ಶಾಲೆಯ ಗೋಡೆಗೆ ನಿರ್ಮಿಸಿರುವ ಮೂತ್ರಾಲಯ ತೆರವುಗೊಳಿಸಿ

KannadaprabhaNewsNetwork |  
Published : Jun 24, 2025, 12:32 AM IST
23ಎಚ್‌ಯುಬಿ31ಅಕ್ಕಿಹೊಂಡ ಸರ್ಕಾರಿ ಹೆಣ್ಣುಮಕ್ಕಳ ಪ್ರಾಥಮಿಕ ಶಾಲೆಗೆ ಹೊಂದಿಕೊಂಡು ನಿರ್ಮಿಸಿರುವ ಸಾರ್ವಜನಿಕ ಮೂತ್ರಾಯವನ್ನು ತೆರವುಗೊಳಿಸುವಂತೆ ಶಾಸಕ ಪ್ರಸಾದ ಅಬ್ಬಯ್ಯ ಪಾಲಿಕೆ ಆಯುಕ್ತ ರುದ್ರೇಶ ಘಾಳಿ ಅವರಿಗೆ ಸೂಚಿಸಿದರು. | Kannada Prabha

ಸಾರಾಂಶ

ಇಲ್ಲಿ ಚಿಕ್ಕಮಕ್ಕಳು ಪ್ರತಿದಿನ ವಿದ್ಯಾಭ್ಯಾಸ ಮಾಡುತ್ತಾರೆ. ಕೊಠಡಿಗೆ ಹೊಂದಿಕೊಂಡೇ ಸಾರ್ವಜನಿಕ ಮೂತ್ರಾಲಯ ನಿರ್ಮಾಣ ಮಾಡಲಾಗಿದೆ. ನಮಗೆ 10 ನಿಮಿಷ ನಿಲ್ಲಲು ಆಗದಂತೆ ದುರ್ವಾಸನೆ ಬೀರುತ್ತಿದೆ. ರಸ್ತೆ ಮೇಲೆ ಅನಧಿಕೃವಾಗಿ ಮೂತ್ರಾಲಯ ನಿರ್ಮಾಣ ಮಾಡಿರುವುದು ಸ್ಪಷ್ಟವಾಗಿ ಕಾಣುತ್ತಿದೆ. ಇಷ್ಟೆಲ್ಲ ನಡೆದರೂ ಪಾಲಿಕೆ ಅಧಿಕಾರಿಗಳು ಕಣ್ಮುಚ್ಚಿ ಕುಳಿತರೆ ಹೇಗೆ?.

ಹುಬ್ಬಳ್ಳಿ: ನಮಗೆ ವ್ಯಾಪಾರ ಮತ್ತು ವ್ಯಾಪಾರಸ್ಥರಿಗಿಂತ ಮಕ್ಕಳ ಶಿಕ್ಷಣ ಮತ್ತು ಅವರ ಆರೋಗ್ಯ ಅತ್ಯಮೂಲ್ಯ. ಶಾಲೆಗೆ ಹೊಂದಿಕೊಂಡು ನಿರ್ಮಿಸಿರುವ ಸಾರ್ವಜನಿಕ ಮೂತ್ರಾಲಯ ಕೂಡಲೇ ತೆರವುಗೊಳಿಸಿ ಮಕ್ಕಳ ಆರೋಗ್ಯ ರಕ್ಷಣೆಗೆ ಮುಂದಾಗಬೇಕು ಎಂದು ಶಾಸಕ ಪ್ರಸಾದ ಅಬ್ಬಯ್ಯ ಅಧಿಕಾರಿಗಳಿಗೆ ಖಡಕ್ ಸೂಚನೆ ನೀಡಿದರು.

ಇಲ್ಲಿನ ಅಕ್ಕಿಹೊಂಡದಲ್ಲಿರವ ಸರ್ಕಾರಿ ಹೆಣ್ಣು ಮಕ್ಕಳ ಮಾದರಿ ಶಾಲೆಯಲ್ಲಿ ನಿರ್ಮಿಸಲಾದ ನೂತನ ಕೊಠಡಿ ಉದ್ಘಾಟನಾ ಸಮಾರಂಭದ ವೇಳೆ ಅಲ್ಲಿನ ಪರಿಸ್ಥಿತಿ ವೀಕ್ಷಣೆ ಮಾಡಿ ಕ್ಷೇತ್ರ ಶಿಕ್ಷಣಾಧಿಕಾರಿ ಮತ್ತು ಪ್ರಾಂಶುಪಾಲರನ್ನು ತರಾಟೆಗೆ ತೆಗೆದುಕೊಂಡರು.

ಮಹಾನಗರ ಪಾಲಿಕೆ ಆಯುಕ್ತರನ್ನು ಸ್ಥಳಕ್ಕೆ ಕರೆಯಿಸಿ ಇಲ್ಲಿ ಚಿಕ್ಕಮಕ್ಕಳು ಪ್ರತಿದಿನ ವಿದ್ಯಾಭ್ಯಾಸ ಮಾಡುತ್ತಾರೆ. ಕೊಠಡಿಗೆ ಹೊಂದಿಕೊಂಡೇ ಸಾರ್ವಜನಿಕ ಮೂತ್ರಾಲಯ ನಿರ್ಮಾಣ ಮಾಡಲಾಗಿದೆ. ನಮಗೆ 10 ನಿಮಿಷ ನಿಲ್ಲಲು ಆಗದಂತೆ ದುರ್ವಾಸನೆ ಬೀರುತ್ತಿದೆ. ರಸ್ತೆ ಮೇಲೆ ಅನಧಿಕೃವಾಗಿ ಮೂತ್ರಾಲಯ ನಿರ್ಮಾಣ ಮಾಡಿರುವುದು ಸ್ಪಷ್ಟವಾಗಿ ಕಾಣುತ್ತಿದೆ. ಇಷ್ಟೆಲ್ಲ ನಡೆದರೂ ಪಾಲಿಕೆ ಅಧಿಕಾರಿಗಳು ಕಣ್ಮುಚ್ಚಿ ಕುಳಿತರೆ ಹೇಗೆ? ಯಾರ ಒತ್ತಡಕ್ಕೂ ಮಣಿಯದೇ ತೆರವುಗೊಳಿಸುವಂತೆ ಸೂಚನೆ ನೀಡಿದರು. ತೆರವುಗೊಳಿಸದಿದ್ದರೆ ಸಂಬಂಧಪಟ್ಟವರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಸಿದರು.

ಪಾಲಿಕೆ ಆಯುಕ್ತ ರುದ್ರೇಶ ಘಾಳಿ, ಕ್ಷೇತ್ರ ಶಿಕ್ಷಣಾಧಿಕಾರಿ ಚನ್ನಪ್ಪಗೌಡ, ಮುಖ್ಯ ಶಿಕ್ಷಕಿ ಶೋಭಾ, ವಿಜಯಕುಮಾರ ಕುಂದನಹಳ್ಳಿ, ಮಹಾಂತೇಶ ಗಿರಿಮಠ, ಶಿವನಗೌಡ ಹೊಸಮನಿ, ಶರಣು ಪಾಟೀಲ, ಮದನ್ ಬಚನ್, ಫಯಾಜ್ ಕಲಘಟಗಿ ಸೇರಿದಂತೆ ಅನೇಕರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಸಹಕಾರದಿಂದ ಸಮೃದ್ಧಿ - ಸಹಕಾರ ಭಾರತಿಯಿಂದ ಸಹಕಾರ ಕ್ಷೇತ್ರದ ಬಲವರ್ಧನೆ
ದ್ವೇಷಭಾಷಣ ಬಿಲ್‌ಗೆ ಸಹಿ ಬೇಡ : ಗೌರ್ನರ್‌ಗೆ ಬಿಜೆಪಿ