ಸೂಕ್ತ ಪರಿಹಾರ ನೀಡಿಲು ಮನವಿ

KannadaprabhaNewsNetwork |  
Published : May 30, 2024, 12:48 AM IST
29ಐಎನ್‌ಡಿ9,ಇಂಡಿ ಪಟ್ಟಣದ ಹಂಜಗಿ ರಸ್ತೆಯಲ್ಲಿರುವ ಚಂದ್ರಶೇಖರ ಸಾಲೋಟಗಿ ರೈತರ ಲಿಂಬೆ ಗಿಡ ಆಕಸ್ಮೀಕ ಬೆಂಕಿಗೆ ಆಹುತಿಯಾಗಿದ್ದು, ರೈತನಿಗೆ ಸೂಕ್ತ ಪರಿಹಾರ ಒದಗಿಸಬೇಕು ಎಂದು ಆಗ್ರಹಿಸಿ ಎಸಿ ಅಬಙೀದ್ ಗದ್ಯಾಳ ಅವರಿಗೆ ಮನವಿ ಸಲ್ಲಿಸಲಾಯಿತು. | Kannada Prabha

ಸಾರಾಂಶ

ಪಟ್ಟಣದ ಹಂಜಗಿ ರಸ್ತೆಯಲ್ಲಿರುವ ಚಂದ್ರಶೇಖರ ಸಾಲೋಟಗಿ ಎಂಬ ರೈತರಿಗೆ ಸೇರಿದ 3 ಎಕರೆ ಲಿಂಬೆ ಗಿಡಗಳು ಆಕಸ್ಮಿಕ ಬೆಂಕಿ ಅನಾಹುತದಲ್ಲಿ ಸುಟ್ಟು ಕರಕಲಾಗಿವೆ. ಕೂಡಲೇ ಲಿಂಬೆ ಬೆಳೆ ಕಳೆದುಕೊಂಡ ರೈತನಿಗೆ ಸೂಕ್ತ ಪರಿಹಾರ ನೀಡಬೇಕು ಎಂದು ಜೆಡಿಎಸ್ ಮುಖಂಡ ಬಿ.ಡಿ.ಪಾಟೀಲ, ಬಿಜೆಪಿ ಮುಖಂಡ ಕಾಸುಗೌಡ ಬಿರಾದಾರ ನೇತೃತ್ವದಲ್ಲಿ ರೈತರು ಎಸಿ ಅಬೀದ್ ಗದ್ಯಾಳ ಅವರಿಗೆ ಮನವಿ ಸಲ್ಲಿಸಿದರು.

ಕನ್ನಡಪ್ರಭ ವಾರ್ತೆ ಇಂಡಿ

ಪಟ್ಟಣದ ಹಂಜಗಿ ರಸ್ತೆಯಲ್ಲಿರುವ ಚಂದ್ರಶೇಖರ ಸಾಲೋಟಗಿ ಎಂಬ ರೈತರಿಗೆ ಸೇರಿದ 3 ಎಕರೆ ಲಿಂಬೆ ಗಿಡಗಳು ಆಕಸ್ಮಿಕ ಬೆಂಕಿ ಅನಾಹುತದಲ್ಲಿ ಸುಟ್ಟು ಕರಕಲಾಗಿವೆ. ಕೂಡಲೇ ಲಿಂಬೆ ಬೆಳೆ ಕಳೆದುಕೊಂಡ ರೈತನಿಗೆ ಸೂಕ್ತ ಪರಿಹಾರ ನೀಡಬೇಕು ಎಂದು ಜೆಡಿಎಸ್‌ ಮುಖಂಡ ಬಿ.ಡಿ.ಪಾಟೀಲ, ಬಿಜೆಪಿ ಮುಖಂಡ ಕಾಸುಗೌಡ ಬಿರಾದಾರ ನೇತೃತ್ವದಲ್ಲಿ ರೈತರು ಎಸಿ ಅಬೀದ್‌ ಗದ್ಯಾಳ ಅವರಿಗೆ ಮನವಿ ಸಲ್ಲಿಸಿದರು.

ಈ ಸಂದರ್ಭದಲ್ಲಿ ಜೆಡಿಎಸ್‌ ಮುಖಂಡ ಬಿ.ಡಿ.ಪಾಟೀಲ,ಬಿಜೆಪಿ ಮುಖಂಡ ಕಾಸುಗೌಡ ಬಿರಾದಾರ ಮಾತನಾಡಿ, ಸುಮಾರು 10 ವರ್ಷದ ನಿಂಬೆ ಗಿಡಗಳು ರೈತ ಟ್ಯಾಂಕರ್‌ ನೀರಿನಿಂದ ಜೋಪಾನ ಮಾಡಿದ್ದ, ಇದೀಗ ನಿಂಬೆ ಗಿಡಗಳು ಬೆಂಕಿಗೆ ಆಹುತಿಯಾಗಿದ್ದು ರೈತನ ಕುಟುಂಬಕ್ಕೆ ಬರಸಿಡಿಲ ಬಡಿದಂತಾಗಿದೆ. ಘಟನೆಯಾಗಿ ನಾಲ್ಕೈದು ದಿನಗಳು ಗತಿಸಿದರೂ ಪಟ್ಟಣದಲ್ಲಿರುವ ರಾಜ್ಯ ಲಿಂಬೆ ಅಬಿವೃದ್ಧಿ ಮಂಡಳಿ ಸೂಕ್ತ ಕ್ರಮದ ಭರವಸೆ ನೀಡದಿರುವುದು ವಿಪರ್ಯಾಸ. ನಿಂಬೆ ನಾಡಿನಲ್ಲಿ ನಿಂಬೆ ಬೆಳೆಗಾರರಿಗೆ ಇಂತಹ ಅವಘಡಗಳು ಸಂಭವಿಸಿದಾಗ ವಿಶೇಷ ಪ್ಯಾಕೇಜ್ ಘೋಷಣೆ ಮಾಡುವ ಮೂಲಕ ಲಿಂಬೆ ಅಬಿವೃದ್ಧಿ ಮಂಡಳಿ ಹಾಗೂ ಸರಕಾರ ರೈತರ ನೆರವಿಗೆ ಬರಬೇಕು ಎಂದು ಆಗ್ರಹಿಸಿದರು.

ಈ ವೇಳೆ ಶ್ರೀಶೈಲಗೌಡ ಪಾಟೀಲ, ಸಿದ್ದು ಡಂಗಾ,ಬಾಳು ರಾಠೋಡ, ರಮೇಶ ರಾಠೋಡ, ತಿಪ್ಪಣ್ಣ ಉಟಗಿ, ಸಾಹಿಬಣ್ಣಾ ಯಲ್ಲಡಗಿ, ಬಾಪುಗೌಡ ಬಿರಾದಾರ ಸಾಹೇಬಣ್ಣಾ ಪೂಜಾರಿ, ಸಿದ್ದು ಹೂಗಾರ , ಇಬ್ರಾಹಿಂ ಚಪ್ಪರಬಂದ, ಶಿವಾನಂದ ಯಂಕಂಚಿ, ಶ್ರೀಶೈಲ ಹೂಲ್ಲೂರ,ಕಲ್ಲಪ್ಪ ಪೂಜಾರಿ ಮೊದಲಾದವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಬಿಪಿಎಲ್‌ ಮಾನದಂಡ ಬದಲಿಗೆ ಮುಂದಾದ ರಾಜ್ಯ
ಸರ್ಕಾರಿ ಶಾಲೆಗೆ ಶೀಘ್ರ 11000 ಶಿಕ್ಷಕರ ನೇಮಕ : ಮಧು