ಒಣದ್ರಾಕ್ಷಿಗೆ ಬೆಂಬಲ ಬೆಲೆ ಘೋಷಿಸುವಂತೆ ಕೇಂದ್ರ ಸರ್ಕಾರಕ್ಕೆ ಆಗ್ರಹ

KannadaprabhaNewsNetwork |  
Published : Dec 20, 2024, 12:48 AM IST
ಅಥಣಿ ತಾಲೂಕಿನ  ದ್ರಾಕ್ಷಿ ಬೆಳೆಗಾರರು ಮಾಜಿ ಶಾಸಕ ಶಹಜಾನ್ ಡೊಂಗರಗಾವ ನೇತ್ರತ್ವದಲ್ಲಿ ಕೇಂದ್ರ ಸಚಿವೆ  ನಿರ್ಮಲಾ ಸೀತಾರಾಮ್ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದರು. | Kannada Prabha

ಸಾರಾಂಶ

ಕರ್ನಾಟಕ ದ್ರಾಕ್ಷಿ ಬೆಳೆಗಾರರ ಸಂಘದ ವತಿಯಿಂದ ದ್ರಾಕ್ಷಿ ಬೆಳೆಗಾರರ ಸಮಸ್ಯ ಬಗೆಹರಿಸುವಂತೆ ಒತ್ತಾಯಿಸಿ ಅಥಣಿ ತಾಲೂಕಿನ ಮಾಜಿ ಶಾಸಕ ಶಹಾಜಹಾನ ಡೋಂಗರಗಾಂವ ಅವರ ನೇತೃತ್ವದಲ್ಲಿ ಅಥಣಿ ದ್ರಾಕ್ಷಿ ಬೆಳೆಗಾರರ ಸಂಘದ ಸದಸ್ಯರು ಕೇಂದ್ರ ಕೃಷಿ ಸಚಿವ ಶಿವರಾಜಸಿoಗ ಚವ್ಹಾಣ ಅವರಿಗೆ ಮನವಿ ಸಲ್ಲಿಸಿದರು.

ಕನ್ನಡಪ್ರಭ ವಾರ್ತೆ ಅಥಣಿ

ಕರ್ನಾಟಕ ದ್ರಾಕ್ಷಿ ಬೆಳೆಗಾರರ ಸಂಘದ ವತಿಯಿಂದ ದ್ರಾಕ್ಷಿ ಬೆಳೆಗಾರರ ಸಮಸ್ಯೆ ಬಗೆಹರಿಸುವಂತೆ ಒತ್ತಾಯಿಸಿ ಅಥಣಿ ತಾಲೂಕಿನ ಮಾಜಿ ಶಾಸಕ ಶಹಾಜಹಾನ ಡೋಂಗರಗಾಂವ ಅವರ ನೇತೃತ್ವದಲ್ಲಿ ಅಥಣಿ ದ್ರಾಕ್ಷಿ ಬೆಳೆಗಾರರ ಸಂಘದ ಸದಸ್ಯರು ಕೃಷಿ ಮತ್ತು ರೈತ ಕಲ್ಯಾಣ ಇಲಾಖೆ ಕೇಂದ್ರ ಸಚಿವ ಶಿವರಾಜಸಿoಗ ಚವ್ಹಾಣ, ಕೇಂದ್ರ ಸಚಿವ ಎಚ್.ಡಿ ಕುಮಾರಸ್ವಾಮಿ, ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ, ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್, ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ ಸೇರಿದಂತೆ ಹಲವು ಸಚಿವರನ್ನು ಭೇಟಿ ಮಾಡಿ ದ್ರಾಕ್ಷಿ ಬೆಳೆಗಾರರ ಸಮಸ್ಯೆಗಳ ಕುರಿತು ಮನವರಿಕೆ ಮಾಡಿ ಮನವಿ ಸಲ್ಲಿಸಿದರು.

ದೂರವಾಣಿ ಮೂಲಕ ಪತ್ರಿಕೆಯೊಂದಿಗೆ ಮಾತನಾಡಿದ ಮಾಜಿ ಶಾಸಕ ಶಹಾಜಹಾನ ಡೋಂಗರಗಾಂವ ಅವರು, ದ್ರಾಕ್ಷಿ ಬೆಳೆಗಾರರು ಪ್ರತಿ ವರ್ಷ ಒಂದಲ್ಲ ಒಂದು ಸಮಸ್ಯೆ ಎದುರಿಸುತ್ತಾ ಬಂದಿದ್ದಾರೆ. ಹಲವು ವರ್ಷಗಳಿಂದ ದ್ರಾಕ್ಷಿ ಬೆಳೆಗಾರರು ತಮ್ಮ ಸಮಸ್ಯೆಗಳಿಗೆ ಪರಿಹಾರ ಒದಗಿಸಿಕೊಡುವಂತೆ ಹೋರಾಟ ಮಾಡುತ್ತಿದ್ದು ಹಾಗೂ ಹಲವು ಬಾರಿ ಸರ್ಕಾರಕ್ಕೆ ಮನವಿ ಮಾಡಿದರೂ ಯಾವುದೇ ಲಾಭವಾಗಿಲ್ಲ. ಸರ್ಕಾರ ದ್ರಾಕ್ಷಿ ಬೆಳೆಗಾರರನ್ನು ಕಡೆಗಣಿಸುತ್ತಲಿದ್ದು, ದ್ರಾಕ್ಷಿ ಬೆಳೆಯ ಬಗ್ಗೆ ಸದನದಲ್ಲಿ ಚರ್ಚೆ ನಡೆಯಬೇಕಾಗಿತ್ತು. ಆದರೆ ಇಲ್ಲಿಯವರೆಗೆ ಚರ್ಚೆ ನಡೆಯದೇ ಇದ್ದ ಕಾರಣ ಅನಿವಾರ್ಯವಾಗಿ ನಾವು ಕೇಂದ್ರ ಸರ್ಕಾರಕ್ಕೆ ಮನವಿ ಸಲ್ಲಿಸಿ ಬೇಕಾಗಿದೆ. ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ ಅವರ ನೇತೃತ್ವದಲ್ಲಿ ಕೇಂದ್ರ ಸಚಿವರಿಗೆ ದ್ರಾಕ್ಷಿ ಬೆಳೆಗಾರರ ಸಮಸ್ಯೆ ಕುರಿತು ಮನವಿ ಸಲ್ಲಿಸಲಾಗಿದೆ. ಎಲ್ಲ ಸಚಿವರು ವಿಶೇಷವಾಗಿ ಮುತುವರ್ಜಿ ವಹಿಸಿ ಸಂಬಂಧಪಟ್ಟ ಇಲಾಖೆಯಿಂದ ಮಾಹಿತಿ ಪಡೆದು ದ್ರಾಕ್ಷಿ ಬೆಳೆಗಾರರ ಸಮಸ್ಯೆಯ ಕುರಿತು ಚರ್ಚಿಸಿ ಆದಷ್ಟು ಬೇಗ ಸಮಸ್ಯೆ ಬಗೆಹರಿಸುವದಾಗಿ ಭರವಸೆ ನೀಡಿದ್ದಾರೆ ಎಂದು ಹೇಳಿದರು.

ಈ ವೇಳೆ ಮಾಜಿ ಜಿಪಂ ಸದಸ್ಯ ಸಿದ್ದಪ್ಪ ಮುದಕಣ್ಣವರ, ಪ್ರಕಾಶ ಪಾಟೀಲ, ಸುಭಾಸ ಮೊರೆ, ಅಪ್ಪಾಸಾಬ ತೇರದಾಳ, ಶ್ರೀಕಾಂತ ಮಾಕಾಣಿ ಸೇರಿದಂತೆ ಹಲವರು ಮುಖಂಡರು ಉಪಸ್ಥಿತರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ರೈಲ್ವೆ ಪರೀಕ್ಷೆಯಲ್ಲಿ ಮತ್ತೆ ಕನ್ನಡಕ್ಕೆ ಕೊಕ್
ಓಡಿ ಹೋದ ಹೇಡಿ ಎನಿಸಿಕೊಳ್ಳುವುದಿಲ್ಲ. ಅಲ್ಲೇ ರಾಜಕೀಯ ಅಸ್ತಿತ್ವ ಕಂಡುಕೊಳ್ಳುತ್ತೇನೆ : ನಿಖಿಲ್‌