ಕರ್ನಾಟಕ ಏಕೀಕರಣ ಹೋರಾಟಗಾರರ ಸ್ಮರಣೆ ಅಗತ್ಯ: ಸಚಿವ ಈಶ್ವರ ಖಂಡ್ರೆ

KannadaprabhaNewsNetwork |  
Published : Jan 26, 2024, 01:47 AM IST
ಚಿತ್ರ 25ಬಿಡಿಆರ್3ಭಾಲ್ಕಿ ಪಟ್ಟಣದ ಬಿಕೆಐಟಿ ಕಾಲೇಜಿನ ಹತ್ತಿರ ಗುರುವಾರ ಕರ್ನಾಟಕ ಸಂಭ್ರಮ 50 ರ ಜ್ಯೋತಿ ರಥ ಯಾತ್ರೆ ಮತ್ತು ಧ್ವಜ ಯಾತ್ರೆಯ ಸ್ವಾಗತ ಸಮಾರಂಭದಲ್ಲಿ ಸಚಿವ ಈಶ್ವರ ಖಂಡ್ರೆ ಮಾತನಾಡಿದರು. | Kannada Prabha

ಸಾರಾಂಶ

ಭಾಲ್ಕಿಯ ಬಿಕೆಐಟಿ ಕಾಲೇಜು ಆವರಣದಲ್ಲಿ ಕರ್ನಾಟಕ ಜ್ಯೋತಿ ರಥಯಾತ್ರೆಗೆ ಉಸ್ತುವಾರಿ ಸಚಿವರಿಂದ ಅದ್ಧೂರಿ ಸ್ವಾಗತ. ಶಾಲಾ, ಕಾಲೇಜಿನ ವಿದ್ಯಾರ್ಥಿಗಳು 1.ಕಿ.ಮೀ ಉದ್ದದ ಕನ್ನಡ ಧ್ವಜವನ್ನು ರಸ್ತೆಯುದ್ದಕ್ಕೂ ಹಿಡಿದು ಮೆರವಣಿಗೆಯಲ್ಲಿ ಭಾಗವಹಿಸಿದರು. ಅದರಂತೆ ವಿವಿಧ ಕಲಾ ತಂಡದವರು ಮೆರವಣಿಗೆಯಲ್ಲಿ ತಮ್ಮ ಕಲೆಯನ್ನು ಪ್ರದರ್ಶಿಸಿದರು.

ಕನ್ನಡಪ್ರಭ ವಾರ್ತೆ ಭಾಲ್ಕಿ

ಕರ್ನಾಟಕ ಏಕೀಕರಣಕ್ಕಾಗಿ ಹೋರಾಡಿದ ಮಹನೀಯರನ್ನು ಸ್ಮರಿಸುವುದು ಅತ್ಯಗತ್ಯ ಎಂದು ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ಅಭಿಪ್ರಾಯಪಟ್ಟರು.

ಪಟ್ಟಣದ ಬಿಕೆಐಟಿ ಕಾಲೇಜು ಆವರಣದಲ್ಲಿ ಗುರುವಾರ ಕರ್ನಾಟಕ ಸಂಭ್ರಮ-50ರ ಜ್ಯೋತಿ ರಥಯಾತ್ರೆಗೆ ಸ್ವಾಗತಿಸಿ ಮಾತನಾಡಿದರು.

ಸ್ವಾತಂತ್ರ್ಯದ ನಂತರ ಹರಿದು ಹಂಚಿಹೋದ ಕರ್ನಾಟಕದ ಭಾಗಗಳನ್ನು ಸೇರಿಸಿ, ಕನ್ನಡ ಮಾತನಾಡುವ ಎಲ್ಲರನ್ನೂ ಒಗ್ಗೂಡಿಸಿದ ಶ್ರೇಯ ಕರ್ನಾಟಕ ಏಕೀಕರಣಕ್ಕಾಗಿ ದುಡಿದ ಮಹನೀಯರಿಗೆ ಸಲ್ಲುತ್ತದೆ. ಕಲ್ಯಾಣ ಕರ್ನಾಟಕ ಭಾಗದಲ್ಲಿಯೂ ಹಲವು ಭಾಗಗಳು ಈಗಿನ ತೆಲಂಗಾಣ ಅಂದರೆ ಅಂದಿನ ಆಂಧ್ರಪ್ರದೇಶ, ಮಹಾರಾಷ್ಟ್ರಗಳಿಗೆ ಸೇರಿಸಲು ಪ್ರಯತ್ನಿಸಲಾಗುತ್ತಿತ್ತು. ಅಂತಹ ಸಂದರ್ಭದಲ್ಲಿ ಹಿರೇಮಠದ ಲಿಂ. ಡಾ. ಚನ್ನಬಸವ ಪಟ್ಟದ್ದೇವರು, ನಮ್ಮ ತಂದೆ ಭೀಮಣ್ಣ ಖಂಡ್ರೆ, ಆರ್‌ವಿ ಬಿಡಪ್‌, ಕಂಬಳಿವಾಲೆ, ಕಾಕನಾಳೆ, ಜಯದೇವಿತಾಯಿ ಲಿಗಾಡೆ, ಮಾದಪ್ಪ ಲೋಖಂಡೆ ಸೇರಿ ಹಲವಾರು ಸ್ವಾತಂತ್ರ್ಯ ಯೋಧರು, ರೈಲು ರೋಕೊ, ರಸ್ತೆ ತಡೆ ಮಾಡುವ ಮೂಲಕ ಮಹಾಜನ ವರದಿ ಬಂದ ನಂತರ ದೆಹಲಿಗೆ ನಿಯೋಗ ತೆಗೆದುಕೊಂಡು ಹೋಗಿ ಈ ಭಾಗವನ್ನು ಕರ್ನಾಟಕದಲ್ಲಿ ಉಳಿಯುವಂತೆ ಮಾಡಿದ್ದಾರೆ. ಹೀಗಾಗಿ ನಾವೆಲ್ಲರೂ ಇಂದು ಅಚ್ಚ ಕನ್ನಡಿಗರಾಗಿರಲು ಅವರ ಸೇವೆ ಅನಂತವಾಗಿದೆ ಎಂದು ಸ್ಮರಿಸಿದರು.

ಹಿರೇಮಠ ಸಂಸ್ಥಾನದ ಹಿರಿಯ ಸ್ವಾಮೀಜಿ ನಾಡೋಜ ಡಾ. ಬಸವಲಿಂಗ ಪಟ್ಟದ್ದೇವರು ಸಾನ್ನಿಧ್ಯ ವಹಿಸಿ, ಕರ್ನಾಟಕದಲ್ಲಿ ಕನ್ನಡ ರಥ ಎಲ್ಲಾ ಕಡೆ ಸಂಚಲನ ಉಂಟು ಮಾಡಿದೆ. ಕನ್ನಡ ವಾತಾವರಣ ನಿರ್ಮಾಣ ಮಾಡಿದೆ. ಇಂತಹ ಕನ್ನಡ ವಾತಾವರಣದ ಸಮಯದಲ್ಲಿ ಕನ್ನಡದ ಸಮಗ್ರ ಅಭಿವೃದ್ಧಿಗಾಗಿ ನಾವೆಲ್ಲರೂ ಶ್ರಮಿಸಬೇಕಾಗಿದೆ. ನಮ್ಮ ರಕ್ತದ ಕಣ ಕಣದಲ್ಲಿ ಕನ್ನಡತನ ಸೇರಿಸಿಕೊಳ್ಳಬೇಕಿದೆ ಎಂದು ಹೇಳಿದರು.

ಈ ಸಂದರ್ಭದಲ್ಲಿ ತಹಸೀಲ್ದಾರ್‌ ಮಲ್ಲಿಕಾರ್ಜುನ ವಡ್ಡನಕೇರೆ, ಕ್ಷೇತ್ರ ಶಿಕ್ಷಣಾಧಿಕಾರಿ ಮಜಹರ ಹುಸೇನ, ತಾಪಂ ಕಾರ್ಯನಿರ್ವಾಹಕ ಅಧಿಕಾರಿ ಸೂರ್ಯಕಾಂತ ಪಾಟೀಲ, ಕಸಾಪ ಅಧ್ಯಕ್ಷ ನಾಗಭೂಷಣ ಮಾಮಡಿ, ಪುರಸಭೆ ಮುಖ್ಯಾಧಿಕಾರಿ ನಾಗಣ್ಣ ಪರೀಟ, ಕಲಾವಿದ ವಿಜಯಕುಮಾರ ಸೋನಾರೆ, ಸಮಾಜಕಲ್ಯಾಣ ಅಧಿಕಾರಿ ಸತೀಶಕುಮಾರ ಸಂಗನ್, ಪುರಸಭೆ ಸದಸ್ಯ ಅಶೋಕ ಗಾಯಕವಾಡ, ಕಸಾಪ ಉಪಾಧ್ಯಕ್ಷ ಕಾಶಿನಾಥ ಲದ್ದೆ, ಕಸಾಪ ನಗರಾಧ್ಯಕ್ಷ ಸಂತೋಷ ಬಿಜಿ ಪಾಟೀಲ್‌, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಿದ್ರಾಮ ಸಿಂಧೆ, ಬಿಕೆಐಟಿ ಪ್ರಾಂಶುಪಾಲ ಉದಯಕುಮಾರ ಕಲ್ಯಾಣೆ, ಕನ್ನಡಪರ ಸಂಘಟನೆಯ ಸಂಗಮೇಶ ಗುಮ್ಮೆ, ಸಂಜುಕುಮಾರ ನಾವದಗಿ, ರಾಜಕುಮಾರ ಡಾವರಗಾವೆ, ಬಿಸಿಯೂಟ ಅಧಿಕಾರಿ ಮಲ್ಲಿನಾಥ ಸಜ್ಜನ್‌, ಡಿವಾಯ್‌ಎಸ್‌ಪಿ ಶಿವಾನಂದ ಪವಾಡಶೆಟ್ಟಿ, ಪತ್ರಕರ್ತರ ಸಂಘದ ಅಧ್ಯಕ್ಷ ಜಯರಾಜ ದಾಬಶೆಟ್ಟಿ, ಮಾರುತಿರಾವ ವಾಘೆ, ಕ್ಷೇತ್ರ ಸಮನ್ವಯಾಧಿಕಾರಿ ಮನೋಹರ ಹೊಳಕರ, ಆನಂದ ಹಳೆಂಬರೆ, ಎಆರ್‌ಟಿಓ ಮಹಮದ್ ಸಾಧಿಕ್ ಜಾಫರ್, ಬಿಕೆಐಟಿ ಡಾ. ಮಠಪತಿ ಸೇರಿದಂತೆ ಮತ್ತಿತರರು ಇದ್ದರು.

ಇದೇ ವೇಳೆ ಶಾಲಾ, ಕಾಲೇಜಿನ ವಿದ್ಯಾರ್ಥಿಗಳು 1.ಕಿ.ಮೀ ಉದ್ದದ ಕನ್ನಡ ಧ್ವಜವನ್ನು ರಸ್ತೆಯುದ್ದಕ್ಕೂ ಹಿಡಿದು ಮೆರವಣಿಗೆಯಲ್ಲಿ ಭಾಗವಹಿಸಿದರು. ಅದರಂತೆ ವಿವಿಧ ಕಲಾ ತಂಡದವರು ಮೆರವಣಿಗೆಯಲ್ಲಿ ತಮ್ಮ ಕಲೆಯನ್ನು ಪ್ರದರ್ಶಿಸಿದರು.

ಕನ್ನಡ ಸಂಸ್ಕೃತಿ ಇಲಾಖೆಯ ಸಿದ್ರಾಮ ಸಿಂಧೆ ಸ್ವಾಗತಿಸಿದರು. ದೀಪಕ ಥಮಕೆ ನಿರೂಪಿಸಿದರೆ ತಹಸೀಲ್ದಾರ ಮಲ್ಲಿಕಾರ್ಜುನ ವಡ್ಡನಕೇರಿ ವಂದಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಬದಲಾವಣೆಗೆ ತಕ್ಕಂತೆ ಕೈಗಾರಿಕೆ ವೇಗ ಹೆಚ್ಚಿಸಿಕೊಳ್ಳಿ: ವಿಜಯ ಸಂಕೇಶ್ವರ
ಶೀಘ್ರ ಬೆಳ್ಳೂಡಿ–ರಾಮತೀರ್ಥ ಸೇತುವೆ ಪುನರ್ ನಿರ್ಮಾಣ: ಶಾಸಕ ಬಿ.ಪಿ.ಹರೀಶ್