ಕನ್ನಡಪ್ರಭ ವಾರ್ತೆ ಭಟ್ಕಳ
ಹಾವೇರಿ ಜಿಲ್ಲೆಯ ಹಂಸನಬಾವಿ ಗ್ರಾಮದ ಸಿದ್ಧಾರ್ಥ (24), ದೀಕ್ಷಿತ್ (20) ಹಾಗೂ ಸಂತೋಷ (24) ಲೈಫ್ಗಾರ್ಡ್ಗಳಿಂದ ರಕ್ಷಣೆಗೊಳಗಾದ ಪ್ರವಾಸಿಗರು. ಹಾವೇರಿ ಜಿಲ್ಲೆಯಿಂದ ಆಗಮಿಸಿದ್ದ 5 ಮಂದಿ ಯುವಕರ ತಂಡ ಧರ್ಮಸ್ಥಳ ಪ್ರಯಾಣ ಮುಗಿಸಿ ಶುಕ್ರವಾರ ಮುರ್ಡೇಶ್ವರಕ್ಕೆ ಆಗಮಿಸಿದ್ದರು. ಮುರ್ಡೇಶ್ವರ ಸಮುದ್ರದಲ್ಲಿ ಈಜಲು ಇಳಿದ ಸಂದರ್ಭದಲ್ಲಿ ಅಲೆಗಳ ಆರ್ಭಟಕ್ಕೆ ಸಿಲುಕಿ ಕೊಚ್ಚಿಕೊಂಡು ಹೋದರು. ಆ ಸಂದರ್ಭದಲ್ಲಿ ಲೈಫ್ಗಾರ್ಡ್ ಸಿಬ್ಬಂದಿ ಚಂದ್ರಶೇಖರ ದೇವಾಡಿಗ, ಜಯರಾಮ ಹಾಗೂ ಪಾಂಡು ರಕ್ಷಣೆ ಮಾಡಿ ತೀರಕ್ಕೆ ತರುವಲ್ಲಿ ಯಶಸ್ವಿಯಾಗಿದ್ದಾರೆ.