ಕನ್ನಡಪ್ರಭ ವಾರ್ತೆ ಮಂಡ್ಯ
ಸೋಮವಾರ ನಗರದ ಮೈಷುಗರ್ ಕಾರ್ಖಾನೆ ಬಾಯ್ಲರ್ಗೆ ಪೂಜೆ ಸಲ್ಲಿಸಿ ಅಗ್ನಿಸ್ಪರ್ಶ ಮಾಡಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿ, ಈ ಸಾಲಿನಲ್ಲಿ ೪ ಲಕ್ಷದಿಂದ ೪.೫೦ ಲಕ್ಷ ಟನ್ ಕಬ್ಬು ಅರೆಯುವ ಗುರಿ ಹೊಂದಲಾಗಿದೆ. ರೈತರಿಗೆ ಸಕಾಲದಲ್ಲಿ ಕಬ್ಬಿನ ಹಣ ಪಾವತಿ ಮಾಡಲಾಗುವುದು. ಸರ್ಕಾರವೂ ಕಾರ್ಖಾನೆ ಮುನ್ನಡೆಯುವುದಕ್ಕೆ ಪೂರಕವಾಗಿ ೨೫ ಕೋಟಿ ರು. ಹಣ ಬಿಡುಗಡೆ ಮಾಡುವ ವಿಶ್ವಾಸ ವ್ಯಕ್ತಪಡಿಸಿದರು.
ಮೈಷುಗರ್ ಕಾರ್ಖಾನೆಯನ್ನು ಲಾಭ-ನಷ್ಟದ ಲೆಕ್ಕ ಮಾಡಿಕೊಂಡು ನಡೆಸಲು ಸಾಧ್ಯವಿಲ್ಲ. ಕಾರ್ಖಾನೆ ಇತಿಹಾಸ, ಅದರ ಹಿಂದಿರುವ ಜನರ ಭಾವನೆ, ರೈತರ ಏಳಿಗೆಯನ್ನು ಗಮನದಲ್ಲಿಟ್ಟುಕೊಂಡು ಕಾರ್ಖಾನೆಯನ್ನು ಮುನ್ನಡೆಸಲಾಗುತ್ತಿದೆ. ಏಕಾಏಕಿ ಕಂಪನಿ ಲಾಭ ತರಲು ಸಾಧ್ಯವಿಲ್ಲ. ಕಾರ್ಖಾನೆ ಲಾಭದಾಯಕವಾಗಿ ಮುನ್ನಡೆಯುವಂತೆ ಮಾಡಲು ವಾಣಿಜ್ಯ ಚಟುವಟಿಕೆಗಳನ್ನೂ ಆರಂಭಿಸಲಾಗುವುದು. ಸಹ ವಿದ್ಯುತ್ ಘಟಕ, ಮೊಲಾಸಸ್ ಉತ್ಪಾದನೆಗ ಪ್ರಾಮುಖ್ಯತೆ ನೀಡಲಾಗುತ್ತಿದೆ. ಮುಂದಿನ ದಿನಗಳಲ್ಲಿ ಡಿಸ್ಟಿಲರಿ, ಎಥೆನಾಲ್ ಘಟಕಗಳನ್ನು ತೆರೆದು ಕಂಪನಿ ಸ್ವಾವಲಂಬಿಯಾಗಿ ಮುನ್ನಡೆಯುವಂತೆ ಮಾಡಲಾಗುವುದು ಎಂದು ವಿಶ್ವಾಸದಿಂದ ಹೇಳಿದರು.ಮೈಷುಗರ್ ಅಧ್ಯಕ್ಷ ಸಿ.ಡಿ.ಗಂಗಾಧರ್, ಜಿಲ್ಲಾಧಿಕಾರಿ ಡಾ.ಕುಮಾರ, ಮೈಷುಗರ್ ವ್ಯವಸ್ಥಾಪಕ ನಿರ್ದೇಶಕ ಮಂಗಲ್ದಾಸ್ ಇತರರಿದ್ದರು.
ಕನ್ನಡಪ್ರಭ ವಾರ್ತೆ ಮದ್ದೂರು
ತಿರುಪತಿ ತಿರುಮಲ ದೇವಸ್ಥಾನಕ್ಕೆ 10 ಲಕ್ಷ ಕೆ.ಜಿ. ತುಪ್ಪವನ್ನು ಸರಬರಾಜು ಮಾಡಲು ಟಿಟಿಡಿ ಅವರು ಕರ್ನಾಟಕ ಹಾಲು ಮಹಾಮಂಡಳಿಗೆ ಬೇಡಿಕೆ ನೀಡಿದ್ದಾರೆ. ಮೊದಲ ಹಂತದಲ್ಲಿ 2,50,000 ಕೆಜಿಗಳಷ್ಟು ತುಪ್ಪವನ್ನು ಸರಬರಾಜು ಮಾಡಲು ಮಂಡ್ಯ ಹಾಲು ಒಕ್ಕೂಟಕ್ಕೆ ಹಂಚಿಕೆ ಮಾಡಿದ್ದಾರೆ. ಅದರಂತೆ ತಿರುಪತಿ ತಿರುಮಲ ದೇವಸ್ಥಾನಕ್ಕೆ ಮೊದಲ ಹಂತದಲ್ಲಿ 13 ಟನ್ ತುಪ್ಪವನ್ನು ರವಾನಿಸಲಾಯಿತು.