ನಾರಾಯಣ ಗುರು ಅಭಿವೃದ್ಧಿ ನಿಗಮಕ್ಕೆ 500 ಕೋಟಿ ರು. ಅನುದಾನ ಮನವಿ: ಮಂಜುನಾಥ ಪೂಜಾರಿ

KannadaprabhaNewsNetwork |  
Published : Dec 04, 2025, 03:00 AM IST
02ಮಂಜುನಾಥನಿಗಮದ ಅಧ್ಯಕ್ಷ ಮಂಜುನಾಥ ಪೂಜಾರಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು. | Kannada Prabha

ಸಾರಾಂಶ

ಬ್ರಹ್ಮಶ್ರೀ ನಾರಾಯಣ ಗುರು ಅಭಿವೃದ್ಧಿ ನಿಗಮಕ್ಕೆ ರು. 500 ಕೋಟಿ ರು. ಅನುದಾನ ನೀಡುವಂತೆ ಮನವಿ ಸಲ್ಲಿಸಲಾಗುವುದು ಎಂದು ನಿಗಮದ ಅಧ್ಯಕ್ಷ ಮಂಜುನಾಥ ಪೂಜಾರಿ ಹೇಳಿದ್ದಾರೆ.

ಉಡುಪಿ: ಬ್ರಹ್ಮಶ್ರೀ ನಾರಾಯಣ ಗುರು ಅಭಿವೃದ್ಧಿ ನಿಗಮಕ್ಕೆ ರು. 500 ಕೋಟಿ ರು. ಅನುದಾನ ನೀಡುವಂತೆ ಮನವಿ ಸಲ್ಲಿಸಲಾಗುವುದು ಎಂದು ನಿಗಮದ ಅಧ್ಯಕ್ಷ ಮಂಜುನಾಥ ಪೂಜಾರಿ ಹೇಳಿದ್ದಾರೆ.

ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನಿಗಮದ ಈಡಿಗ, ಬಿಲ್ಲವ, ನಾಮಧಾರಿ ಸೇರಿದಂತೆ ಹಿಂದುಳಿದ ಸಮಾಜದ 26 ಪಂಗಡಗಳಿದ್ದು, ಅವುಗಳ ಅಭಿವೃದ್ಧಿಗೆ ನೀಲ ನಕ್ಷೆಯನ್ನು ಸಿದ್ಧಪಡಿಸಿದ್ದು, ಅದನ್ನು ಕಾರ್ಯಾರೂಪಕ್ಕೆ ತರಲು 500 ಕೋಟಿ ರು.ಗಳ ಅನುದಾನದ ಅಗತ್ಯವಿದೆ ಎಂದರು.

ನಿಗಮವು ಈ 26 ಪಂಡಗಳ ಶಿಕ್ಷಣ, ಉದ್ಯೋಗ - ಸ್ವಉದ್ಯೋಗ, ಉದ್ಯಮ, ಧಾರ್ಮಿಕತೆ, ಮಹಿಳಾ ಸಬಲೀಕರಣಗಳಿಗೆ ಯೋಜನೆಗಳನ್ನು ರೂಪಿಸಲಿದೆ. ಜೊತೆಗೆ ಉತ್ತರ ಕರ್ನಾಟಕ ಭಾಗದಲ್ಲಿ ಮೂಲಭೂತ ಸೌಕರ್ಯ ಒದಗಿಸುವುದು, ಕ್ರೀಡೆ, ಸಿನೆಮಾ ಇನ್ನಿತರ ಕಲೆಗಳಲ್ಲಿ ಸಾಧನೆ ಮಾಡಿದವರಿಗೆ ಸರ್ಕಾರಿ ಉದ್ಯೋಗದಲ್ಲಿ ಮೀಸಲಾತಿ, ಕಲೆ, ಕ್ರೀಡೆ, ಸಾಹಿತ್ಯ, ಶಿಕ್ಷಣ, ಜಾನಪದ, ನಾಟಿವೈದ್ಯ ಇನ್ನಿತರ ಕ್ಷೇತ್ರಗಳ ಸಾಧಕರಿಗೆ ಬ್ರಹ್ಮಶ್ರೀ ನಾರಾಯಣ ಗುರು ಹೆಸರಿನಲ್ಲಿ ರಾಜ್ಯ ಮಟ್ಟದ ಪ್ರಶಸ್ತಿ ನೀಡುವುದು, ಶೇಂದಿ ಮತ್ತು ಕಲ್ಪರಸ ತಯಾರಿಕೆಯಲ್ಲಿ ಆಕಸ್ಮಿಕ ಅಪಘಾತವಾದಾಗ ಅವಲಂಬಿತ ಕುಟುಂಬಕ್ಕೆ ಪರಿಹಾರ ನೀಡುವುದು, ಆಯುರ್ವೇದ, ಗಿಡಮೂಲಿಕೆಗಳನ್ನು ಮತ್ತು ಶೇಂದಿ - ಕಲ್ಪರಸ ಬೆಳೆಗಳ ಪಾಂಟ್ರೇಶನ್‌ಗೆ ಉತ್ತೇಜನ, ನಾರಾಯಣ ಗುರುಗಳ ಸಾಮರಸ್ಯದ ಸಂದೇಶಗಳನ್ನು ಕರ್ನಾಟಕದ ಎಲ್ಲೆಡೆ ಪ್ರಚಾರ ಮಾಡುವ ಬಗ್ಗೆಯೂ ನಿಗಮ ಯೋಜನೆ ಹಾಕಿಕೊಂಡಿದೆ ಎಂದರು.

ಸುದ್ದಿಗೋಷ್ಠಿಯಲ್ಲಿ ಅಶೋಕ್ ಪೂಜಾರಿ ಬೀಜಾಡಿ, ಡಾ. ಸಂತೋಷ್ ಕುಮಾರ್, ಮಹೇಶ್ ಅಂಚನ್ ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

₹400 ಕೋಟಿ ದರೋಡೆ ಕೇಸ್‌ನ ಸಂಭಾಷಣೆ ಆಡಿಯೋ ವೈರಲ್‌!
ಇಂದಿನಿಂದ ಮತ್ತೆ ಕಲಾಪ : ಭಾರೀ ಕೋಲಾಹಲ ನಿರೀಕ್ಷೆ