ವಕ್ಫ್ ಕಾಯ್ದೆ ತಿದ್ದುಪಡಿ ರದ್ದುಪಡಿಸಿ

KannadaprabhaNewsNetwork |  
Published : Jun 12, 2025, 01:02 AM IST
11ಕೆಪಿಎಲ್24 ವಕ್ಫ ಕಾಯ್ದೆಯನ್ನು ವಿರೋಧಿಸಿ ಕೊಪ್ಪಳದಲ್ಲಿ ಮನವಿ ಸಲ್ಲಿಸಲಾಯಿತು. | Kannada Prabha

ಸಾರಾಂಶ

1995ರ ವಕ್ಫ್‌ ಕಾಯ್ದೆಗೆ ಅಂಗೀಕರಿಸಿದ ತಿದ್ದುಪಡಿಗಳು ತಾರತಮ್ಯದಿಂದ ಕೂಡಿದ್ದು, ಸಂವಿಧಾನದಲ್ಲಿ ಖಾತರಿಪಡಿಸಿದ ಮೂಲಭೂತ ಹಕ್ಕುಗಳನ್ನು ಉಲ್ಲಂಘಿಸುತ್ತವೆ. ಈ ಕಾಯ್ದೆ ತಿದ್ದುಪಡಿ ಅಂಗೀಕರಿಸದೆ ರದ್ದುಪಡಿಸಿ ಯಥಾವತ್ತಾಗಿ ಮುಂದುವರಿಸಬೇಕು.

ಕೊಪ್ಪಳ:

ವಕ್ಫ್ ಕಾಯ್ದೆ ತಿದ್ದುಪಡಿ ರದ್ದುಪಡಿಸುವಂತೆ ಆಗ್ರಹಿಸಿ ನಗರದಲ್ಲಿ ಸಾಂಕೇತಿಕ ಪ್ರತಿಭಟನೆ ನಡೆಸಿದ ಆಲ್ ಇಂಡಿಯಾ ಮುಸ್ಲಿಂ ಪರ್ಸನಲ್ ಬೋರ್ಡ್, ಜಿಲ್ಲಾಧಿಕಾರಿ ಮೂಲಕ ರಾಷ್ಟ್ರಪತಿಗೆ ಮನವಿ ಸಲ್ಲಿಸಿತು.

1995ರ ವಕ್ಫ್‌ ಕಾಯ್ದೆಗೆ ಅಂಗೀಕರಿಸಿದ ತಿದ್ದುಪಡಿಗಳು ತಾರತಮ್ಯದಿಂದ ಕೂಡಿದ್ದು, ಸಂವಿಧಾನದಲ್ಲಿ ಖಾತರಿಪಡಿಸಿದ ಮೂಲಭೂತ ಹಕ್ಕುಗಳನ್ನು ಉಲ್ಲಂಘಿಸುತ್ತವೆ. ಈ ಕಾಯ್ದೆ ತಿದ್ದುಪಡಿ ಅಂಗೀಕರಿಸದೆ ರದ್ದುಪಡಿಸಿ ಯಥಾವತ್ತಾಗಿ ಮುಂದವರಿಸಬೇಕೆಂದು ಆಲ್ ಇಂಡಿಯಾ ಮುಸ್ಲಿಂ ಪರ್ಸನಲ್ ಬೋರ್ಡ್ ಜಿಲ್ಲಾ ಘಟಕ ಒತ್ತಾಯಿಸಿದೆ.

ಮುಸ್ಲಿಮರ ಧಾರ್ಮಿಕ ಆಚರಣೆಗೆ ಸಂವಿಧಾನದಲ್ಲಿ ನೀಡಿರುವ ಹಕ್ಕನ್ನು ಯಥಾವತ್ತಾಗಿ ಮುಂದುವರಿಸಲು ಅವಕಾಶ ಕಲ್ಪಿಸಿಕೊಡಬೇಕು ಹಾಗೂ ಕೇಂದ್ರ ಸರ್ಕಾರ ಅಂಗೀಕರಿಸಿರುವ ವಕ್ಫ್ ಕಾಯ್ದೆ ತಿದ್ದುಪಡಿ ರದ್ದುಪಡಿಸಬೇಕೆಂದು ಆಗ್ರಹಿಸಲಾಗಿದೆ.

ಈ ತಿದ್ದುಪಡಿಗಳು ಸಂವಿಧಾನದ 14, 25, 26 ಮತ್ತು 29ನೇ ವಿಧಿಗಳಲ್ಲಿ ಪ್ರತಿಪಾದಿಸಲಾದ ಮೂಲಭೂತ ಹಕ್ಕುಗಳನ್ನು ಉಲ್ಲಂಘಿಸುತ್ತವೆ. ಹಿಂದೂ, ಸಿಖ್, ಬೌದ್ಧ ಮತ್ತು ಕ್ರಿಶ್ಚಿಯನ್ ಸಮುದಾಯಗಳು ಅಂತಹ ರಕ್ಷಣೆ ಅನುಭವಿಸುತ್ತಿದ್ದು ಕೇವಲ ವಕ್ಫ್‌ ರಕ್ಷಣೆ ಮತ್ತು ಆಸ್ತಿಗಳಿಗೆ ಲಭ್ಯವಿರುವ ನಿಬಂಧನೆಗಳನ್ನು ಕೊನೆಗೊಳಿಸುವ ಮೂಲಕ ಮುಸ್ಲಿಮರಿಗೆ ತಾರತಮ್ಯ ಮಾಡಲಾಗುತ್ತಿದೆ ಎಂದು ಆರೋಪಿಸಿದ್ದಾರೆ.

ಈ ತಿದ್ದುಪಡಿಗಳು ಧಾರ್ಮಿಕ ಸ್ವಾತಂತ್ರ್ಯದ ಹಕ್ಕು (ಪರಿಚ್ಚೇದ 25) ಮತ್ತು ತಮ್ಮ ಸ್ವಂತ ಧಾರ್ಮಿಕ ಸಂಸ್ಥೆಗಳನ್ನು ಸ್ಥಾಪಿಸುವ ಮತ್ತು ನಿಯಂತ್ರಿಸುವ ಹಕ್ಕಿಗೆ (ಪರಿಚ್ಚೇದ 26 ಮತ್ತು 29) ವಿರುದ್ಧವಾಗಿವೆ. ಕಳೆದ 5 ವರ್ಷದಿಂದ ಧರ್ಮವನ್ನು ಪಾಲಿಸದ ಮುಸ್ಲಿಂ ನಾಗರಿಕ ತನ್ನ ಆಸ್ತಿ ದಾನ ಮಾಡುವ ಸ್ವಾತಂತ್ರ್ಯಕಸಿದುಕೊಳ್ಳುತ್ತದೆ ಎಂದು ಕಳವಳ ವ್ಯಕ್ತಪಡಿಸಿದ್ದಾರೆ.

ಈ ವೇಳೆ ಮುಸ್ಲಿಂ ಸಮಾಜದ ಧರ್ಮಗುರು, ಯೂಸುಫಿಯ ಮಸೀದಿಯ ಖತಿಬ್ ಇಮಾಮ್, ನಗರಸಭೆ ಅಧ್ಯಕ್ಷ ಅಮ್ಜದ್ ಪಟೇಲ್, ಕೆ.ಎಂ. ಸಯ್ಯದ್, ನಾಸೀರುದ್ದೀನ್ ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ತಂಬಾಕು ದರ ಕುಸಿತ ಪ್ರತಿಭಟನೆ
ಕಾಡಾನೆ ದಾಳಿಗೆ ಬಹಿರ್ದೆಸೆಗೆ ತೆರಳಿದ್ದ ರೈತ ಸಾವು