ರೇಣುಕಾಚಾರ್ಯರ ವಿಚಾರಧಾರೆಗಳು ಸಮಾಜ ಸುಧಾರಣೆಗೆ ಸೋಪಾನ: ಶ್ರೀ ದಾನಯ್ಯದೇವರು

KannadaprabhaNewsNetwork |  
Published : Mar 13, 2025, 12:52 AM IST
 12-ಕೆ.ಎಲ್.ಜಿ-2ಎಆದಿ ಜಗದ್ಗುರು ರೇಣುಕಾಚಾರ್ಯರ ಜಯಂತಿ ನಿಮಿತ್ತ ಕಲಘಟಗಿ ಪಟ್ಟಣದ ಹನ್ನೆರಡು ಮಠದಲ್ಲಿ ನಡೆದ ಧರ್ಮಸಭೆಯನ್ನು ಗಣ್ಯರು ಉದ್ಘಾಟಿಸಿದರು. | Kannada Prabha

ಸಾರಾಂಶ

ಆದಿ ಜಗದ್ಗುರು ರೇಣುಕಾಚಾರ್ಯರ ಜಯಂತಿ ಅಂಗವಾಗಿ ಕಲಘಟಗಿ ಪಟ್ಟಣದ ಹನ್ನೆರಡು ಮಠದಲ್ಲಿ ಬುಧವಾರ ಧರ್ಮಸಭೆಯಲ್ಲಿ ಆಯೋಜಿಸಲಾಗಿತ್ತು.

ಕಲಘಟಗಿ: ಶ್ರೀ ಆದಿ ಜಗದ್ಗುರು ರೇಣುಕಾಚಾರ್ಯರು ಬೋಧಿಸಿರುವ ತತ್ವ-ಸಿದ್ಧಾಂತಗಳು ಕೇವಲ ಬೋಧನೆಗೆ ಸೀಮಿತವಾಗದೇ ಸಮಾಜದ ಸುಧಾರಣೆಗೆ ಸೋಪಾನವಾಗಿವೆ ಎಂದು ತಡಸ ಕ್ರಾಸ್ ತಿರುಮಲಕೊಪ್ಪ ರೇಣುಕ ಧರ್ಮನಿವಾಸ ಶ್ರೀ ದಾನಯ್ಯದೇವರು ಹೇಳಿದರು.

ಆದಿ ಜಗದ್ಗುರು ರೇಣುಕಾಚಾರ್ಯರ ಜಯಂತಿ ಅಂಗವಾಗಿ ಪಟ್ಟಣದ ಹನ್ನೆರಡು ಮಠದಲ್ಲಿ ಬುಧವಾರ ಆಯೋಜಿಸಲಾಗಿದ್ದ ಧರ್ಮಸಭೆಯಲ್ಲಿ ಉಪದೇಶಾಮೃತ ನೀಡಿದರು.

ಉಪನ್ಯಾಸ ನೀಡಿದ ಧಾರವಾಡ ಜೆ.ಎಸ್.ಎಸ್‌. ಪದವಿ ಕಾಲೇಜಿನ ಕನ್ನಡ ವಿಭಾಗದ ಮುಖ್ಯಸ್ಥರಾದ ಡಾ. ರುದ್ರಗೌಡ ಪಾಟೀಲ ಮಾತನಾಡಿ, ವೀರಶೈವ ಧರ್ಮದ ಸಂಸ್ಥಾಪಕರಾದ ಜಗದ್ಗುರು ರೇಣುಕಾಚಾರ್ಯರ ಜೀವನ, ತತ್ವ ಸಿದ್ಧಾಂತಗಳು, ದೂರದರ್ಶಿತ್ವದ ವಿಚಾರಧಾರೆಗಳು ಎಲ್ಲ ವರ್ಗದ ಜನರ ಕಲ್ಯಾಣಕ್ಕೆ ಭದ್ರ ಬುನಾದಿ ಒದಗಿಸುತ್ತವೆ. ಜಂಗಮರು ಗುರುವಿನ ಸ್ಥಾನದಲ್ಲಿದ್ದು, ಮಕ್ಕಳಿಗೂ ಸಂಸ್ಕಾರ ಕಲಿಸಿ ಪರಂಪರೆ ಮುಂದುವರಿಸಬೇಕು ಎಂದು ಹೇಳಿದರು.

ಕಲಘಟಗಿ ಹನ್ನೆರಡು ಮಠದ ಶ್ರೀ ರೇವಣಸಿದ್ಧ ಶಿವಾಚಾರ್ಯರು, ಅಭಿನವ ಮಡಿವಾಳ ಶಿವಾಚಾರ್ಯರು ಸಾನ್ನಿಧ್ಯ ವಹಿಸಿದ್ದರು. ಜಂಗಮ ಸಮಾಜದ ಮುಖಂಡ ಎಸ್.ವಿ. ತಡಸಮಠ ಅಧ್ಯಕ್ಷತೆ ವಹಿಸಿದ್ದರು. ಕೃಷಿಕ ಸಮಾಜದ ಅಧ್ಯಕ್ಷ ಬಾಬಣ್ಣ‌ ಅಂಚಟಗೇರಿ, ಜಿಲ್ಲಾ ಗ್ರಾಮೀಣ ಬಿಜೆಪಿ ಅಧ್ಯಕ್ಷ ನಿಂಗಪ್ಪ ಸುತಗಟ್ಟಿ, ಅಜ್ಜಯ್ಯ ಹಿರೇಮಠ, ಚನ್ನಯ್ಯ ಹಿರೇಮಠ, ಐ.ಸಿ. ಗೋಕುಲ ಮಾತನಾಡಿದರು.

ಜಂಗಮ ಸಮಾಜದ ನಗರ ಘಟಕದ ಅಧ್ಯಕ್ಷ ಶಿವಯ್ಯ ತೇಗೂರುಮಠ, ಮಹಾಲಿಂಗಯ್ಯ ಹಿರೇಮಠ, ಶಿವಪುತ್ರಯ್ಯ ತೇಗೂರಮಠ, ಮಹಾಂತೇಶ ತಹಶೀಲ್ದಾರ, ಗಂಗಾಧರ ಚಿಕ್ಕಮಠ, ವೀರೇಶ ಹಾರೋಗೇರಿ, ಸಂಗಮೇಶ ತೋಟಗಂಟಿ, ಜಗದೀಶ ವೀರಕ್ತಮಠ, ಜಮಖಂಡಿ ಸರ್, ಸಿದ್ದಯ್ಯ ಹಿರೇಮಠ, ಮಹಾಂತೇಶ ವೀರಕ್ತಮಠ, ಶಿವಾನಂದ ಹಿರೇಮಠ, ಶಂಕರಗೌಡ ಭಾವಿಕಟ್ಟಿ ಇತರರಿದ್ದರು.

ಗಮನ ಸೆಳೆದ ವೀರಗಾಸೆ:

ರೇಣುಕಾಚಾರ್ಯ ಜಯಂತಿ ಅಂಗವಾಗಿ ಪಟ್ಟಣದ ತಹಸೀಲ್ದಾರ್ ಕಚೇರಿಯಿಂದ ಆರಂಭಗೊಂಡ ಶ್ರೀ ಜಗದ್ಗುರು ರೇಣುಕಾಚಾರ್ಯರ ಭಾವಚಿತ್ರ ಮೆರವಣಿಗೆ ಹನ್ನೆರಡು ಮಠದ ವರೆಗೆ ನಡೆಯಿತು. ಮುತ್ತೈದೆಯರಿಂದ ಕುಂಭಮೇಳ, ಪುರವಂತರಿಂದ ವೀರಗಾಸೆ, ಕರಡಿ ಮಜಲು, ಜಾಂಜಮೇಳ ಹಾಗೂ ವಿವಿಧವಾಧ್ಯ ಮೇಳಗಳೊಂದಿಗೆ ಶ್ರೀ ಜಗದ್ಗುರು ರೇಣುಕಾಚಾರ್ಯರ ಭಾವಚಿತ್ರ ಮೆರವಣಿಗೆ ಪಟ್ಟಣದ ಪ್ರಮುಖ ಬೀದಿಗಳಲ್ಲಿ ಅದ್ಧೂರಿಯಾಗಿ ಜರುಗಿತು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ನಾವೂರು ಶ್ರೀ ಗೋಪಾಕೃಷ್ಣ ದೇವಸ್ಥಾನದಲ್ಲಿ ಸಾಮೂಹಿಕ ವಿಷ್ಣುಸಹಸ್ರನಾಮ ಪಠಣ ಸಂಪನ್ನ
ಸಚಿವ ತಿಮ್ಮಾಪುರ ಬೆಂಬಲಿಸಿ ಕಾಂಗ್ರೆಸ್‌ ಬೃಹತ್‌ ಪ್ರತಿಭಟನೆ