ಅಕ್ರಮ ಗೋ ಸಾಗಾಣಿಕೆ ವಿರುದ್ಧ ಕಿಡಿ । ಕ್ರಮ ಕೈಗೊಳ್ಳದಿದ್ದರೆ ನಾವು ನೇರ ಕಾರ್ಯಾಚರಣೆ ನಡೆಸುವ ಎಚ್ಚರಿಕೆ
ನಗರದ ಮಂಗಳವಾರದ ಸಂತೆಯಲ್ಲಿ ಅಕ್ರಮವಾಗಿ ೧೯ಕ್ಕೂ ಹೆಚ್ಚು ಗೋವುಗಳನ್ನು ಬೇರೆಡೆಗೆ ಸಾಗಾಣೆ ಮಾಡಲು ಮುಂದಾಗಿದ್ದವರನ್ನು ವಿಶ್ವ ಹಿಂದೂ ಪರಿಷತ್ ಮತ್ತು ಭಜರಂಗದಳದ ಕಾರ್ಯಕರ್ತರು ನಗರ ಠಾಣೆ ಪೊಲೀಸರಿಗೆ ಒಪ್ಪಿಸಿದ್ದಾರೆ. ಇದೇ ವೇಳೆ ವಿಶ್ವ ಹಿಂದೂ ಪರಿಷತ್ತು ಬಜರಂಗದಳ ಪ್ರಾಂತ ಗೋ ರಕ್ಷಾ ಸಹ ಪ್ರಮುಖ್ ಶರತ್ ರಾಜ್ಯದಲ್ಲಿ ದಿನೇ ದಿನೇ ಹೆಚ್ಚಾಗುತ್ತಿರುವ ಅಕ್ರಮ ಗೋ ಸಾಗಾಣಿಕೆ, ಗೋಹತ್ಯೆ ಹಾಗೂ ಕಾನೂನುಬಾಹಿರ ಕಸಾಯಿಖಾನೆಗಳ ವಿರುದ್ಧ ವಿಶ್ವ ಹಿಂದೂ ಪರಿಷತ್ ಮತ್ತು ಭಜರಂಗದಳ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ಅಧಿಕಾರಿಗಳು ಸೂಕ್ತ ಕ್ರಮ ಕೈಗೊಳ್ಳದಿದ್ದರೆ ಸಂಘಟನೆಗಳೇ ನೇರ ಕಾರ್ಯಾಚರಣೆಗೆ ಇಳಿಯಲಿವೆ ಎಂದು ಎಚ್ಚರಿಕೆ ನೀಡಿದರು.
ಗೋ ರಕ್ಷಣೆಗಾಗಿ ಸರ್ಕಾರ ಕಟ್ಟುನಿಟ್ಟಿನ ಕಾನೂನು ಜಾರಿಗೊಳಿಸಿದ್ದರೂ, ಕೆಲವು ಅಕ್ರಮ ಜಾಲಗಳು ಪೊಲೀಸರ ಕಣ್ತಪ್ಪಿಸಿ ಗೋವುಗಳನ್ನು ಸಾಗಿಸುತ್ತಿವೆ. ಇದರಿಂದ ಗೋ ರಕ್ಷಣೆ ಕೇವಲ ಕಾಗದದ ಮೇಲಿನ ಕಾನೂನಾಗಿ ಉಳಿದಿದೆ ಎಂದು ಬೇಸರ ವ್ಯಕ್ತಪಡಿಸಿದರು.ಈ ಸಂಬಂಧ ಈಗಾಗಲೇ ವಿಶ್ವ ಹಿಂದೂ ಪರಿಷತ್ ವತಿಯಿಂದ ಜಿಲ್ಲಾಧಿಕಾರಿಗಳು, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ಹಾಗೂ ಇತರೆ ಅಧಿಕಾರಿಗಳಿಗೆ ಮನವಿ ಸಲ್ಲಿಸಲಾಗಿದೆ. ಬಕ್ರೀದ್ ಹಬ್ಬದ ಹಿನ್ನೆಲೆಯಲ್ಲಿ ಅಕ್ರಮ ಗೋ ಸಾಗಾಣಿಕೆ ಹೆಚ್ಚಾಗುವ ಸಾಧ್ಯತೆ ಇದೆ ಎಂದು ಮುಂಚಿತವಾಗಿ ಎಚ್ಚರಿಕೆ ನೀಡಿದ್ದರೂ, ಅಧಿಕಾರಿಗಳಿಂದ ಯಾವುದೇ ಪರಿಣಾಮಕಾರಿ ಕ್ರಮ ಕೈಗೊಳ್ಳಲಾಗಿಲ್ಲ ಎಂದು ದೂರಿದರು.
ಪೊಲೀಸರ ವಿರುದ್ಧ ಅಸಮಾಧಾನ: