ಘಟಪ್ರಭ ನದಿಗೆ ನೀರು ಹರಿಸುವಂತೆ ಮನವಿ

KannadaprabhaNewsNetwork |  
Published : Dec 18, 2023, 02:00 AM IST
ಪೋಟೋ ಡಿ.17ಎಂಡಿಎಲ್ 1. ಮುಧೋಳ ಘಟಪ್ರಭ ನದಿಗೆ ನೀರು ಹರಿಸುವಂತೆ ಆಗ್ರಹಿಸಿ  ಮನವಿ ಪತ್ರ ಸಲ್ಲಿಸಲಾಯಿತು. | Kannada Prabha

ಸಾರಾಂಶ

ಹಳ್ಳಿಗಳಲ್ಲಿ ಕುಡಿಯುವ ನೀರಿನ ಸಮಸ್ಯೆ

ಕನ್ನಡ ಪ್ರಭ ವಾರ್ತೆ ಮುಧೋಳ

ಘಟಪ್ರಭ ನದಿಗೆ ಈ ಕೂಡಲೇ ಹಿಡಕಲ್‌ ಜಲಾಶಯದಿಂದ ನೀರು ಬಿಡಿಸಬೇಕೆಂದು ಕಬ್ಬು ಬೆಳೆಗಾರರು ಹಾಗೂ ರೈತರು ಜಿಲ್ಲಾ ಹಾಗೂ ತಾಲೂಕು ಆಡಳಿತ ಒತ್ತಾಯಿಸಿದರು.

ನಗರದಲ್ಲಿ ತಹಸೀಲ್ದಾರ್‌ ವಿನೋದ ಹತ್ತಳ್ಳಿ ಹಾಗೂ ನೀರಾವರಿ ಇಲಾಖೆಯ (ಜಿಎಲ್‌ಬಿಸಿ) ಎಇಇ ಹೆಚ್.ಆರ್. ಮಾಹರಡ್ಡಿ ಅವರಿಗೆ ಮನವಿ ಸಲ್ಲಿಸುವ ಮೂಲಕ ಸರ್ಕಾರ ಒತ್ತಾಯಿಸಿದ್ದಾರೆ.

ಕಬ್ಬು ಬೆಳೆಗಾರ ಸಂಘದ ಜಿಲ್ಲಾಧ್ಯಕ್ಷ ನಾಗೇಶ ಸೋರಗಾಂವಿ ಹಾಗೂ ತಾಲೂಕಾಧ್ಯಕ್ಷ ದುಂಡಪ್ಪ ಯರಗಟ್ಟಿ ಅವರು ಮಾತನಾಡಿ, ಘಟಪ್ರಭ ನದಿಯ ನೀರು ಸಂಪೂರ್ಣ ಬರಿದಾಗಿದೆ. ಇದರಿಂದ 30ಕ್ಕೂ ಹೆಚ್ಚು ಹಳ್ಳಿಗಳಲ್ಲಿ ಜನ ಜಾನುವಾರುಗಳಿಗೆ ಕುಡಿಯುವ ನೀರಿನ ಸಮಸ್ಯೆ ಆಗಲಿದೆ. ಕಾರಣ ಈ ಕೂಡಲೇ ನದಿಗೆ ನೀರು ಹರಿಸಬೇಕೆಂದು ಒತ್ತಾಯಿಸಿದರು.

ರೈತ ನಾಯಕರಾದ ಮಹೇಶಗೌಡ ಪಾಟೀಲ, ಮುತ್ತು ಹೊಸಕೋಟಿ, ಸುರೇಶ ಅಕ್ಕಿಮರಡಿ, ಮುದ್ದೇಶ ಗಾಯಕವಾಡ ಹಾಗೂ ಕಬ್ಬು ಬೆಳೆಗಾರರು, ರೈತರು ಮುಖಂಡರು ಉಪಸ್ಥಿತರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಒಲವಿನ ಊಟ ಬಡಿಸಲು ಸಿದ್ಧವಾದ ಅಕ್ಕ ಕೆಫೆ
ಚನ್ನಮ್ಮ ಮೂರ್ತಿ ಉದ್ಘಾಟನಾ ಸಮಾರಂಭಕ್ಕೆ ಬಹಿಷ್ಕಾರ