ನಿಷ್ಠೆ, ಭಕ್ತಿಯಿಂದ ಅಯ್ಯಪ್ಪನ ನೆನೆದರೆ ಫಲ: ಶ್ರೀ ಸಚ್ಚಿದಾನಂದ ಜ್ಞಾನೇಶ್ವರ ಭಾರತಿ ಮಹಾಸ್ವಾಮಿಗಳು

KannadaprabhaNewsNetwork |  
Published : Dec 28, 2024, 01:03 AM IST
ಅಯ್ಯಪ್ಪಸ್ವಾಮಿ ದೇವಸ್ಥಾನ ರಜತ ಮಹೋತ್ಸವ ಪುನರ್ ಪ್ರತಿಷ್ಠಾಪನೆ | Kannada Prabha

ಸಾರಾಂಶ

ಮುಂಡಗೋಡ ನಗರದ ಅಯ್ಯಪ್ಪಸ್ವಾಮಿ ದೇವಸ್ಥಾನ ಪ್ರತಿಷ್ಠಾಪನೆಗೊಂಡು ೨೫ ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ಶುಕ್ರವಾರ ರಜತ ಮಹೋತ್ಸವ ಹಾಗೂ ಪುನರ್ ಪ್ರತಿಷ್ಠಾಪನೆ ಕಾರ್ಯಕ್ರಮ ನಡೆಯಿತು. ಹೊನ್ನಾವರ ತಾಲೂಕು ಕರ್ಕಿ ಪೀಠದ ಶ್ರೀ ಸಚ್ಚಿದಾನಂದ ಜ್ಞಾನೇಶ್ವರ ಭಾರತಿ ಮಹಾಸ್ವಾಮಿಗಳು ಸಾನ್ನಿಧ್ಯ ವಹಿಸಿದ್ದರು.

ಮುಂಡಗೋಡ: ಎಲ್ಲೆಲ್ಲಿಯೂ ಅಯ್ಯಪ್ಪ ಎಂದು ಹೇಳಿದರೆ ಜೀವನ ಸಾರ್ಥಕವಾಗುತ್ತದೆ. ಅಯ್ಯಪ್ಪಸ್ವಾಮಿ ಆರಾಧನೆಯಿಂದ ಹರಿ-ಹರನ ಆರಾಧನೆ ಮಾಡಿದಂತಾಗುತ್ತದೆ ಎಂದು ಹೊನ್ನಾವರ ತಾಲೂಕು ಕರ್ಕಿ ಪೀಠದ ಶ್ರೀ ಸಚ್ಚಿದಾನಂದ ಜ್ಞಾನೇಶ್ವರ ಭಾರತಿ ಮಹಾಸ್ವಾಮಿಗಳು ಹೇಳಿದರು.

ಶುಕ್ರವಾರ ನಗರದ ಅಯ್ಯಪ್ಪಸ್ವಾಮಿ ದೇವಸ್ಥಾನ ಪ್ರತಿಷ್ಠಾಪನೆಗೊಂಡು ೨೫ ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ರಜತ ಮಹೋತ್ಸವ ಹಾಗೂ ಪುನರ್ ಪ್ರತಿಷ್ಠಾಪನೆ ನೆರವೇರಿಸಿ ಶ್ರೀಗಳು ಆಶೀರ್ವಚನ ನೀಡಿದರು. ಭಕ್ತಿ, ಶ್ರದ್ಧೆ, ವಿಶ್ವಾಸ, ನಂಬಿಕೆಯಿಂದ ಮಾಲಾಧಾರಿಗಳು ಮಾಲೆಯನ್ನು ಧರಿಸುತ್ತಾರೆ. ನಿಷ್ಠೆ ಹಾಗೂ ಭಕ್ತಿಯಿಂದ ಅಯ್ಯಪ್ಪನನ್ನು ನೆನೆದರೆ ದೇವರನ್ನು ಕಾಣಬಹುದು ಎಂದರು.

ಅದ್ಧೂರಿ ಮೆರವಣಿಗೆ:ಬೆಳಗ್ಗೆ ಪಟ್ಟಣದ ಪ್ರವಾಸಿ ಮಂದಿರದಿಂದ ತೆರೆದ ವಾಹನದಲ್ಲಿ ಹೊನ್ನಾವರ ತಾಲೂಕು ಕರ್ಕಿ ಪೀಠದ ಶ್ರೀ ಸಚ್ಚಿದಾನಂದ ಜ್ಞಾನೇಶ್ವರ ಭಾರತಿ ಮಹಾಸ್ವಾಮಿಗಳ ಮೆರವಣಿಗೆ ನಡೆಯಿತು. ಪಟ್ಟಣದ ಪ್ರಮುಖ ಬೀದಿಗಳ ಮೂಲಕ ಸಂಚರಿಸಿತು. ಮೆರವಣಿಗೆಯಲ್ಲಿ ಮಹಿಳೆಯರ ಪೂರ್ಣಕುಂಭ, ಚಂಡೆ ವಾದ್ಯ ಹಾಗೂ ಅಯ್ಯಪ್ಪಸ್ವಾಮಿ ಮಾಲಾಧಾರಿಗಳ ಅಯ್ಯಪ್ಪ ನಾಮಸ್ಮರಣೆ ಗಮನ ಸೆಳೆಯಿತು.ಬಳಿಕ ಅಯ್ಯಪ್ಪಸ್ವಾಮಿ ಪ್ರತಿಷ್ಠಾಪನೆ, ಕಲಾನ್ಯಾಸ, ಕಲಾವೃದ್ಧಿ ಹೋಮ ನಡೆದ ಬಳಿಕ ಮಧ್ಯಾಹ್ನ ಪೂರ್ಣಾಹುತಿ, ಪೂರ್ಣಕಲಾರೋಹಣ, ಕುಂಭಾಭಿಷೇಕ, ಅಲಂಕಾರ ಮಹಾ ನೈವೇದ್ಯ, ಮಹಾಪೂಜೆ, ತೀರ್ಥ ಪ್ರಸಾದ ವಿನಿಯೋಗ ಜರುಗಿತು. ಮಧ್ಯಾಹ್ನ ಅನ್ನಸಂತರ್ಪಣೆ ಜರುಗಿತು. ಶ್ರೀ ಅಯ್ಯಪ್ಪ ಸ್ವಾಮಿ ದೇವಾಲಯ ವಿಶ್ವಸ್ಥ ಸಮಿತಿ ಅಧ್ಯಕ್ಷ ವಿನಾಯಕ ರಾಯ್ಕರ ನೇತೃತ್ವದಲ್ಲಿ ಕಾರ್ಯಕ್ರಮ ಜರುಗಿತು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಬೆಸ್ಕಾಂ ಸೇವೆ ಅಸ್ತವ್ಯಸ್ತ: 12311 ಕೇಸ್‌ಗಳು ದಾಖಲು
ಮಳೆ ದಿನ ಕಳೆದರೂ ನಗರವಿನ್ನೂ ಅಸ್ತವ್ಯಸ್ತ