ಗದಗ: ಬೀದಿ ಬದಿ ವ್ಯಾಪಾರಿಗಳಿಂದ ಕರ ವಸೂಲಿ ಮಾಡದಂತೆ ಮನವಿ

KannadaprabhaNewsNetwork |  
Published : Apr 05, 2024, 01:12 AM ISTUpdated : Apr 05, 2024, 09:18 AM IST
ಪಟ್ಟಣದ ಪುರಸಭೆಯ ಮುಖ್ಯಾಧಿಕಾರಿ ಮಹೇಶ ಹಡಪದ ಅವರಿಗೆ ಬೀದಿ ಬದಿಯ ವ್ಯಾಪಾರಿಗಳಿಂದ ಸಂತೆ ಕರ ವಸೂಲಿ ಮಾಡದಂತೆ ಮನವಿ ಸಲ್ಲಿಸಿದರು. | Kannada Prabha

ಸಾರಾಂಶ

ಸರ್ಕಾರದ ಆದೇಶ ಪಾಲಿಸಿ ಬೀದಿ ಬದಿಯ ವ್ಯಾಪಾರಸ್ಥರಿಂದ ಸಂತೆ ಕರ ವಸೂಲಿ ಮಾಡುತ್ತಿರುವುದು ಕಾನೂನು ಬಾಹಿರ

ಲಕ್ಷ್ಮೇಶ್ವರ: ಪಟ್ಟಣದಲ್ಲಿ ಬೀದಿ ಬೀದಿ ಬದಿಯ ವ್ಯಾಪಾರಸ್ಥರಿಂದ ಸಂತೆ ಕರ ವಸೂಲಿ ಮಾಡಬಾರದು ಎಂದು ಪಟ್ಟಣದ ಬೀದಿ ಬದಿ ವ್ಯಾಪಾರಿಗಳು ಬುಧವಾರ ಪುರಸಭೆಯ ಎದುರು ಪ್ರತಿಭಟನೆ ನಡೆಸಿದರು.

ಈ ವೇಳೆ ಪಟ್ಟಣದ ಬೀದಿ ಬದಿಯ ವ್ಯಾಪಾರಸ್ಥರಿಗೆ ಸಂಘದ ಅಧ್ಯಕ್ಷ ಮಂಜುನಾಥ ಹೊಗೆಸೊಪ್ಪಿನ ಮಾತನಾಡಿ, ಸರ್ಕಾರ ಬೀದಿ ಬದಿಯ ವ್ಯಾಪಾರಸ್ಥರಿಂದ ಸಂತೆ ಕರ, ನೆಲ ಬಾಡಿಗೆ ವಸೂಲಿ ಮಾಡಬಾರದು ಎಂದು ಆದೇಶಿಸಿದೆ. ಒಂದು ವೇಳೆ ಬೀದಿ ಬದಿಯ ವ್ಯಾಪಾರಿಗಳಿಂದ ಸಂತೆ ಕರ ಹಾಗೂ ನೆಲ ಬಾಡಿಗೆ ಇತ್ಯಾದಿ ವಸೂಲಿ ಮಾಡಿದಲ್ಲಿ ಅದನ್ನು ರಾಷ್ಟ್ರೀಯ ಜೀವನೋಪಾಯ ಅಭಿಯಾನ ಹಾಗೂ ಕೌಶಲ್ಯಾಭಿವೃದ್ಧಿ. ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ ಹೊರಡಿಸಿರುವ ಆದೇಶದಂತೆ ಬೀದಿ ಬದಿಯ ವ್ಯಾಪಾರಿಗಳ ಸಂರಕ್ಷಣೆ ಹಿತದೃಷ್ಟಿಯಿಂದ ಕ್ರಮ ಕೈಗೊಳ್ಳಬೇಕು. ಇಲ್ಲವಾದಲ್ಲಿ ಪುರಸಭೆಯ ಎದುರು ಪ್ರತಿಭಟನೆ ನಡೆಸಿ ಹೋರಾಟ ಮಾಡಲಾಗುವುದು ಎಂದು ಹೇಳಿದರು.

ಈ ವೇಳೆ ಗದಗ ಜಿಲ್ಲಾ ಬೀದಿ ಬದಿಯ ವ್ಯಾಪಾರಸ್ಥರ ಸಂಘದ ಅಧ್ಯಕ್ಷ ಮಾತನಾಡಿ, ಸರ್ಕಾರದ ಆದೇಶ ಪಾಲಿಸಿ ಬೀದಿ ಬದಿಯ ವ್ಯಾಪಾರಸ್ಥರಿಂದ ಸಂತೆ ಕರ ವಸೂಲಿ ಮಾಡುತ್ತಿರುವುದು ಕಾನೂನು ಬಾಹಿರವಾಗಿದೆ.ಆದ್ದರಿಂದ ಕರೆ ವಸೂಲಾತಿ ತಕ್ಷಣವೇ ನಿಲ್ಲಿಸಬೇಕು ಎಂದು ಆಗ್ರಹಿಸಿದರು.

ಈ ವೇಳೆ ಪುರಸಭೆ ಮುಖ್ಯಾಧಿಕಾರಿ ಮಹೇಶ ಹಡಪದ ಮಾತನಾಡಿ, ಸರ್ಕಾರದ ಆದೇಶದಂತೆ ಪಟ್ಟಣದಲ್ಲಿನ ನೋಂದಾಯಿತ ಬೀದಿ ಬದಿಯ ವ್ಯಾಪಾರಸ್ಥರಿಂದ ಸಂತೆ ಕರ ವಸೂಲಿ ಮಾಡುವುದನ್ನು ನಿಲ್ಲಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ವಸೂಲಿ ಮಾಡಿದಲ್ಲಿ ಅದನ್ನು ಬೀದಿ ಬದಿಯ ವ್ಯಾಪಾರಿಗಳ ಸಂರಕ್ಷಣೆ ಕಾಯ್ದೆಯಂತೆ ಅವರು ಕಲ್ಯಾಣಾಭಿವೃದ್ಧಿಗೆ ಬಳಸುವ ಕಾರ್ಯ ಮಾಡಲಾಗುತ್ತದೆ ಎಂದು ಹೇಳಿದರು.

ಈ ವೇಳೆ ಮುನೀರಸಾಬ್‌ ಸಿದ್ದಾಪುರ, ಹನುಮಂತ ರಾಮಗೇರಿ, ದಾದಾಪೀರ್ ಬೆಂಡಿಗೇರಿ, ಮಂಜುನಾಥ ಬಸಾಪೂರ, ಪರಶುರಾಮ ಬಳ್ಳಾರಿ, ಮೆಹಬೂಬ ಸಾಬ್ ಸುಂಡಕೆ, ರಾಜೇಸಾಬ ಮುಲ್ಲಾನವರ, ಲಕ್ಷ್ಮಣ ಮುಳಗುಂದ, ಸೋಮವ್ವ ಬೆಟಗೇರಿ, ಶಬ್ಬೀರ್ ಅಹ್ಮದ್ ಶಿರಹಟ್ಟಿ ಇದ್ದರು.

PREV

Recommended Stories

ಜಾತಿಗಣತಿ ಈಗ ಕಗ್ಗಂಟು : ತಡರಾತ್ರಿವರೆಗೆ ಸಭೆ
ಸಹಕಾರಿ ತತ್ವದಿಂದ ಕಟ್ಟಕಡೆ ವ್ಯಕ್ತಿಗೂ ಸಹಾಯ