ಕನ್ನಡಪ್ರಭ ವಾರ್ತೆ ಕಿಕ್ಕೇರಿ
ಭಕ್ತರಿಗೆ ಲಡ್ಡು, ತೀರ್ಥ ಪ್ರಸಾದ ವಿತರಿಸಲಾಯಿತು. ಅರ್ಚಕರಾದ ಗೋಪಾಲಸ್ವಾಮಿ, ಗೋಪಾಲಯ್ಯ, ರಮೇಶ್, ರಮಾನಂದ, ನರಸಿಂಹಮೂರ್ತಿ ಗೋಕುಲ ನಂದನಿಗೆ ವಿಶೇಷ ಅಲಂಕಾರ ಮಾಡಿ ಭಕ್ತರಿಗೆ ವಿಶೇಷ ದರ್ಶನಕ್ಕೆ ಅನುವು ಮಾಡಿಕೊಟ್ಟರು.
ಮಕ್ಕಳಿಗೆ ಕೃಷ್ಣ, ರಾಧಾ, ರುಕ್ಮಿಣಿಯ ವೇಷಭೂಷಣವನ್ನು ಪೋಷಕರು ಮನೆಯಲ್ಲಿ ತೊಡಿಸಿ, ಶಾಲೆಗಳಲ್ಲಿ ಭಾಗವಹಿಸಿ ಕೃಷ್ಣ ಜಯಂತಿಗೆ ಮೆರಗು ನೀಡಿದರು. ಹೋಬಳಿಯಲ್ಲಿನ ನಾಸ್ತಿಕರು ಕೃಷ್ಣನ ದೇವಾಲಯಕ್ಕೆ ತೆರಳಿ ಭಕ್ತಿಯಿಂದ ಪೂಜಿಸಿದರು. ಮನೆ ಮನೆಗಳಲ್ಲಿ ರಾಧಾ, ಕೃಷ್ಣ, ರುಕ್ಮಿಣಿ ಪೋಟೋ, ಗೊಂಬೆಗಳನ್ನು ಕೂರಿಸಿ ಕೃಷ್ಣನ ಪೂಜಿಸಿದರು.ಆಧಾರ್ ಜೋಡಣೆಯಾಗದ ಅಂಗವಿಕಲ ಫಲಾನುಭವಿಗಳ ಪಿಂಚಣಿ ಸ್ಥಗಿತ
ಕನ್ನಡಪ್ರಭ ವಾರ್ತೆ ಮಂಡ್ಯಸಾಮಾಜಿಕ ಭದ್ರತಾ ಯೋಜನೆಗಳಲ್ಲಿ ಒಂದಾದ ಅಂಗವಿಕಲ ವೇತನ ಯೋಜನೆಯಡಿ ಪಿಂಚಣಿ ಪಡೆಯುತ್ತಿರುವ ಕೆಲವೊಂದು ಫಲಾನುಭವಿಗಳ ಪಿಂಚಣಿಗೆ ಆಧಾರ್ ಜೋಡಣೆಯಾಗಿರುವುದಿಲ್ಲ. ಅಂತಹ ಫಲಾನುಭವಿಗಳ ವಿವರಗಳನ್ನು ಮಂಡ್ಯ ತಹಸೀಲ್ದಾರ್ ಕಚೇರಿಯ ಸೂಚನಾ ಫಲಕದಲ್ಲಿ ಪ್ರಕಟಿಸಲಾಗಿದೆ. ಇನ್ನು 5 ದಿನಳಗಾಗಿ ಸಂಬಂಧಪಟ್ಟ ಫಲಾನುಭವಿ ತಮ್ಮ ವೃತ್ತದ ಗ್ರಾಮ ಆಡಳಿತಾಧಿಕಾರಿ, ನಾಡ ಕಚೇರಿ ಹಾಗೂ ತಾಲೂಕು ಕಚೇರಿಗಳಲ್ಲಿ ತಮ್ಮ ಆಧಾರ್ ಕಾರ್ಡ್, ಪಿಂಚಣಿ ಮಂಜೂರಾತಿ ಆದೇಶ ಪ್ರತಿ, ಬ್ಯಾಂಕ್ ಖಾತೆ ಪುಸ್ತಕ ನಕಲು ಪ್ರತಿಯನ್ನು ನೀಡಲು ಕೋರಿದೆ. ಇಲ್ಲದಿದ್ದರೆ ಪಿಂಚಣಿ ಸ್ಥಗಿತಗೊಳ್ಳಲಿದೆ ಎಂದು ಎಚ್ಚರಿಸಿದ್ದಾರೆ.