ಚಿಂಚೋಳಿ: ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಸ್ನಾತಕೋತ್ತರ ಕೇಂದ್ರ ಮಂಜೂರಿಗೊಳಿಸಿ ಗ್ರಾಮೀಣ ಪ್ರದೇಶದ ಬಡವಿದ್ಯಾರ್ಥಿಗಳಿಗೆ ಅನುಕೂಲ ಮಾಡಿಕೊಡಬೇಕೆಂದು ಒತ್ತಾಯಿಸಿ ಹಳೆಯ ವಿದ್ಯಾರ್ಥಿಗಳು ಶಾಸಕ ಡಾ. ಅವಿನಾಶ ಜಾಧವ್ಗೆ ಮನವಿ ಪತ್ರ ಸಲ್ಲಿಸಿದರು.ಚಿಂಚೋಳಿ ತಾಲೂಕಿನಲ್ಲಿ ಎರಡು ಸರ್ಕಾರಿ ಪದವಿ ಮಹಾವಿದ್ಯಾಲಯಗಳು ಮತ್ತು ಖಾಸಗಿ ಪದವಿ ಮಹಾವಿದ್ಯಾಲಯವಿದೆ. ಪದವಿಯಲ್ಲಿ ಒಟ್ಟು ೧೫೦೦ಕ್ಕಿಂತ ಹೆಚ್ಚು ವಿದ್ಯಾರ್ಥಿಗಳು ಅಭ್ಯಸಿಸುತ್ತಿದ್ದಾರೆ. ಪಟ್ಟಣದಲ್ಲಿ ಸ್ನಾತಕೋತ್ತರ ಕೇಂದ್ರ ಮಂಜೂರಿಗೊಳಿಸಿ ಪ್ರಾರಂಭಿಸಿದರೆ ಬಹಳ ಅನುಕೂಲವಾಗಿದೆ ಎಂದು ವಿದ್ಯಾರ್ಥಿಗಳು ಶಾಸಕರಿಗೆ ಅಗ್ರಹಿಸಿದರು.
ಶಾಸಕ ಡಾ.ಅವಿನಾಶ ಜಾಧವ್ ಮನವಿ ಪತ್ರ ಸ್ವೀಕರಿಸಿ ಮಾತನಾಡಿ, ಪಟ್ಟಣದಲ್ಲಿ ಸ್ನಾತಕೋತ್ತರ ಕೇಂದ್ರ ಪ್ರಾರಂಭಿಸುವಂತೆ ಸರ್ಕಾರದ ಗಮನಕ್ಕೆ ತರಲಾಗಿದೆ. ಈಗಾಗಲೇ ಗುಲಬರ್ಗಾ ವಿಶ್ವವಿದ್ಯಾಲಯ ಅಧ್ಯಯನ ತಂಡ ಸಮೀಕ್ಷೆ ನಡೆಸಿದೆ ಸ್ನಾತಕೋತ್ತರ ಕೇಂದ್ರ ಪ್ರಾರಂಭ ಅಗಲಿದೆ ಎಂದು ವಿಶ್ವಾಸ ನೀಡಿದರು. ಅಶೋಕಬಾಬು, ಶ್ರೀನಿವಾಸರೆಡ್ಡಿ, ಹುಲಿಗೆಪ್ಪ ಕಮಲಾಕರ ಇನ್ನಿತರಿದ್ದರು.