ಕನ್ನಡಪ್ರಭ ವಾರ್ತೆ ಮಳವಳ್ಳಿ
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಾಜಿ ಸಿಎಂ ಕುಮಾರಸ್ವಾಮಿ ಸಹಾಯ ಪಡೆದು ಪಿ.ಎಂ.ನರೇಂದ್ರಸ್ವಾಮಿ ಅವರು ಶಾಸಕ ಸ್ಥಾನವನ್ನು ಮತ್ತೆ ಪಡೆದಿದ್ದಾರೆಂಬ ನೀಡಿರುವ ಹೇಳಿಕೆ ಸತ್ಯಕ್ಕೆ ದೂರವಾಗಿದೆ ಎಂದು ಸ್ವಷ್ಟಪಡಿಸಿದರು.
ಪ್ರತಿಭಟನೆಯಲ್ಲಿ ಮಾಜಿ ಶಾಸಕ ಎನ್ನುವುದನ್ನು ಮರೆತು ಬಾಯಿಗೆ ಬಂದಂತೆ ಮಾತನಾಡಿರುವುದು ಸರಿಯಲ್ಲ, ನಾನು ಸೋತರೇ ಹಾಡುಗಳನ್ನು ಹಾಡಿ ಜೀವನ ಮಾಡುತ್ತೇನೆಂದು ಹೇಳಿದ್ದ ಅನ್ನದಾನಿ ಹಾಡು ಹೇಳುವುದನ್ನು ಬಿಟ್ಟು ಜನರನ್ನು ದಾರಿ ತಪ್ಪಿಸಲು ಪ್ರತಿಭಟನೆ ನಡೆಸುತ್ತಿದ್ದಾರೆಂದು ವ್ಯಂಗ್ಯವಾಡಿದರು.ಜೆಡಿಎಸ್ ಕೊಮುವಾದಿ ಬಿಜೆಪಿ ಪಕ್ಷದ ಜೊತೆ ಮೈತ್ರಿಮಾಡಿಕೊಂಡಿದೆ. ಜಾತಿ ಹೆಸರಿನಲ್ಲಿ ಪ್ರತಿಭಟನೆ ಮಾಡಿ ರಾಜಕಾರಣ ಮಾಡುವ ನಡೆಯನ್ನು ಖಂಡಿಸುತ್ತೇವೆ. ಶಾಸಕ ಪಿ.ಎಂ.ನರೇಂದ್ರಸ್ವಾಮಿ ಜಾತಿ ಹೆಸರಿನಲ್ಲಿ ಎಂದಿಗೂ ರಾಜಕಾರಣ ಮಾಡಿಲ್ಲ, ಅನಿವಾರ್ಯತೆಯೂ ಬಂದಿಲ್ಲ ಎಂದರು.
ಪಿ.ಎಂ.ನರೇಂದ್ರಸ್ವಾಮಿ 3ನೇ ಬಾರಿ ಶಾಸಕರಾಗಿ ಆಯ್ಕೆಯಾಗಿ ತಾಲೂಕಿನಲ್ಲಿ ಹಲವು ಅಭಿವೃದ್ಧಿ ಕಾರ್ಯಕ್ರಮಗಳನ್ನು ಕೈಗೊಂಡಿದ್ದಾರೆ. ಶಾಸಕರ ವಿರುದ್ಧ ಉದ್ದೇಶ ಪೂರ್ವಕವಾಗಿ ಪ್ರತಿಭಟನೆ ಮಾಡಿದರೆ ಕಾಂಗ್ರೆಸ್ ಪಕ್ಷ ತಕ್ಕ ಉತ್ತರವನ್ನು ನೀಡಲಿದ್ದೇವೆಂದು ಎಚ್ಚರಿಸಿದರು.
ಜಿಪಂ ಮಾಜಿ ಸದಸ್ಯ ವಿಶ್ವಾಸ್ ಮಾತನಾಡಿ, ಕೆಆರ್ಎಸ್ನಿಂದ ಕಾಲುವೆಗಳಿಗೆ ಸಮರ್ಪಕವಾಗಿ ನೀರು ಬಿಡಲಾಗುತ್ತಿದೆ. ಜಿಲ್ಲೆಯಲ್ಲಿ ಸಮರ್ಪಕ ಮಳೆಯಾಗದ ಕಾರಣ ನೀರಿನ ಅಭಾವ ಉಂಟಾಗಿದೆ, ಮೇಲ್ಬಾಗದಿಂದ ಹಂತ ಹಂತವಾಗಿ ನೀರನ್ನು ಕೊಡಲಾಗುತ್ತಿದೆ ಎಂದರು.
ಸುದ್ದಿಗೋಷ್ಠಿಯಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸಿ.ಪಿ.ರಾಜು, ಮುಖಂಡರಾದ ಶಿವಮಾದೇಗೌಡ, ರಾಮಚಂದ್ರಯ್ಯ, ಪ್ರಮೀಳ, ರಾಜಶೇಖರ್, ಬಸವೇಶ್, ಲಿಂಗರಾಜು, ಶಶಿಕುಮಾರ್, ಕುಳ್ಳಚನ್ನಂಕಯ್ಯ, ಕೃಷ್ಣಮೂರ್ತಿ, ಕೃಷ್ಣಮೂರ್ತಿ, ವೇದಮೂರ್ತಿ, ವಿಶ್ವ, ರವೀಂದ್ರ ಸೇರಿದಂತೆ ಇತರರು ಇದ್ದರು.