ಮೀನು ಬೋಟುಗಳಿಗೆ ಡೀಸೆಲ್ ಪೂರೈಕೆಗೆ ಕೇಂದ್ರ ಸಚಿವರಿಗೆ ಮನವಿ

KannadaprabhaNewsNetwork |  
Published : Mar 27, 2026, 02:30 AM IST
ಉಡುಪಿ ಮತ್ತು ಮಂಗಳೂರು ಸಂಸದರು ಮತ್ತು ಉಡುಪಿ ಶಾಸಕರು ಕೇಂದ್ರ ಸಚಿವರಿಗೆ ಮನವಿ ಸಲ್ಲಿಸಿದರು | Kannada Prabha

ಸಾರಾಂಶ

ಮಧ್ಯಪ್ರಾಚ್ಯ ಯುದ್ಧದಿಂದಾಗಿ ಕರಾವಳಿಯ ಮೀನುಗಾರಿಕಾ ಬೋಟುಗಳಿಗೆ ಡಿಸೇಲ್ ಕೊರತೆಯಾಗಿದ್ದು, ಮೀನುಗಾರಿಕೆಯೇ ಸ್ಥಗಿತಗೊಳ್ಳುವ ಪರಿಸ್ಥಿತಿ ನಿರ್ಮಾಣವಾಗಿದೆ.

ಉಡುಪಿ: ಮಧ್ಯಪ್ರಾಚ್ಯ ಯುದ್ಧದಿಂದಾಗಿ ಕರಾವಳಿಯ ಮೀನುಗಾರಿಕಾ ಬೋಟುಗಳಿಗೆ ಡಿಸೇಲ್ ಕೊರತೆಯಾಗಿದ್ದು, ಮೀನುಗಾರಿಕೆಯೇ ಸ್ಥಗಿತಗೊಳ್ಳುವ ಪರಿಸ್ಥಿತಿ ನಿರ್ಮಾಣವಾಗಿದೆ. ಕೇಂದ್ರ ಸರ್ಕಾರ ಮೀನುಗಾರಿಕಾ ಬೋಟುಗಳಿಗೆ ಅಗತ್ಯ ಡಿಸೇಲ್ ಪೂರೈಕೆ ಮಾಡುವಂತೆ ಸಂಸದ ಕೋಟ ಶ್ರೀನಿವಾಸ ಪೂಜಾರಿ, ಕ್ಯಾಪ್ಟನ್ ಬ್ರಿಜೇಶ್ ಚೌಟ ಹಾಗೂ ಉಡುಪಿ ಶಾಸಕ ಯಶ್ ಪಾಲ್ ಸುವರ್ಣ ಅವರು ಕೇಂದ್ರ ಪೆಟ್ರೋಲಿಯಂ ಸಚಿವ ಹರ್ದೀಪ್ ಸಿಂಗ್ ಪುರಿ ಹಾಗೂ ಮೀನುಗಾರಿಕೆ ಸಚಿವ ರಾಜೀವ್ ರಂಜನ್ ಸಿಂಗ್ ಅವರನ್ನು ದೆಹಲಿಯಲ್ಲಿ ಭೇಟಿಯಾಗಿ ಮನವಿ ಮಾಡಿದರು.

ಮೀನುಗಾರಿಕಾ ಬೋಟುಗಳಿಗೆ ಡೀಸೆಲ್ ಕೊರತೆಯಿಂದ ಬಹುತೇಕ ಮೀನುಗಾರಿಕೆ ಚಟುವಟಿಕೆ ಸ್ತಬ್ಧಗೊಂಡಿದೆ. ಮೀನುಗಾರಿಕಾ ಚಟುವಟಿಕೆ ಸ್ತಬ್ಧಗೊಂಡಲ್ಲಿ ಮೀನುಗಾರಿಕೆಯನ್ನೇ ಪ್ರತ್ಯಕ್ಷ ಮತ್ತು ಪರೋಕ್ಷವಾಗಿ ಅವಲಂಬಿಸಿರುವ ಲಕ್ಷಾಂತರ ಮಂದಿಯ ಜನಜೀವನಕ್ಕೆ ಸಮಸ್ಯೆಯಾಗಲಿದೆ ಎಂದು ಸಂಸದರು ಸಚಿವರಿಗೆ ಮನವರಿಕೆ ಮಾಡಿದರು.

ಮನವಿಗೆ ಪೂರಕವಾಗಿ ಸ್ಪಂದಿಸಿದ ಇಬ್ಬರು ಕೇಂದ್ರ ಸಚಿವರು ದೇಶದ ಡೀಸೆಲ್ ದಾಸ್ತಾನು ಪ್ರಮಾಣಕ್ಕೆ ಅನುಗುಣವಾಗಿ ಮೀನುಗಾರಿಕಾ ವಲಯಕ್ಕೆ ಅಗತ್ಯ ಪ್ರಮಾಣದ ನಿರಂತರ ಡಿಸೇಲ್ ಪೂರೈಕೆಗೆ ವಿಶೇಷ ಆದ್ಯತೆ ನೀಡಲು ಪ್ರಯತ್ನಿಸುವುದಾಗಿ ತಿಳಿಸಿದರು. ಈ ಸಂದರ್ಭದಲ್ಲಿ ಮಲ್ಪೆ ಯಾರ್ಡ್ ಸಹಕಾರಿ ಸಂಘದ ಉಪಾಧ್ಯಕ್ಷರಾದ ಶಿವಪ್ರಸಾದ್ ಕೋಟ್ಯಾನ್ ಉಪಸ್ಥಿತರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಸಣ್ಣ ಭಾಷೆಗಳನ್ನು ಉಳಿಸಿ, ಬೆಳೆಸಿ: ಅಶೋಕ ಸಂಗಪ್ಪ
ಹೆಣ್ಣುಮಕ್ಕಳ ಶಿಕ್ಷಣಕ್ಕೆ ಹೆಚ್ಚಿನ ಪ್ರಾಮುಖ್ಯ ನೀಡಿ: ವೀಣಾ ಅಠವಾಲೆ