ಹನುಮಸಾಗರ: ದೇಶ ಸ್ವಾತಂತ್ರ್ಯ ಪಡೆಯಲು ನಡೆಸಿದ ಹೋರಾಟ ಸ್ಮರಿಸಿ, ದೇಶದ ಸ್ವಾತಂತ್ರ್ಯಕ್ಕಾಗಿ ಅನೇಕ ಮಹನೀಯರು ತಮ್ಮ ಜೀವನವನ್ನೇ ಮುಡಿಪಾಗಿಟ್ಟಿದ್ದಾರೆ ಎಂದು ಪಪಂ ಮುಖ್ಯಾಧಿಕಾರಿ ರೆಡ್ಡಿ ರಾಯನಗೌಡ ಹೇಳಿದರು.
ತ್ಯಾಗ,ಬಲಿದಾನ ಮತ್ತು ಹೋರಾಟದ ಫಲವಾಗಿ ಇಂದು ನಾವು ಸ್ವತಂತ್ರವಾಗಿ ಬದುಕುವ ಅವಕಾಶ ದೊರೆತಿದೆ. ಸ್ವಾತಂತ್ರ್ಯ ದಿನಾಚರಣೆ ಕೇವಲ ಸಂಭ್ರಮದ ದಿನವಾಗಿರದೇ ಹಾಗು ನಮ್ಮ ಪಪಂಯಿಂದ ಎಲ್ಲ ಸಹಕಾರ ಕೊಡಲಾಗುವದು ಎಂದರು.
ಪ್ರಾಚಾರ್ಯ ಭೀಮಪ್ಪ ಗೊಲ್ಲರ ಮಾತನಾಡಿ, ದೇಶಕ್ಕಾಗಿ ತ್ಯಾಗ ಮಾಡಿದ ಸ್ವಾತಂತ್ರ್ಯ ಹೋರಾಟಗಾರರನ್ನು ಸ್ಮರಿಸುವ ಹಾಗೂ ಆದರ್ಶ ಮುಂದಿನ ಪೀಳಿಗೆಗೆ ಪರಿಚಯಿಸುವ ದಿನವಾಗಿದೆ. ಬ್ರಿಟಿಷರ ಆಡಳಿತದಿಂದ ಭಾರತ ಮುಕ್ತಗೊಳಿಸಲು ಹಲವು ದಶಕಗಳ ಕಾಲ ದೇಶದ ವಿವಿಧ ಭಾಗಗಳಲ್ಲಿ ಹೋರಾಟ ನಡೆದವು. ಅಸಂಖ್ಯಾತ ಹೋರಾಟಗಾರರು ಜೈಲು ಶಿಕ್ಷೆ ಅನುಭವಿಸಿ ತಮ್ಮ ಆಸ್ತಿ-ಪಾಸ್ತಿ ಕಳೆದುಕೊಂಡು ಕೆಲವರು ತಮ್ಮ ಪ್ರಾಣ ದೇಶಕ್ಕಾಗಿ ಅರ್ಪಿಸಿದರು.ವಿದ್ಯಾರ್ಥಿಗಳು ದೇಶದ ಭವಿಷ್ಯವಾಗಿದ್ದು, ಸ್ವಾತಂತ್ರ್ಯ ಹೋರಾಟಗಾರರ ಜೀವನ, ದೇಶಪ್ರೇಮ ಮತ್ತು ತ್ಯಾಗದ ಆದರ್ಶ ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು. ದೇಶದ ಏಕತೆ, ಅಖಂಡತೆ ಹಾಗೂ ಸಂವಿಧಾನದ ಆಶಯ ಗೌರವಿಸುವ ಮೂಲಕ ಉತ್ತಮ ನಾಗರಿಕರಾಗಬೇಕು ಎಂದು ಕರೆ ನೀಡಿದರು.