ಮುರ್ಡೇಶ್ವರ ಸಮುದ್ರದಲ್ಲಿ ಕೊಚ್ಚಿ ಹೋಗುತ್ತಿದ್ದ ಮೂವರ ರಕ್ಷಣೆ

KannadaprabhaNewsNetwork |  
Published : Oct 14, 2023, 01:01 AM IST
13ಬಿಕೆಲ್ 1: ಮುರುಡೇಶ್ವರ ಸಮುದ್ರದಲ್ಲಿ ಕೊಚ್ಚಿ ಹೋಗುತ್ತಿದ್ದ ಮೂವರು ಪ್ರವಾಸಿಗರನ್ನು ರಕ್ಷಿಸಿದ ಲೈಪ್ ಗಾರ್ಡ ಸಿಬ್ಬಂದಿಗಳು  | Kannada Prabha

ಸಾರಾಂಶ

ಮುರ್ಡೇಶ್ವರ ಸಮುದ್ರದಲ್ಲಿ ಈಜಲು ತೆರಳಿ ಅಲೆಯ ರಭಸಕ್ಕೆ ಕೊಚ್ಚಿಕೊಂಡು ಹೋಗುತ್ತಿದ್ದ ಮೂವರು ಪ್ರವಾಸಿಗರನ್ನು ಶುಕ್ರವಾರ ಲೈಫ್‌ಗಾರ್ಡ್‌ ಸಿಬ್ಬಂದಿ ರಕ್ಷಿಸಿದ್ದಾರೆ.

ಕನ್ನಡಪ್ರಭ ವಾರ್ತೆ ಭಟ್ಕಳ

ಮುರ್ಡೇಶ್ವರ ಸಮುದ್ರದಲ್ಲಿ ಈಜಲು ತೆರಳಿ ಅಲೆಯ ರಭಸಕ್ಕೆ ಕೊಚ್ಚಿಕೊಂಡು ಹೋಗುತ್ತಿದ್ದ ಮೂವರು ಪ್ರವಾಸಿಗರನ್ನು ಶುಕ್ರವಾರ ಲೈಫ್‌ಗಾರ್ಡ್‌ ಸಿಬ್ಬಂದಿ ರಕ್ಷಿಸಿದ್ದಾರೆ.

ಹಾವೇರಿ ಜಿಲ್ಲೆಯ ಹಂಸನಬಾವಿ ಗ್ರಾಮದ ಸಿದ್ಧಾರ್ಥ (24), ದೀಕ್ಷಿತ್‌ (20) ಹಾಗೂ ಸಂತೋಷ (24) ಲೈಫ್‌ಗಾರ್ಡ್‌ಗಳಿಂದ ರಕ್ಷಣೆಗೊಳಗಾದ ಪ್ರವಾಸಿಗರು. ಹಾವೇರಿ ಜಿಲ್ಲೆಯಿಂದ ಆಗಮಿಸಿದ್ದ 5 ಮಂದಿ ಯುವಕರ ತಂಡ ಧರ್ಮಸ್ಥಳ ಪ್ರಯಾಣ ಮುಗಿಸಿ ಶುಕ್ರವಾರ ಮುರ್ಡೇಶ್ವರಕ್ಕೆ ಆಗಮಿಸಿದ್ದರು. ಮುರ್ಡೇಶ್ವರ ಸಮುದ್ರದಲ್ಲಿ ಈಜಲು ಇಳಿದ ಸಂದರ್ಭದಲ್ಲಿ ಅಲೆಗಳ ಆರ್ಭಟಕ್ಕೆ ಸಿಲುಕಿ ಕೊಚ್ಚಿಕೊಂಡು ಹೋದರು. ಆ ಸಂದರ್ಭದಲ್ಲಿ ಲೈಫ್‌ಗಾರ್ಡ್‌ ಸಿಬ್ಬಂದಿ ಚಂದ್ರಶೇಖರ ದೇವಾಡಿಗ, ಜಯರಾಮ ಹಾಗೂ ಪಾಂಡು ರಕ್ಷಣೆ ಮಾಡಿ ತೀರಕ್ಕೆ ತರುವಲ್ಲಿ ಯಶಸ್ವಿಯಾಗಿದ್ದಾರೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಕೊಳಚೆ ನೀರಲ್ಲಿ ತಟ್ಟೆ ತೊಳೆದ ಪ್ರಕರಣ; ಶಿಕ್ಷಕಿ ಅಮಾನತು
ಅಲೆಮಾರಿ ಜನಾಂಗದವರು ಮಕ್ಕಳ ಶಿಕ್ಷಣಕ್ಕೆ ಒತ್ತು ನೀಡಲಿ: ಪಲ್ಲವಿ