ಸಮ್ಮೇಳನ ಸಭಾಂಗಣ ನಿರ್ಮಾಣಕ್ಕೆ ಅನುದಾನ ನೀಡಲು ಸಿಎಂಗೆ ಮನವಿ

KannadaprabhaNewsNetwork |  
Published : Dec 24, 2025, 02:15 AM IST
ಸುದ್ದಿಗೋಷ್ಠಿಯಲ್ಲಿ ಕರ್ನಾಟಕ ವಾಣಿಜ್ಯೋದ್ಯಮ ಸಂಸ್ಥೆ ಅಧ್ಯಕ್ಷ ಜಿ.ಕೆ. ಆದಪ್ಪಗೌಡರ ಮಾತನಾಡಿದರು. | Kannada Prabha

ಸಾರಾಂಶ

ಎಪಿಎಂಸಿ ಆವರಣದಲ್ಲಿ ಕೆಸಿಸಿಐನ 9 ಎಕರೆ ಜಾಗವಿದ್ದು, ಅದನ್ನು ಅಭಿವೃದ್ಧಿಪಡಿಸಲು ಕೋರಲಾಗುವುದು. ಅಲ್ಲದೆ, ಎಪಿಎಂಸಿ ಬಳಿ ರೈಲು ನಿಲ್ದಾಣ ನಿರ್ಮಾಣ ಮತ್ತು ಎಫ್‌ಎಂಸಿಜಿ (ತ್ವರಿತ ಬಿಕರಿ ಗ್ರಾಹಕ ಉತ್ಪನ್ನಗಳು) ಕ್ಲಸ್ಟರ್ ಆರಂಭಿಸಲು ಸಚಿವ ಎಂ.ಬಿ. ಪಾಟೀಲ ಸೇರಿದಂತೆ ಸಂಬಂಧಿಸಿದವರಿಗೆ ಮನವಿ ಸಲ್ಲಿಸಲಾಗುವುದು ಎಂದು ಕರ್ನಾಟಕ ವಾಣಿಜ್ಯೋದ್ಯಮ ಸಂಸ್ಥೆ ಅಧ್ಯಕ್ಷ ಜಿ.ಕೆ. ಆದಪ್ಪಗೌಡರ ಹೇಳಿದರು.

ಹುಬ್ಬಳ್ಳಿ:

ಎಪಿಎಂಸಿ ಆವರಣದಲ್ಲಿ 1000 ಆಸನಗಳ ಸಾಮರ್ಥ್ಯದ ಸಮ್ಮೇಳನ ಸಭಾಂಗಣ ನಿರ್ಮಾಣಕ್ಕೆ ₹ 5 ಕೋಟಿ ಅನುದಾನ ನೀಡುವಂತೆ ಸರ್ಕಾರಕ್ಕೆ ಮನವಿ ಮಾಡಲಾಗುವುದು ಎಂದು ಕರ್ನಾಟಕ ವಾಣಿಜ್ಯೋದ್ಯಮ ಸಂಸ್ಥೆ ಅಧ್ಯಕ್ಷ ಜಿ.ಕೆ. ಆದಪ್ಪಗೌಡರ ಹೇಳಿದರು. ಈ ಬಗ್ಗೆ ಒಂದು ವಾರದಲ್ಲಿ ಮುಖ್ಯಮಂತ್ರಿ ಭೇಟಿ ಮಾಡಿ ಮನವಿ ಸಲ್ಲಿಸಲಾಗುವುದು ಎಂದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಎಪಿಎಂಸಿ ಆವರಣದಲ್ಲಿ ಕೆಸಿಸಿಐನ 9 ಎಕರೆ ಜಾಗವಿದ್ದು, ಅದನ್ನು ಅಭಿವೃದ್ಧಿಪಡಿಸಲು ಕೋರಲಾಗುವುದು. ಅಲ್ಲದೆ, ಎಪಿಎಂಸಿ ಬಳಿ ರೈಲು ನಿಲ್ದಾಣ ನಿರ್ಮಾಣ ಮತ್ತು ಎಫ್‌ಎಂಸಿಜಿ (ತ್ವರಿತ ಬಿಕರಿ ಗ್ರಾಹಕ ಉತ್ಪನ್ನಗಳು) ಕ್ಲಸ್ಟರ್ ಆರಂಭಿಸಲು ಸಚಿವ ಎಂ.ಬಿ. ಪಾಟೀಲ ಸೇರಿದಂತೆ ಸಂಬಂಧಿಸಿದವರಿಗೆ ಮನವಿ ಸಲ್ಲಿಸಲಾಗುವುದು ಎಂದು ಹೇಳಿದರು.

ಸಂಸ್ಥೆಯು 2026 ಅನ್ನು ಹಸಿರು ಉಪಕ್ರಮ ಎಂದು ಘೋಷಿಸಿದ್ದು, ಆರ್ಥಿಕ ಬೆಳವಣಿಗೆಯ ಜತೆಗೆ ಪರಿಸರ ಸುಸ್ಥಿರತೆಗೆ 5 ಸಾವಿರ ಸಸಿ ನೆಡಲು ಉದ್ದೇಶಿಸಲಾಗಿದೆ. ಸಂಘ-ಸಂಸ್ಥೆಗಳೊಂದಿಗೆ ಸೇರಿ ಸಸಿಗಳ ನಿರ್ವಹಣೆ ಮಾಡಲಾಗುವುದು. ಸಂಸ್ಥೆಗೆ ಭೇಟಿ ನೀಡುವವರಿಗೆ ಹಸಿರು ಪ್ರಮಾಣಪತ್ರ ನೀಡಲಾಗುವುದು ಎಂದರು.

ಕೈಗಾರಿಕಾ, ವಾಣಿಜ್ಯ ಮತ್ತು ವ್ಯಾಪಾರ ಪ್ರದರ್ಶನ ಕಾರ್ಯಕ್ರಮ ಇನ್‌ಕಾಮೆಕ್ಸ್‌–2026 ಅನ್ನು ಏಪ್ರಿಲ್‌ 20ರಿಂದ 24ರ ವರೆಗೆ ಎಪಿಎಂಸಿಯ ಪ್ರದರ್ಶನ ಕೇಂದ್ರದಲ್ಲಿ ಹಮ್ಮಿಕೊಳ್ಳಲಾಗಿದೆ. ಕೇಂದ್ರ ಸಚಿವ ಪಿಯೂಷ್‌ ಗೋಯಲ್ ಅತಿಥಿಯಾಗಿ ಭಾಗವಹಿಸಲಿದ್ದಾರೆ ಎಂದ ಅವರು, ಕೈಗಾರಿಕಾ ಪ್ರದೇಶಗಳಲ್ಲಿ ಇ-ಸ್ವತ್ತು, ನೈರ್ಮಲ್ಯ, ನಿರ್ವಹಣೆ ಸಮಸ್ಯೆ ಪರಿಹರಿಸಲು ಕ್ರಮಕೈಗೊಳ್ಳಲಾಗುವುದು. ಸರಕು ಸಾಗಣೆ ದಕ್ಷತೆ ಹೆಚ್ಚಿಸಲು ಗದಗ, ಬಾದಾಮಿ, ಹಾವೇರಿ, ರಾಣಿಬೆನ್ನೂರು ಮತ್ತು ಹುಬ್ಬಳ್ಳಿಯ ಅಮರಗೋಳದ ಎಪಿಎಂಸಿ ಯಾರ್ಡ್‌ನಲ್ಲಿ ಗೂಡ್ಸ್‌ ಶೆಡ್‌ಗಳ ಆಧುನೀಕರಣಕ್ಕೆ ಒತ್ತಾಯಿಸಲಾಗುವುದು ಎಂದು ಹೇಳಿದರು.

ಸಂಸ್ಥೆಯ ಉಪಾಧ್ಯಕ್ಷ ಪ್ರವೀಣ ಅಗಡಿ ಮಾತನಾಡಿ, ಬಿಯಾಂಡ್ ಬೆಂಗಳೂರು ಸಾಕಾರಕ್ಕೆ ಇಲ್ಲಿ ಲ್ಯಾಂಡ್‌ ಬ್ಯಾಂಕ್ ಅಗತ್ಯ ಇದೆ. 3000 ಎಕರೆ ಜಾಗ ಈಗಾಗಲೇ ಬಳಕೆಗೆ ಲಭ್ಯವಿದ್ದು, ಇನ್ನೂ ಮೂರು ಸಾವಿರ ಎಕರೆಯನ್ನು ಅಭಿವೃದ್ಧಿ ಪಡಿಸಲಾಗುತ್ತಿದೆ ಎಂಬುದಾಗಿ ಕರ್ನಾಟಕ ಕೈಗಾರಿಕಾ ಪ್ರದೇಶಗಳ ಅಭಿವೃದ್ಧಿ ಮಂಡಳಿ (ಕೆಐಎಡಿಬಿ) ತಿಳಿಸಿದೆ ಎಂದರು.

ಸುದ್ದಿಗೋಷ್ಠಿಯಲ್ಲಿ ಸಂಸ್ಥೆಯ ಉಪಾಧ್ಯಕ್ಷ ಎಸ್‌.ಜಿ. ಕಮ್ಮಾರ, ವೀರಣ್ಣ ಕಲ್ಲೂರ, ಗೌರವ ಕಾರ್ಯದರ್ಶಿ ಉದಯ್‌ ರೇವಣಕರ, ಜಂಟಿ ಗೌರವ ಕಾರ್ಯದರ್ಶಿ ಪ್ರಕಾಶ್ ಶೃಂಗೇರಿ ಸೇರಿದಂತೆ ಹಲವರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಬಾಂಗ್ಲಾದಲ್ಲಿ ಹಿಂದೂಗಳ ನರಮೇಧ, ಹಿಂಸೆ ಸಲ್ಲದು
ಕಲಿಕೆಯ ವಯಸ್ಸು ಸಂಯಮದಿಂದ ಕೂಡಿರಲಿ: ಡಾ. ಬಸವ ಮರುಳಸಿದ್ಧ ಸ್ವಾಮೀಜಿ