ಸಂಪುಟಕ್ಕೆ ರಾಜಣ್ಣ ಮರುಸೇರ್ಪಡೆಗಾಗಿ ಸಿಎಂಗೆ ಮನವಿ: ಪ್ರಸನ್ನಾನಂದ ಶ್ರೀ

KannadaprabhaNewsNetwork |  
Published : Nov 25, 2025, 02:00 AM IST
೨೪ ಎಚ್‌ಆರ್‌ಆರ್‌ ೦೪ಹರಿಹರ ತಾಲ್ಲೂಕಿನ ರಾಜನಹಳ್ಳಿಯ ಶ್ರೀ ಮಹರ್ಷಿ ವಾಲ್ಮೀಕಿ ಗುರುಪೀಠದಲ್ಲಿ ಸೋಮವಾರ ನಡೆದ ವಾಲ್ಮೀಕಿ ಸಮಾಜದ ರಾಜ್ಯ ಮಟ್ಟದ ಜ್ವಲಂತ ಸಮಸ್ಯೆ ಕುರಿತ ಸಭೆ ಸಾನಿಧ್ಯವಹಿಸಿ ಪ್ರಸನ್ನಾನಂದ ಶ್ರೀ ಮಾತನಾಡಿದರು. | Kannada Prabha

ಸಾರಾಂಶ

ನಿಷ್ಠುರ ಸ್ವಭಾವದ ಮಾಜಿ ಸಚಿವ ಕೆ.ಎನ್. ರಾಜಣ್ಣ ಅವರನ್ನು ಸಂಪುಟಕ್ಕೆ ಮರುಸೇರ್ಪಡೆ ಮಾಡಿಕೊಳ್ಳುವುದು ಸೇರಿದಂತೆ ಸಮುದಾಯದ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಮಂಗಳವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಲಾಗುವುದೆಂದು ರಾಜನಹಳ್ಳಿ ಮಹರ್ಷಿ ವಾಲ್ಮೀಕಿ ಗುರುಪೀಠದ ಪ್ರಸನ್ನಾನಂದ ಶ್ರೀ ನುಡಿದಿದ್ದಾರೆ.

- ಸಮುದಾಯದ ಬೇಡಿಕೆಗಳ ಈಡೇರಿಸಲು ಆಗ್ರಹಿಸುತ್ತೇವೆ: ಸ್ವಾಮೀಜಿ

- - -

ಕನ್ನಡಪ್ರಭ ವಾರ್ತೆ ಹರಿಹರ

ನಿಷ್ಠುರ ಸ್ವಭಾವದ ಮಾಜಿ ಸಚಿವ ಕೆ.ಎನ್. ರಾಜಣ್ಣ ಅವರನ್ನು ಸಂಪುಟಕ್ಕೆ ಮರುಸೇರ್ಪಡೆ ಮಾಡಿಕೊಳ್ಳುವುದು ಸೇರಿದಂತೆ ಸಮುದಾಯದ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಮಂಗಳವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಲಾಗುವುದೆಂದು ರಾಜನಹಳ್ಳಿ ಮಹರ್ಷಿ ವಾಲ್ಮೀಕಿ ಗುರುಪೀಠದ ಪ್ರಸನ್ನಾನಂದ ಶ್ರೀ ನುಡಿದರು.

ತಾಲೂಕಿನ ರಾಜನಹಳ್ಳಿಯ ಶ್ರೀ ಮಹರ್ಷಿ ವಾಲ್ಮೀಕಿ ಗುರುಪೀಠದಲ್ಲಿ ಸೋಮವಾರ ನಡೆದ ವಾಲ್ಮೀಕಿ ಸಮಾಜದ ರಾಜ್ಯ ಮಟ್ಟದ ಜ್ವಲಂತ ಸಮಸ್ಯೆ ಕುರಿತ ಸಭೆ ಸಾನ್ನಿಧ್ಯ ವಹಿಸಿ ಅವರು ಮಾತನಾಡಿದರು. ಪಕ್ಷದ ಮುಖಂಡರಿಗೆ ಸಂಬಂಧಿಸಿ ಒಂದು ಹೇಳಿಕೆ ನೀಡಿದ್ದಾರೆಂಬ ಸಬೂಬಿನಿಂದ ಸಚಿವ ಸ್ಥಾನದಿಂದ ಬಿಟ್ಟಿರುವುದು ಸರಿಯಲ್ಲ ಎಂದರು.

ಪರಿಶಿಷ್ಟ ಪಂಗಡದ ಹೆಸರಿನಲ್ಲಿ ನಕಲಿ ಜಾತಿ ಪ್ರಮಾಣ ಪತ್ರ ಪಡೆಯುತ್ತಿರುವ ಅನ್ಯ ಜಾತಿಯವರ ವಿರುದ್ಧ ಸರ್ಕಾರ ಕ್ರಮ ಕೈಗೊಳ್ಳಬೇಕು. ಸಮುದಾಯದ ವಿದ್ಯಾರ್ಥಿಗಳಿಗೆ ಈ ಹಿಂದಿನಂತೆ ವಿದ್ಯಾರ್ಥಿ ವೇತನ ವಿತರಣೆ, ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳ ಜ್ಞಾನಾರ್ಜನೆಗಾಗಿ ಬುಡಕಟ್ಟು ವಿಶ್ವವಿದ್ಯಾನಿಲಯ ಸ್ಥಾಪನೆಗೂ ಆಗ್ರಹಿಸಲಾಗುವುದೆಂದರು.

ನಾಳೆ ಬೆಂಗಳೂರಿನಲ್ಲಿ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ನೇತೃತ್ವದಲ್ಲಿ ರಾಜ್ಯಮಟ್ಟದ ಅಧಿಕಾರಿಗಳ ಸಭೆ ಕರೆದಿದ್ದು, ಸಮುದಾಯದವರಿಗೆ ಬರುವ ಯೋಜನೆಗಳ ಬಗ್ಗೆ ಅಧಿಕಾರಿಗಳಿಂದ ಮಾಹಿತಿ ಪಡೆದು ಸಮಾಜಕ್ಕೆ ತಿಳಿಸುವ ಕಾರ್ಯ ನಡೆಯಲಿದೆ ಎಂದ ಅವರು, ಮಠದ ನಿರ್ಣಯ, ಕಾರ್ಯ, ಕಲಾಪಗಳ ಬಗ್ಗೆ ಸಮುದಾಯದ ಜನರಿಗೆ ತಿಳಿಸಲು ರಾಜ್ಯದ ಪ್ರತಿ ತಾಲೂಕಿಗೆ ಒಬ್ಬರಂತೆ ಮಠದ ವಿಶೇಷ ಪ್ರತಿನಿಧಿಯನ್ನು ನೇಮಿಸಲಾಗುವುದು ಎಂದರು.

ಧರ್ಮದರ್ಶಿ ಶಾಂತಲಾ ರಾಜಣ್ಣ ಕೆ.ಎನ್. ಮಾತನಾಡಿ, ತುಮಕೂರು ಸೇರಿದಂತೆ ರಾಜ್ಯದ ವಿವಿಧೆಡೆಯಿಂದ ಮಠಕ್ಕೆ ಆಗಮಿಸುತ್ತಿದ್ದವರ ಸಮಸ್ಯೆಗಳನ್ನು ಬಗೆಹರಿಸಲು ತಮ್ಮ ಪತಿ ರಾಜಣ್ಣ ಶ್ರಮಿಸಿದ್ದಾರೆ. ಶ್ರೀ ಮಠದಲ್ಲಿ ಪಕ್ಷ ರಾಜಕಾರಣ ತರಬಾರದು. ಮುಂಬರುವ ಫೆ.8 ಮತ್ತು 9ರಂದು 8ನೇ ವರ್ಷದ ವಾಲ್ಮೀಕಿ ಜಾತ್ರೆ ನಡೆಯಲಿದೆ. ಶ್ರೀ ಅವರಿಗೆ ಬೆಂಬಲವಾಗಿ ನಿಂತು ಜಾತ್ರೆಯನ್ನು ಯಶಸ್ವಿಗೊಳಿಸಬೇಕಿದೆ ಎಂದರು.

ಸಭೆಯಲ್ಲಿ ಧರ್ಮದರ್ಶಿಗಳಾದ ಕೆ.ಬಿ.ಮಂಜುನಾಥ್, ಎಂ.ಎಸ್. ಬಸವರಾಜಪ್ಪ, ಮಲ್ಲಪ್ಪ ಕೌಲಗಿ, ವಾಲ್ಮೀಕಿ ಸಮಾಜದ ಜಿಲ್ಲಾಧ್ಯಕ್ಷರಾದ ಮೋಹನ್ ಗುಡಿಸಲಮನಿ, ರಾಜಶೇಖರ ತಳವಾರ, ದಶರಥ ಜಮಾದರ, ಗೋವಿಂದಪ್ಪ, ಪುರುಷೋತ್ತಮ ರಾಜಶೇಖರ ತಳವಾರ, ರಾಜ್ಯದ ವಿವಿಧ ತಾಲೂಕಿನ ಸಮಾಜದ ಅಧ್ಯಕ್ಷರು, ಮಠದ ಪ್ರತಿನಿಧಿಗಳು, ಭಕ್ತರು ಭಾಗವಹಿಸಿದ್ದರು.

- - -

-೨೪ಎಚ್‌ಆರ್‌ಆರ್‌೦೪:

ಸಭೆಯಲ್ಲಿ ಪ್ರಸನ್ನಾನಂದ ಶ್ರೀ ಸಾನ್ನಿಧ್ಯ ವಹಿಸಿ ಮಾತನಾಡಿದರು.

PREV

Recommended Stories

ಸಿದ್ದರಾಮಯ್ಯ ಕಾಂಗ್ರೆಸ್‌ ಆಸ್ತಿ: ಡಿಕೆ - ಅವರ ಮಾತೇ ವೇದವಾಕ್ಯ : ಡಿಸಿಎಂ ಡಿ.ಕೆ.ಶಿವಕುಮಾರ್‌
ದಿಲ್ಲಿಯಲ್ಲಿ ಈಗ ಡಿಕೆಶಿ ಪರ ಆಪ್ತ ಶಾಸಕರ ಬಹಿರಂಗ ಲಾಬಿ!