ಕನ್ನಡಪ್ರಭವಾರ್ತೆ ತುರ್ವಿಹಾಳ
ಪಪಂನಲ್ಲಿ ಧ್ವಜಾರೋಹಣ ನೆರವೇರಿಸಿ ಮಾತನಾಡಿದ ಮುಖ್ಯಾಧಿಕಾರಿ ಪ್ರಸನ್ನ ಎ.ಕಲ್ಯಾಣ ಶೆಟ್ಟಿ, 1950ರ ಜನವರಿ 26ರಂದು ಭಾರತೀಯ ಸಂವಿಧಾನವನ್ನು ಔಪಚಾರಿಕವಾಗಿ ಅಂಗೀಕರಿಸಲಾಯಿತು. ಹೀಗಾಗಿ ಅಂದಿನಿಂದ ಜ.26ನ್ನು ಗಣರಾಜ್ಯೋತ್ಸವ ದಿನವನ್ನಾಗಿ ಆಚರಿಸಿಕೊಂಡು ಬರಲಾಗುತ್ತಿದೆ ಎಂದು ಹೇಳಿದರು.
ನಂತರ ಜ್ಞಾನಗಂಗೋತ್ರಿ ಪೂರ್ವ-ಹಿರಿಯ ಪ್ರಾಥಮಿಕ ಆಂಗ್ಲ ಮಾಧ್ಯಮ ಶಾಲೆ ಹಾಗೂ ಪರಿಶ್ರಮ ಕೋಚಿಂಗ್ ಸೆಂಟರ್ ತುರ್ವಿಹಾಳನಲ್ಲಿ ಶರಣಪ್ಪ ಹೊಸಗೌಡರ ಮಾತನಾಡಿದರು.ಭಾರತವು ಸಮಾಜವಾದ ತತ್ವ. ಪ್ರಜಾಪ್ರಭುತ್ವ, ಗಣರಾಜ್ಯದ ಮತ್ತು ಜಾತ್ಯತೀತ ತತ್ವದ ಸಾರ್ವಭೌಮತ್ವನ್ನು ಆಳವಡಿಸಿ ಕೊಂಡಿದ್ದು, ವಿವಿಧತೆಯಲ್ಲಿ ಏಕತೆಯನ್ನು ಹೊಂದಿದೆ. ಅನೇಕ ಭಾಷೆಗಳನ್ನು ಮಾತನಾಡುವ ಜನ ಹಾಗೂ ವಿವಿಧ ಸಂಸ್ಕೃತಿ ಹಿನ್ನೆಲೆಯನ್ನು ಹೊಂದಿರುವುದು ವೈಶಿಷ್ಟಮಯವಾಗಿದೆ ಎಂದು ಅಭಿಪ್ರಾಯಪಟ್ಟರು.