ಶಿರಸಿ: ಅತಿಕ್ರಮಣ ಜಾಗದಲ್ಲಿರುವ ಮನೆಗಳ ನಂಬರ್ಗಳನ್ನು ರದ್ದುಗೊಳಿಸುವ ರಾಜ್ಯ ಸರ್ಕಾರದ ನಿರ್ಧಾರವನ್ನು ಕೂಡಲೇ ಹಿಂಪಡೆಯಬೇಕೆಂದು ಆಗ್ರಹಿಸಿ ಶಾಸಕ ಭೀಮಣ್ಣ ಟಿ. ನಾಯ್ಕ್ ಅವರು ಗುರುವಾರ ಪಂಚಾಯತ್ ರಾಜ್ ಮತ್ತು ಗ್ರಾಮೀಣಾಭಿವೃದ್ಧಿ ಸಚಿವ ಈಶ್ವರ ಖಂಡ್ರೆ ಅವರನ್ನು ಬೆಂಗಳೂರಿನಲ್ಲಿ ಭೇಟಿ ಮಾಡಿ ಮನವಿ ಸಲ್ಲಿಸಿದರು.ಗ್ರಾಮೀಣ ಭಾಗದ ಬಡ ಹಾಗೂ ಸಾಮಾನ್ಯ ಜನರು ಸುಮಾರು ವರ್ಷಗಳಿಂದ ವಾಸಿಸುತ್ತಿರುವ ಮನೆಗಳಿಗೆ ನಂಬರ್ ರದ್ದು ಮಾಡುವುದರಿಂದ ಸಾರ್ವಜನಿಕರಿಗೆ ತೀವ್ರ ತೊಂದರೆಯಾಗುತ್ತಿದ್ದು, ಮೂಲ ಸೌಕರ್ಯಗಳಿಂದ ವಂಚಿತರಾಗುವ ಆತಂಕ ಎದುರಾಗಿದೆ.
ಈ ಸಂದರ್ಭದಲ್ಲಿ ಯಲ್ಲಾಪುರ ಮುಂಡಗೋಡ ಕ್ಷೇತ್ರದ ಶಾಸಕ ಶಿವರಾಮ್ ಹೆಬ್ಬಾರ್ ಇದ್ದರು.ಡಿಸಿಸಿ ಅಧ್ಯಕ್ಷರಾಗಿ ಜಿ.ಟಿ. ನಾಯ್ಕ ನೇಮಕ
ಕಾರವಾರ: ಉತ್ತರಕನ್ನಡ ಜಿಲ್ಲಾ ಕಾಂಗ್ರೆಸ್ ಸಮಿತಿಯ(ಡಿಸಿಸಿ) ಅಧ್ಯಕ್ಷರಾಗಿ ನ್ಯಾಯವಾದಿ ಜಿ.ಟಿ. ನಾಯ್ಕ ಅವರನ್ನು ನೇಮಕ ಮಾಡಲಾಗಿದೆ. ಪಕ್ಷದ ಸಂಘಟನೆಯನ್ನು ಜಿಲ್ಲೆಯಲ್ಲಿ ಮತ್ತಷ್ಟು ಬಲಪಡಿಸುವ ನಿಟ್ಟಿನಲ್ಲಿ ಈ ನೇಮಕ ಮಹತ್ವ ಪಡೆದಿದೆ. ಜಿಲ್ಲೆಯಲ್ಲಿ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರನ್ನು ಒಗ್ಗೂಡಿಸಿ ಸಂಘಟನೆಯನ್ನು ಚುರುಕುಗೊಳಿಸುವ ಹೊಣೆಗಾರಿಕೆ ಜಿ.ಟಿ. ನಾಯ್ಕ ಅವರ ಮೇಲಿದೆ. ಮುಂಬರುವ ಸ್ಥಳೀಯ ಸಂಸ್ಥೆಗಳ ಚುನಾವಣೆ ಸೇರಿದಂತೆ ಪಕ್ಷದ ಸಂಘಟನಾ ಚಟುವಟಿಕೆಗಳನ್ನು ಸಮರ್ಥವಾಗಿ ಮುನ್ನಡೆಸುವ ಸವಾಲು ಅವರ ಮುಂದಿದೆ. ನೇಮಕಕ್ಕೆ ಜಿಲ್ಲೆಯ ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತರು ಸ್ವಾಗತ ವ್ಯಕ್ತಪಡಿಸಿದ್ದು, ನೂತನ ಜಿಲ್ಲಾಧ್ಯಕ್ಷರಿಗೆ ಅಭಿನಂದನೆ ಸಲ್ಲಿಸಿದ್ದಾರೆ.