ಕನ್ನಡಪ್ರಭವಾರ್ತೆ ಮುದಗಲ್
ಪಟ್ಟಣದಲ್ಲಿ ಪೊಲೀಸ್ ಠಾಣೆ ಮತ್ತು ಪುರಸಭೆ ಜಗಮಗಿಸುವ ದೀಪಾಲಂಕಾರದಿಂದ ಕಂಗೊಳಿಸಿದರೆ, ಶಾಲಾ ಕಾಲೇಜುಗಳಲ್ಲಿ ವಿವಿಧ ಬಗೆಯ ರಂಗೋಲಿ, ವೈಜ್ಞಾನಿಕ ಛಾಯಾ ಚಿತ್ರಗಳೊಂದಿಗೆ ಕಂಗೊಳಿಸಿದವು.
ಮುದಗಲ್ ಪೊಲೀಸ್ ಠಾಣೆಯಲ್ಲಿ ಪಿಎಸ್ಐ ವೆಂಕಟೇಶ ಮಾಡಗೇರಿ ಪೊಲೀಸ್ ಸಿಬ್ಬಂದಿಯಿಂದ ಗೌರವ ವಂದನೆಯ ಮೂಲಕ ಧ್ವಜಾರೋಹಣ ನೆರವೇರಿಸಿದರು. ಪುರಸಭೆಯಲ್ಲಿ ಮುಖ್ಯಾಧಿಕಾರಿ ನಬಿ ಎಂ.ಕಂದಗಲ್ಲ, ಉಪ ತಹಶೀಲ್ದಾರ ಕಾರ್ಯಾಲಯದಲ್ಲಿ ಉಪ ತಹಶೀಲ್ದಾರ ತುಳಜಾರಾಮಸಿಂಗ್ ಪೊಲೀಸ್ ಸಿಬ್ಬಂದಿಯಿಂದ ಗೌರವ ವಂದನೆ ಮೂಲಕ ಧ್ವಜಾರೋಹಣ ನೆರವೇರಿಸಿದರು.ಸಮುದಾಯ ಆರೋಗ್ಯ ಕೇಂದ್ರದಲ್ಲಿ ಡಾ: ಚಂದ್ರಕಾಂತ, ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಪ್ರಾಚಾರ್ಯ ಡಾ: ಸಿದ್ಧರಾಮಪ್ಪ ಪಾಟೀಲ, ಸರಕಾರಿ ಬಾಲಕಿಯರ ಪ್ರೌಢ ಶಾಲೆಯಲ್ಲಿ ಎಸ್ಡಿಎಂಸಿ ಅದ್ಯಕ್ಷ ಸಿದ್ರಾಮಪ್ಪ ಛಲವಾದಿ, ಸರಕಾರಿ ಬಾಲಕರ ಪ್ರೌಢ ಶಾಲೆಯಲ್ಲಿ ಎಸ್ಡಿಎಂಸಿ ಅದ್ಯಕ್ಷ ಪಾಲಾಕ್ಷಿರಾವ್ ದೇಶಪಾಂಡೆ, ಕೇಂದ್ರ ಶಾಲೆಯಲ್ಲಿ ಎಸ್ಡಿಎಂಸಿ ಅಧ್ಯಕ್ಷ ದ್ಯಾಮಣ್ಣ ಕೊರವರ, ಕ್ರಿಸ್ತ ಜ್ಯೋತಿ ಫೌಡ ಶಾಲೆಯ ಮುಖ್ಯಸ್ಥರಾದ ಮಾರ್ಟಿನ್ ಸೆಲ್ಡನಾ, ಲಿಟಲ್ ಪ್ಲವರ್ ಆಂಗ್ಲ ಮಾಧ್ಯಮ ಶಾಲೆಯ ಮುಖ್ಯಸ್ಥರಾದ ಫಾತೀಮಾ ಸೇರಿ ಉಳಿದ ಶಾಲಾ ಕಾಲೇಜುಗಳಲ್ಲಿ ಧ್ವಜಾರೋಹಣ ನೆರವೇರಿಸಲಾಯಿತು.