- ಹುಬ್ಬಳ್ಳಿ ವಿದ್ಯಾರ್ಥಿನಿ ಹತ್ಯೆ ವೈಯಕ್ತಿಕ ಎಂದ ಸಿಎಂ, ಗೃಹ ಸಚಿವರ ವಿರುದ್ಧ ಗರಂ
ನಗರದಲ್ಲಿ ಶುಕ್ರವಾರ ದಾವಣಗೆರೆ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ ಪರ ಬೃಹತ್ ರೋಡ್ ಶೋ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಲಾಟರಿ ಸರ್ಕಾರವಿದೆ. ಇದೊಂದು ಭಯೋತ್ಪಾದಕರ ಸರ್ಕಾರ. ಹುಬ್ಬಳ್ಳಿಯ ವಿದ್ಯಾರ್ಥಿನಿಯನ್ನು ಕಾಲೇಜು ಕ್ಯಾಂಪಸ್ನಲ್ಲೇ ಹತ್ಯೆ ಮಾಡಿದ ಪ್ರಕರಣದ ಬಗ್ಗೆ ಸಿಎಂ ಸಿದ್ದರಾಮಯ್ಯ ಬೇಜವಾಬ್ದಾರಿಯಿಂದ ಮಾತನಾಡಿದ್ದು ಸರಿಯಲ್ಲ ಎಂದರು.
ಅನ್ಯಕೋಮಿನ ಯುವಕ ಮತ್ತೊಂದು ಕೋಮಿನ ಯುವತಿಯನ್ನು ಕಾಲೇಜು ಕ್ಯಾಂಪಸ್ನಲ್ಲಿ ಇರಿದು ಕೊಂದಿದ್ದಾನೆ. ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆಯೇ ಹಾಳಾಗಿದೆ. ಇಂತಹ ದುಷ್ಕೃತ್ಯವನ್ನು ಯಾರು ಎಸಗುತ್ತಾರೋ, ಅಂತಹವರನ್ನು ಗುಂಡಿಟ್ಟು ಸಾಯಿಸಬೇಕು. ಇಂತಹ ದುಷ್ಕರ್ಮಿಗಳನ್ನು ನೇಣು ಹಾಕಿ ಸಾಯಿಸಬೇಕು. ಆಗ ಮಾತ್ರ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹಳಿಗೆ ಬರುತ್ತದೆ ಎಂದು ಕಿಡಿಕಾರಿದರು.ಕಾಂಗ್ರೆಸ್ ಸರ್ಕಾರವು ಪಿಎಫ್ಐ- ಎಸ್ಡಿಪಿಐ ಮೇಲಿನ ಕೇಸ್ಗಳನ್ನು ವಾಪಸ್ ಪಡೆದಿದೆ. ಕಾನೂನು, ಸುವ್ಯವಸ್ಥೆ ಬಿಗಿ ಇದ್ದರೆ ಇಂತಹ ಘಟನೆಗಳು, ಕೃತ್ಯಗಳು ನಡೆಯುವುದಿಲ್ಲ. ಈಗಾಗಲೇ ಕಾಂಗ್ರೆಸ್ ಸರ್ಕಾರದ ವಿರುದ್ಧ ಜನರು ರೋಸಿ ಹೋಗಿದ್ದಾರೆ. ಲೋಕಸಭೆ ಚುನಾವಣೆಯಲ್ಲಿ ಇಂತಹ ಕಾಂಗ್ರೆಸ್ ಸರ್ಕಾರಕ್ಕೆ ಬೇಸತ್ತಿರುವ ಜನರು ತಕ್ಕ ಪಾಠ ಕಲಿಸುತ್ತಾರೆ ಎಂದು ರೇಣುಕಾಚಾರ್ಯ ಹೇಳಿದರು.