ಜಿಲ್ಲೆಯಾದ್ಯಂತ ಸ್ವಾತಂತ್ರ್ಯ ಹೋರಾಟಗಾರರ ಸ್ಮರಣೆ

KannadaprabhaNewsNetwork |  
Published : Aug 17, 2024, 12:58 AM IST
16ಕೆಆರ್ ಎಂಎನ್ 2.ಜೆಪಿಜಿರಾಮನಗರದ ಜಾನಪದ ಲೋಕದಲ್ಲಿ ಸ್ವಾತಂತ್ರ್ಯೋತ್ಸವದ ಪ್ರಯುಕ್ತ ಕೆ.ಎಲ್ .ನಾಗೇಗೌಡರ ಪ್ರತಿಮೆಗೆ ಮಾಲಾರ್ಪಣೆ ಮಾಡಲಾಯಿತು. | Kannada Prabha

ಸಾರಾಂಶ

ನಾಡಿನ ಅನೇಕ ವೀರರ ತ್ಯಾಗ ಬಲಿದಾನದ ಫಲವಾಗಿ ನಮಗೆ ಸ್ವಾತಂತ್ರ್ಯ ಸಿಕ್ಕಿದೆ ಎಂದು ಕರ್ನಾಟಕ ಜಾನಪದ ಪರಿಷತ್‌ ಅಧ್ಯಕ್ಷ ಹಾಗೂ ಹಂಪಿ ವಿವಿ ಮಾಜಿ ಕುಲಪತಿ ಪ್ರೊ. ಹಿ.ಚಿ.ಬೋರಲಿಂಗಯ್ಯ ಹೇಳಿದರು.

ಕನ್ನಡಪ್ರಭ ವಾರ್ತೆ ರಾಮನಗರ

ನಾಡಿನ ಅನೇಕ ವೀರರ ತ್ಯಾಗ ಬಲಿದಾನದ ಫಲವಾಗಿ ನಮಗೆ ಸ್ವಾತಂತ್ರ್ಯ ಸಿಕ್ಕಿದೆ ಎಂದು ಕರ್ನಾಟಕ ಜಾನಪದ ಪರಿಷತ್‌ ಅಧ್ಯಕ್ಷ ಹಾಗೂ ಹಂಪಿ ವಿವಿ ಮಾಜಿ ಕುಲಪತಿ ಪ್ರೊ. ಹಿ.ಚಿ.ಬೋರಲಿಂಗಯ್ಯ ಹೇಳಿದರು.

ನಗರದ ಜಾನಪದ ಲೋಕದಲ್ಲಿ ಧ್ವಜಾರೋಹಣ ನೆರವೇರಿ ಮಾತನಾಡಿದರು. ಸ್ವಾತಂತ್ರ್ಯ ಪಡೆದ ಭಾರತ ತಾಂತ್ರಿಕವಾಗಿ ಅಭಿವೃದ್ಧಿ ಪಥದತ್ತ ಸಾಗಿದೆ. ಈಗ ಭಾರತ ವಿಶ್ವದಲ್ಲೇ ಅತ್ಯಂತ ಅಗ್ರಸ್ಥಾನದಲ್ಲಿದೆ. ಇಂತಹ ಸಂದರ್ಭದಲ್ಲಿ ಪರಸ್ವರ ಕಿತ್ತಾಟಗಳನ್ನು ಬಿಟ್ಟು ಎಲ್ಲ ರಂಗದಲ್ಲೂ ಪ್ರಗತಿ ಸಾಧಿಸಬೇಕಿದೆ. ಅಂತಹ ಕಾರ್ಯದಲ್ಲಿ ನಮ್ಮಂತಹ ಸಂಸ್ಥೆಯು ಇಂತಹ ಮಹತ್ಕಾರ್ಯವನ್ನು ಸಾಧಿಸಬೇಕಿದೆ. ಎಲ್ಲರೂ ಈ ನಿಟ್ಟಿನಲ್ಲಿ ದುಡಿಯಬೇಕಿದೆ ಎಂದು ತಿಳಿಸಿದರು.

ಕೆ.ಎಲ್ .ನಾಗೇಗೌಡರ ಪ್ರತಿಮೆಗೆ ಮಾಲಾರ್ಪಣೆ ಮಾಡಲಾಯಿತು. ಜಾನಪದ ಲೋಕದ ಕಾರ್ಯನಿರ್ವಹಣಾಧಿಕಾರಿ ಸರಸವಾಣಿ, ಕ್ಯೂರೇಟರ್ ಡಾ. ರವಿ, ರಂಗ ಸಹಾಯಕರಾದ ಪ್ರದೀಪ್, ಸಂಶೋಧನ ಕೇಂದ್ರದ ಸಂಚಾಲಕರಾದ ಡಾ.ಸಂದೀಪ್, ಜಾನಪದ ಲೋಕದ ಸಿಬ್ಬಂದಿಗಳು, ಹಾವೇರಿಯ ಜಾನಪದ ಪ್ರತಿಮೆಗಳ ತಯಾರಿಕಾ ಕಲಾವಿದರು ಉಪಸ್ಥಿತರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಮಾನಸಿಕ ಖಿನ್ನತೆ ಸ್ವಯಂ ಮೌಲ್ಯಮಾಪನಕ್ಕೆ ನಿಮ್ಹಾನ್ಸ್‌ ಆ್ಯಪ್‌
ಒಂದೇ ದಿನ ಜಡ್ಜ್‌ ಮುಂದೆ 60 ಪರೋಲ್‌ ಅರ್ಜಿ!