ಕನ್ನಡಪ್ರಭ ವಾರ್ತೆ ರಾಮನಗರ
ನಗರದಲ್ಲಿ ಕಾರ್ಮಿಕ ಇಲಾಖೆ ಹಾಗೂ ಅದ್ವಿತ್ ಕರ್ನಾಟಕ ರಾಜ್ಯ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಒಕ್ಕೂಟ ಆಯೋಜಿಸಿದ್ದ ಕಟ್ಟಡ ಕಾರ್ಮಿಕರ ಆರೋಗ್ಯ ತಪಾಸಣಾ ಶಿಬಿರದಲ್ಲಿ ಅವರು ಮಾತನಾಡಿದರು.
ಕಟ್ಟಡ ಕಾರ್ಮಿಕರಿಗೆ ಸರ್ಕಾರದ ಸವಲತ್ತುಗಳು ಸರಿಯಾಗಿ ತಲುಪುತ್ತಿಲ್ಲ. ಕಾರ್ಮಿಕರ ಮಕ್ಕಳಿಗೆ ಶೈಕ್ಷಣಿಕ ಸಹಾಯ ಧನ, ಹಿರಿಯರಿಗೆ ಪಿಂಚಣಿ ಸೌಲಭ್ಯ, ಫಲಾನುಭವಿ ಹಾಗೂ ಅವಲಂಬಿತರಿಗೆ ವೈದ್ಯಕೀಯ ಸಹಾಯಧನ, ಫಲಾನುಭವಿ ಅಥವಾ ಅವರ ಇಬ್ಬರು ಮಕ್ಕಳ ಮದುವೆಗೆ ನೀಡುವ ಸಹಾಯಧನ ಸೇರಿದಂತೆ ಯಾವ ಸೌಲಭ್ಯಗಳು ಸಮರ್ಪಕವಾಗಿ ಅನುಷ್ಠಾನವಾಗುತ್ತಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು.ಫಲಾನುಭವಿ ಕಟ್ಟಡ ಕಾರ್ಮಿಕ ಅಥವಾ ಅವರ ಇಬ್ಬರು ಮಕ್ಕಳ ಮದುವೆಗೆ ನೀಡುವ ಧನ ಸಹಾಯವನ್ನು 60 ಸಾವಿರದಿಂದ 1.20 ಲಕ್ಷ , ಸ್ವಾಭಾವಿಕವಾಗಿ ಮರಣ ಹೊಂದಿದರೆ 1.50 ಲಕ್ಷ, ಅಪಘಾತದಲ್ಲಿ ಮರಣ ಹೊಂದಿದರೆ 8 ಲಕ್ಷ ರುಪಾಯಿ ನೀಡಲಾಗುತ್ತಿದೆ. ಈ ರೀತಿಯ ಆರು ಸಾವಿರ ಅರ್ಜಿ ಬಾಕಿ ಉಳಿದಿದ್ದು, ಇನ್ನೂ ಪರಿಶೀಲನೆ ಹಂತದಲ್ಲಿಯೇ ಇದೆ ಎಂದರು.
ಶಿಬಿರದಲ್ಲಿ ಡಾ.ರೋಚನಾ ನೇತೃತ್ವದ ತಂಡ ಕಟ್ಟಡ ಕಾರ್ಮಿಕರ ಆರೋಗ್ಯ ತಪಾಸಣೆ ನಡೆಸಿ ಅಗತ್ಯ ಔಷಧಗಳನ್ನು ವಿತರಣೆ ಮಾಡಿತು. ಒಕ್ಕೂಟದ ರಾಜ್ಯ ಸಂಘಟನಾ ಕಾರ್ಯದರ್ಶಿ ಡಿ.ದರ್ಶನ್, ಜಿಲ್ಲಾಧ್ಯಕ್ಷ ಯೋಹಿತ್ ಗೌಡ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಲಕ್ಕಪ್ಪ, ಜಿಲ್ಲಾ ಉಪಾಧ್ಯಕ್ಷ ಕುಮಾರ, ತಾಲೂಕು ಅಧ್ಯಕ್ಷ ಆನಂದ್, ತಾಲೂಕು ಅಧ್ಯಕ್ಷ ಲೋಕೇಶ್ , ಮಾಗಡಿ ತಾಲೂಕು ಅಧ್ಯಕ್ಷ ಲೋಕೇಶ್ ಗೌಡ ಮತ್ತಿತರರು ಉಪಸ್ಥಿತರಿದ್ದರು.
ನೋಂದಣಿ ಪೂರ್ವದ 12 ತಿಂಗಳಲ್ಲಿ ಕಟ್ಟಡ ಮತ್ತು ಇತರೆ ನಿರ್ಮಾಣ ಕಾಮಗಾರಿಗಳಲ್ಲಿ ಕನಿಷ್ಠ 90 ದಿನಗಳು ಕೆಲಸ ನಿರ್ವಹಿಸಿರಬೇಕು. ಕಟ್ಟಡ ಕಾರ್ಮಿಕರಲ್ಲದವರು ನಕಲಿ ದಾಖಲಾತಿ ಸೃಷ್ಟಿಸಿ ಮಂಡಳಿ ನೀಡುವ ಕಾರ್ಮಿಕರ ಗುರುತಿನ ಚೀಟಿ ಪಡೆದು ಸೌಲಭ್ಯ ಪಡೆಯುವುದು ಶಿಕ್ಷಾರ್ಹ ಅಪರಾಧ, ಅಂತಹವರ ವಿರುದ್ಧ ಕಾರ್ಮಿಕ ಇಲಾಖೆ ಕಾನೂನು ಕ್ರಮ ಜರುಗಿಸುತ್ತದೆ.
- ಮದನ್ ಗೌಡ, ರಾಜ್ಯಾಧ್ಯಕ್ಷರು,ಅದ್ವಿತ್ ಕರ್ನಾಟಕ ರಾಜ್ಯ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಒಕ್ಕೂಟ