಧಿಕಾರಿ ಗಂಗಾಧರ ದಿವಟರ, ಶಿಕ್ಷಣಾಧಿಕಾರಿ ಬಿಸಿಊಟ ಯೋಜನೆ ಲಕ್ಷ್ಮಣ ಯಕ್ಕುಂಡಿ, ಲೆಕ್ಕಾಧಿಕಾರಿ ಗಂಗಾ ಹಿರೇಮಠ, ಸಹಾಯಕ ಕಾರ್ಯದರ್ಶಿ ರಾಹುಲ ಕಾಂಬಳೆ, ಕಚೇರಿ ಅಧೀಕ್ಷಕ ಬಸವರಾಜ ಮುರಘಾಮಠ, ಸಹಾಯಕ ನಿರ್ದೇಶಕಿ ಜಯಶ್ರೀ ನಂದೆಣ್ಣವರ ಹಾಗೂ ಜಿಪಂ ಸಿಬ್ಬಂದಿ ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಹಾಸ್ಟೆಲ್ ಮಕ್ಕಳಿಗೆ ಹೊಸ ಜಾತಿ ಪ್ರಮಾಣಪತ್ರ ಶಾಕ್‌
₹400 ಕೋಟಿ ಇದ್ದ 2 ಕಂಟೇನರ್‌ ಲಾರಿಗಳೇ ಬೆಳಗಾವೀಲಿ ನಾಪತ್ತೆ!